Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅಂದು-ಇಂದು
Share:
Poems December 8, 2021 ಕೆ.ಆರ್ ಮಂಗಳಾ

ಅಂದು-ಇಂದು

ಅಂದು-
ಹೇಗೋ ಎಂತೋ
ಸುರುಸುರುಳಿಯಾಗಿ
ಬಗೆಬಗೆಯಲಿ ಪರಿಪರಿಯಲಿ
ಸುತ್ತಿಕೊಂಡಿದ್ದು-
ಮೆತ್ತಿಕೊಂಡಿದ್ದು
ಬೆಳೆಯುತ್ತಾ-ಬಲಿಯುತ್ತಾ
ನಂಟಾಗಿ- ಗಂಟಾಗಿ
ಯಮಯಾತನೆಯ ಹೊರೆಯಾಗಿ
ಮುಡಿಯೇರಿ ಭವಭಾರ
ಉಸಿರ ಹಿಸುಕಿತ್ತು.

ಇಂದು-
ಹೊರೆಗಳನು ಇಳುಹುತ್ತಾ
ಗಂಟುಗಳ ಬಿಡಿಸುತ್ತಾ
ಪೊರೆಗಳನು ಕಳಚುತ್ತಾ
ಹಗುರಾಗಿ ನವಿರಾಗಿ
ಸಾಗುತಿದೆ ನಡಿಗೆ
ಕಾಲದೊಂದಿಗೆ ಚಲನೆ…

ಗುರು ಸಿಕ್ಕು ಬೆಳಕಾಗಿ
ಗಮ್ಯತೆಯ ಅರಿವಾಗಿ
ಕೇಳುವ- ಕೆದಕುವ
ಸಂಚಿ ಬರಿದಾಗಿತ್ತು…
ನಿನ್ನೆ ಕಳೆದ ಮೇಲೆ
ನಾಳೆ ಎಂಬುದೂ ಇಲ್ಲ…
ಮಾತು ಮರೆತಾ ‘ನಾನು’
ಮಾತಿಲ್ಲದಾ ನೀನು
ಸಂಧಿಸುವ ಆ ಗಳಿಗೆ
ಬರಬಾರದೇ ಇಂದೇ?

Previous post ಬೆಳಕಲಿ ದೀಪ
ಬೆಳಕಲಿ ದೀಪ
Next post ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ

Related Posts

ಗುಟುಕು ಆಸೆ…
Share:
Poems

ಗುಟುಕು ಆಸೆ…

May 8, 2024 ಜ್ಯೋತಿಲಿಂಗಪ್ಪ
ಕಣ್ಣ ಮುಂದಣ ಬೆಳಕು ಹಿಂದಣ ನೆರಳು ಕಂಡೂ ಕಾಣವು ಈ ಕಣ್ಣಿಗೆ ನಾಚಿಕೆಯೇ ಸದ್ದು ಕಾಣಲು ಹವಣಿಸುವುದು ಸದ್ದು ಕಾಣುವುದೇ..ಕೇಳಿಸಿಕೋ ಗಗನಕ್ಕೆ ಬಯಲುಂಟೇ ಬಯಲಿಗೆ ಗಗನ ಉಂಟೇ ರಗುತದ...
ಗುರುಪಥ
Share:
Poems

ಗುರುಪಥ

January 4, 2020 ಕೆ.ಆರ್ ಮಂಗಳಾ
ಎಲ್ಲೆಲ್ಲಿಯೋ ಸುತ್ತಿ, ಎಲ್ಲೆಲ್ಲಿಯೋ ಅಲೆದು ಕಂಡಕಂಡವರನ್ನೆಲ್ಲ ಕೇಳಿ ಓದುಬಲ್ಲವರನ್ನೆಲ್ಲ ಹುಡುಕಿ ಸುಸ್ತಾದದ್ದೆ ಬಂತು, ದಾರಿ ಸಿಗಲಿಲ್ಲ ಹೇಳುವದನ್ನೆಲ್ಲ ಹಿಡಿದು...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಣ್ಣ ಪರಿಧಿ
ಕಣ್ಣ ಪರಿಧಿ
February 10, 2023
ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
October 21, 2024
ಮರೆಯಲಾಗದ ಜನಪರ ಹೋರಾಟಗಾರ
ಮರೆಯಲಾಗದ ಜನಪರ ಹೋರಾಟಗಾರ
May 10, 2023
ತೊತ್ತುಗೆಲಸವ ಮಾಡು
ತೊತ್ತುಗೆಲಸವ ಮಾಡು
June 5, 2021
ಭಾರ
ಭಾರ
October 6, 2020
ಹೆಸರಿಲ್ಲದಾ ಊರಿನ ಹಾಡು
ಹೆಸರಿಲ್ಲದಾ ಊರಿನ ಹಾಡು
May 6, 2020
ಶರಣ- ಎಂದರೆ…
ಶರಣ- ಎಂದರೆ…
March 6, 2020
ಮನವೇ ಮನವೇ…
ಮನವೇ ಮನವೇ…
May 6, 2020
ನಾನೆಂಬುದ ಅಳಿದು…
ನಾನೆಂಬುದ ಅಳಿದು…
April 6, 2023
ಲಿಂಗಾಯತ ಸ್ವತಂತ್ರ ಧರ್ಮ
ಲಿಂಗಾಯತ ಸ್ವತಂತ್ರ ಧರ್ಮ
July 10, 2023
Copyright © 2026 Bayalu