Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಈ ಕ್ಷಣದ ಸತ್ಯ
Share:
Poems March 12, 2022 ಕೆ.ಆರ್ ಮಂಗಳಾ

ಈ ಕ್ಷಣದ ಸತ್ಯ

ಧಗಧಗಿಸಿ ಮೇಲೇರುತಿಹ
ಕೆನ್ನಾಲಿಗೆಯ ಈ ಬೆಂಕಿ
ಅಡಗಿತ್ತು ಎಲ್ಲಿ?
ಮರದ ಬೊಡ್ಡೆಯಲೋ?
ಒಣಗಿದ ಸೌದೆಯಲೋ,
ಮದ್ದಗೀರಿದ ಕಡ್ಡಿಯಲ್ಲೋ,
ಊದುತಿಹ ಗಾಳಿಯಲ್ಲೋ?
ಎಲ್ಲಿಂದ ಬಂತು
ಕಣ್ಣ ಕೋರೈಸುವ ಈ ಬೆಳಕು,
ಚಕಮಕದ ಹೊಳಪು,
ಈ ಝಳದ ಧಗೆಯು?
ಆ ಬೊಡ್ಡೆ, ಆ ಒಣಗಿದೆಲೆ,
ಆ ಕಿಡಿಯ ಬೆಸುಗೆಯಲಿ
ಇತ್ತೇ ಇಂಥ ಮೋಹಕದ ಚಳಕ?

ಗಾಳಿಯಲಿ ಕೈ ಬೀಸಿ
ಬಾಚಿಕೊಳಬಹುದೇ ಶಾಖವನು
ಮುಂದಣ ಚಳಿಗೂ ಆದೀತೆಂದು?
ಗಾಜಿನ ಸೀಸೆಯೊಳಗೆ
ತುಂಬಿಕೊಳಬಹುದೇ ಬೆಳಕ
ನಾಳಿನಿರುಳಿಗೆ ಇರಲೆಂದು?
ನಿನ್ನೆಯ ಭೂತವನು
ಬೆನ್ನೇರಿಸಿಕೊಂಡ ಮನಕೆ
ಸದಾ ನಾಳೆಯದೇ ಚಿಂತೆ…

ಈ ಕ್ಷಣಕಾದರೋ
ಹಿಂದು-ಮುಂದುಗಳಿಲ್ಲ
ದಂದುಗದ ಹಂಗಿಲ್ಲ
ಇಲ್ಲೇ, ಈಗಲೇ
ಉರಿದುರಿದು ತೋರಿ,
ತೋರುತ್ತಲೇ ಮರೆಯಾಗಿ
ಕಣ್ಣ ಮುಂದಲೇ ಕರಗುತಿಹ
ಆ ಬೆಂಕಿಗೂ,
ನನ್ನೊಡಲ ಪ್ರಾಣಕ್ಕೂ
ಇಹುದೇ ಏನಾದರೂ ಅಂತರ?

Previous post ಒಳಗಣ ಮರ
ಒಳಗಣ ಮರ
Next post ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…

Related Posts

ಕಾಲ ಕಲ್ಪಿತವೇ?!
Share:
Poems

ಕಾಲ ಕಲ್ಪಿತವೇ?!

September 14, 2024 ಕೆ.ಆರ್ ಮಂಗಳಾ
ಬೊಗಸೆಯ ಬೆರಳ ಸಂದಿಯಲಿ ಸೋರಿ ಹೋಗುವ ನೀರಂತೆ… ಕಣ್ಮುಂದೆ, ಕಾಲಡಿಯೇ ಕ್ಷಣಕ್ಷಣವೂ ನೀ ಹರಿದು ಹೋಗುತಿರುವೆ ಕಾಲಬುಡದಲ್ಲೇ ಇರುವೆ ಕಣ್ಣಳತೆಯಲ್ಲೇ ಸರಿಯುತ್ತಿರುವೆ ಅದೇಕೆ...
ನಾನೆಲ್ಲಿ ಇದ್ದೆ?
Share:
Poems

ನಾನೆಲ್ಲಿ ಇದ್ದೆ?

April 29, 2018 ಕೆ.ಆರ್ ಮಂಗಳಾ
ಶರಧಿ ಭೂಮಿಯ ನುಂಗಿ ಸೂರ್ಯ ಶರಧಿಯ ನುಂಗಿ ಆಗಸ ಸೂರ್ಯನ ನುಂಗಿ ವಾಯು ಆಗಸ ನುಂಗಿ ಎಲ್ಲ ಎಲ್ಲವ ನುಂಗಿ ನೊಣೆಯುವಾಗ ನಾನೆಲ್ಲಿ ಅಡಗಿದ್ದೆ? ಬಾಲ್ಯ ಭ್ರೂಣವ ನುಂಗಿ ಹರಯ ಬಾಲ್ಯವ...

Comments 1

  1. Andanappa
    Mar 23, 2022 Reply

    ಬೆಂಕಿಗೂ ಪ್ರಾಣಕ್ಕೂ ಮೂಲಸಂಬಂಧ ಯಾವುದು? ಇದೇ ನಿರಂತರ ಹುಡುಕುವಿಕೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾನು… ನನ್ನದು
ನಾನು… ನನ್ನದು
July 4, 2021
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
October 2, 2018
ಗುರು ಲಿಂಗ ಜಂಗಮ…
ಗುರು ಲಿಂಗ ಜಂಗಮ…
February 10, 2023
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು
June 12, 2025
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
September 10, 2022
ನನ್ನೆದುರು ನಾ…
ನನ್ನೆದುರು ನಾ…
March 6, 2024
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
July 5, 2019
Copyright © 2025 Bayalu