Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಿನ್ನೆ-ಇಂದು
Share:
Poems May 10, 2022 ಕೆ.ಆರ್ ಮಂಗಳಾ

ನಿನ್ನೆ-ಇಂದು

ನಿನ್ನೆ-

ಬೆಳಗ ಕಾಣದ ಮಸುಕು
ಚಿತ್ತದ ಜಾಡ್ಯ, ಮರೆವಿನ ಬಾಧೆ
ಬೆಂಬಿಡದ ಕಾಮನೆಗಳಲಿ
ಬಂಧಿಯಾಗಿದೆ ಜೀವ
ಬಿಡಿಸು ಗುರುವೆ ಇದರ ಪ್ರವರ…

ಇಂದು-

ಬೆಳಕ ಕೊಡುತಿಹ ಆ ದೀಪ
ಯಾವುದಕೆ ಅಂಟಿದೆ?
ಹಣತೆಗೋ, ಬತ್ತಿಗೋ,
ಎಣ್ಣೆಗೋ, ಗಾಳಿಗೋ…
ಇಲ್ಲಾ ನೋಡುವ ಕಣ್ಣ ಪಾಪೆಗೋ?

ಈ ಪ್ರಾಣ ಅದಾವುದಕೆ
ಅಂಟಿಕೊಂಡಿದೆ…
ದೇಹಕ್ಕೋ, ಉಸಿರಿಗೋ,
ನೀರಿಗೋ, ಸೇವಿಸುವ ಆಹಾರಕೋ
ಇಲ್ಲಾ ಒಳಗಣ ಪರಿಕರಗಳಿಗೋ…?

ಆ ಬೆಳಕಿನಂತೆ
ಈ ಪ್ರಾಣಕ್ಕೂ ಅಂಟಿಗೂ ಯಾವ ನಂಟೂ ಇಲ್ಲ…

ದೀಪ ಹಣತೆಯಲ್ಲಿ
ಜೀವ ದೇಹದಲ್ಲಿ
ಬಂಧಿಗಳೇ ಅಲ್ಲಾ!
ಅದು ಉರಿಯುತಲೇ ಬೆಳಗುವ…
ಇದು ಆಗುತಲೇ ಜೀವಿಸುವ…
ಸಹಜ ಪ್ರಕೃತಿಯ ಸೊಬಗು!
ಆಹಾ! ಎಂತಹ ಬೆಡಗು!!

Previous post ಸಂತೆಯೊಳಗಿನ ಧ್ಯಾನ
ಸಂತೆಯೊಳಗಿನ ಧ್ಯಾನ
Next post ಹಿರಿಯರ ಹಾದಿ…
ಹಿರಿಯರ ಹಾದಿ…

Related Posts

ತುತ್ತೂರಿ…
Share:
Poems

ತುತ್ತೂರಿ…

June 10, 2023 ಕೆ.ಆರ್ ಮಂಗಳಾ
ತುತ್ತೂರಿ ತುತ್ತೂರಿ ಯಾಕೆ ಇಂತಹ ಪಿತೂರಿ? ಯಾವುದೇ ಮಾತಲೂ ನಿನ್ನದೇ ರಾಗ ಯಾವುದೇ ಭಾವಕೂ ನಿನ್ನದೇ ತಾಳ ಬಾಯಿಬಿಟ್ಟರೂ ನಿನ್ನದೇ ಗಾನ ಮೌನದಲಿದ್ದರೂ ನಿನ್ನದೇ ಧ್ಯಾನ...
ಮಾಯದ ಗಾಯ
Share:
Poems

ಮಾಯದ ಗಾಯ

October 19, 2025 ಜ್ಯೋತಿಲಿಂಗಪ್ಪ
ಯಾವಾಗ ಮಳೆ ಬರುವುದೋ ಕಾಯುವ ಆ ದಿನ ಯಾವಾಗ ಮಳೆ ನಿಲ್ಲುವುದೋ ಕಾಯುವ ಈ ದಿನ ದಿನಾ ಕಾಯುವ ಈ ದಿನಕರ ತೋಯಗಳಲಿ ತುಯ್ಯಲಾಟ ಘನವ ನಾನೇನು ಬಲ್ಲೆ ಗೂಡು ಕಟ್ಟಿದ ಹಕ್ಕಿ ಅಂಗಣದಲಿ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅರಿವಿಗೆ ಬಂದ ಆರು ಸ್ಥಲಗಳು
ಅರಿವಿಗೆ ಬಂದ ಆರು ಸ್ಥಲಗಳು
August 11, 2025
ಗಜಲ್…
ಗಜಲ್…
February 16, 2026
ಜಗವ ಸುತ್ತಿಪ್ಪುದು ನಿನ್ನ ಮಾಯೆ…
ಜಗವ ಸುತ್ತಿಪ್ಪುದು ನಿನ್ನ ಮಾಯೆ…
April 29, 2018
ಬಯಲುಡುಗೆಯ ಬೊಂತಾದೇವಿ
ಬಯಲುಡುಗೆಯ ಬೊಂತಾದೇವಿ
February 6, 2019
ಗುರುವೆ ಸುಜ್ಞಾನವೇ…
ಗುರುವೆ ಸುಜ್ಞಾನವೇ…
September 7, 2021
ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…
July 4, 2022
ಮಿಂಚೊಂದು ಬಂತು ಹೀಗೆ…
ಮಿಂಚೊಂದು ಬಂತು ಹೀಗೆ…
August 6, 2022
ನಾನುವಿನ ಉಪಟಳ
ನಾನುವಿನ ಉಪಟಳ
December 13, 2024
ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ
March 17, 2021
ಶರಣ- ಎಂದರೆ…
ಶರಣ- ಎಂದರೆ…
March 6, 2020
Copyright © 2026 Bayalu