Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆಸರೆ
Share:
Poems August 6, 2022 ಜ್ಯೋತಿಲಿಂಗಪ್ಪ

ಆಸರೆ

ಅರಿವಿನ
ಮನೆಯ ಮುಂದೆ ನಿಂತು
ಭಿಕ್ಷೆ
ಬೇಡುತಿರುವೆ ನಿಂತು ನೀಡುವರು
ಯಾರು
ಮನೆ ಖಾಲಿ

ಅರಿಯದೆ ಅರಿವು ನಿಲ್ಲದು

ಊರ
ಹೊರಗೆ ನಿಂತು
ಒಳಗೆ
ಹೋಗುವ ದಾರಿ ಕೇಳುತಿರುವೆ
ಹೇಳರು.

ಗಾಳಿಯ ಸದ್ದು
ಮಣ್ಣಿನ ವಾಸನೆ
ನೀರ ನಿನಾದ
ಬಯಲ ಮೋಹ

ಅರಿವಿನ ಕನ್ನಡಿಯಲಿ ಬಿಂಬ

ಊರ ಒಳ ಹೊರಗು

ಬಯಲಿನಲಿ ಏನುಂಟು
ಏನಿಲ್ಲ ಎಲ್ಲವೂ ಖಾಲಿ

ಅಂಗಣ
ಒಳಗೊಂದು ನೀರ ಹೆಜ್ಜೆ.

*** ***

ಈ
ನೆಲದ ಹಾಸಿಗೆ ನನದಲ್ಲ
ಆಗಸದ ಹೊದಿಕೆ ನನದಲ್ಲ
ಹಸಿದು ಉಣ್ಣುವ ಉಣ್ಣೂ ನನದಲ್ಲ

ನನ್ನದೆನ್ನುವುದೇನಿದೆ ನಾನು
‘ನಾನೂ’ ನನದಲ್ಲ
ಈ ‘ಅರಿವು’ ಬಾರದೇ ಇರದು

ಆಸರೆಗೆ ಗೋಡೆ ಮಾಡುಗಳಿಲ್ಲದ
ಬಯಲು ಧರ್ಮ ಇದೆ

ಇರು ಇನ್ನೆರಡು ದಿನ
ತೊಗಲರಿದು ಇಲ್ಲವಾಗುವೆ
ನಾನೇನೆಂದರಿಯುವೆ ಕೊಡಹು ಜೋಳಿಗೆ

ಈಗಷ್ಟೇ ದಾರಿ ಬದಿಯ ಮರಗಳಲಿ
ಚೆರ್ರೀ ಹೂಗಳು ಅರಳಿವೆ
ನೋಡು

ಯಾವ ದಾರಿಯೂ ತೆರೆಯದು.

Previous post ಮನುಷ್ಯತ್ವ ಮರೆಯಾಗದಿರಲಿ
ಮನುಷ್ಯತ್ವ ಮರೆಯಾಗದಿರಲಿ
Next post ಹುಚ್ಚು ಖೋಡಿ ಮನಸು
ಹುಚ್ಚು ಖೋಡಿ ಮನಸು

Related Posts

ನಾನೆಲ್ಲಿ ಇದ್ದೆ?
Share:
Poems

ನಾನೆಲ್ಲಿ ಇದ್ದೆ?

April 29, 2018 ಕೆ.ಆರ್ ಮಂಗಳಾ
ಶರಧಿ ಭೂಮಿಯ ನುಂಗಿ ಸೂರ್ಯ ಶರಧಿಯ ನುಂಗಿ ಆಗಸ ಸೂರ್ಯನ ನುಂಗಿ ವಾಯು ಆಗಸ ನುಂಗಿ ಎಲ್ಲ ಎಲ್ಲವ ನುಂಗಿ ನೊಣೆಯುವಾಗ ನಾನೆಲ್ಲಿ ಅಡಗಿದ್ದೆ? ಬಾಲ್ಯ ಭ್ರೂಣವ ನುಂಗಿ ಹರಯ ಬಾಲ್ಯವ...
ಒಂದು ತೊಟ್ಟು ಬೆಳಕು
Share:
Poems

ಒಂದು ತೊಟ್ಟು ಬೆಳಕು

February 7, 2021 ಜ್ಯೋತಿಲಿಂಗಪ್ಪ
ಈ ಕತ್ತಲು ಒಂದು ತೊಟ್ಟು ಬೆಳಕು ಕುಡಿಯಿತು ಅಮಲೇರಿದೆ ಗಾಳಿ ಪಾಲು ಮುಂದಣ ಗೆರೆ ಹಿಂದಕೂ ತಾಗಿದೆ ಪರಿಧಿಯ ಬಿಂದು ತನ್ನ ಇಚ್ಛೆಯನರಿಯದು ಸುತ್ತುವುದು ಬಯಲು ಎಂಬುದೇನು ಬಯಲು ಏನೂ...

Comments 1

  1. Vinayak Narasapura
    Aug 8, 2022 Reply

    ಅರಿವಿನ ಭಿಕ್ಷೆಯ ಕವನ ಮನಮುಟ್ಟುವಂತಿದೆ. ಕವಿತೆಯ ಹಲವಾರು ಸಾಲುಗಳು ಮತ್ತೆ ಮತ್ತೆ ಓದಿಸಿಕೊಂಡವು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮನಕ್ಕೆ ಮನ ಸಾಕ್ಷಿಯಾಗಿ…
ಮನಕ್ಕೆ ಮನ ಸಾಕ್ಷಿಯಾಗಿ…
October 2, 2018
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
February 11, 2022
ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
November 7, 2020
ಎರವಲು ಮನೆ…
ಎರವಲು ಮನೆ…
August 10, 2023
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
August 2, 2019
ಸತ್ಯ, ಪರೋಪಕಾರ, ಬ್ರಹ್ಮಚರ್ಯ
ಸತ್ಯ, ಪರೋಪಕಾರ, ಬ್ರಹ್ಮಚರ್ಯ
February 6, 2025
ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…
July 10, 2023
ಪರಿಪೂರ್ಣತೆಯೆಡೆಗೆ ಪಯಣ
ಪರಿಪೂರ್ಣತೆಯೆಡೆಗೆ ಪಯಣ
April 29, 2018
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
Copyright © 2026 Bayalu