Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆಸರೆ
Share:
Poems August 6, 2022 ಜ್ಯೋತಿಲಿಂಗಪ್ಪ

ಆಸರೆ

ಅರಿವಿನ
ಮನೆಯ ಮುಂದೆ ನಿಂತು
ಭಿಕ್ಷೆ
ಬೇಡುತಿರುವೆ ನಿಂತು ನೀಡುವರು
ಯಾರು
ಮನೆ ಖಾಲಿ

ಅರಿಯದೆ ಅರಿವು ನಿಲ್ಲದು

ಊರ
ಹೊರಗೆ ನಿಂತು
ಒಳಗೆ
ಹೋಗುವ ದಾರಿ ಕೇಳುತಿರುವೆ
ಹೇಳರು.

ಗಾಳಿಯ ಸದ್ದು
ಮಣ್ಣಿನ ವಾಸನೆ
ನೀರ ನಿನಾದ
ಬಯಲ ಮೋಹ

ಅರಿವಿನ ಕನ್ನಡಿಯಲಿ ಬಿಂಬ

ಊರ ಒಳ ಹೊರಗು

ಬಯಲಿನಲಿ ಏನುಂಟು
ಏನಿಲ್ಲ ಎಲ್ಲವೂ ಖಾಲಿ

ಅಂಗಣ
ಒಳಗೊಂದು ನೀರ ಹೆಜ್ಜೆ.

*** ***

ಈ
ನೆಲದ ಹಾಸಿಗೆ ನನದಲ್ಲ
ಆಗಸದ ಹೊದಿಕೆ ನನದಲ್ಲ
ಹಸಿದು ಉಣ್ಣುವ ಉಣ್ಣೂ ನನದಲ್ಲ

ನನ್ನದೆನ್ನುವುದೇನಿದೆ ನಾನು
‘ನಾನೂ’ ನನದಲ್ಲ
ಈ ‘ಅರಿವು’ ಬಾರದೇ ಇರದು

ಆಸರೆಗೆ ಗೋಡೆ ಮಾಡುಗಳಿಲ್ಲದ
ಬಯಲು ಧರ್ಮ ಇದೆ

ಇರು ಇನ್ನೆರಡು ದಿನ
ತೊಗಲರಿದು ಇಲ್ಲವಾಗುವೆ
ನಾನೇನೆಂದರಿಯುವೆ ಕೊಡಹು ಜೋಳಿಗೆ

ಈಗಷ್ಟೇ ದಾರಿ ಬದಿಯ ಮರಗಳಲಿ
ಚೆರ್ರೀ ಹೂಗಳು ಅರಳಿವೆ
ನೋಡು

ಯಾವ ದಾರಿಯೂ ತೆರೆಯದು.

Previous post ಮನುಷ್ಯತ್ವ ಮರೆಯಾಗದಿರಲಿ
ಮನುಷ್ಯತ್ವ ಮರೆಯಾಗದಿರಲಿ
Next post ಹುಚ್ಚು ಖೋಡಿ ಮನಸು
ಹುಚ್ಚು ಖೋಡಿ ಮನಸು

Related Posts

ಕಾಲ ಎಲ್ಲಿದೆ?
Share:
Poems

ಕಾಲ ಎಲ್ಲಿದೆ?

January 7, 2022 ಕೆ.ಆರ್ ಮಂಗಳಾ
ಎಲ್ಲವನೂ… ಎಲ್ಲರನೂ… ಮಣಿಸುತಾ, ಬಾಗಿಸುತಾ ಕಾಣಿಸುತಾ, ಕಣ್ಮರೆಯಾಗಿಸುತಾ ತಾನೇ ಅಂತಿಮವೆನುವ ಮಾಯಾವಿ ಕಾಲಕ್ಕೆ ಇದೆಯೇ ಅಸ್ತಿತ್ವ? ಉರುಳುರುಳಿ ಹೊರಳುತಿಹ ಭುವಿಯ ಚಲನೆಯಲಿ ನಮ್ಮ...
ಕಣ್ಣ ಪರಿಧಿ
Share:
Poems

ಕಣ್ಣ ಪರಿಧಿ

February 10, 2023 ಜ್ಯೋತಿಲಿಂಗಪ್ಪ
ಕಣ್ಣ ಬಿಚ್ಚಿ ಕಾಣುವುದು ಏನು ಏನೂ ಇಲ್ಲ ಕಣ್ಣ ಮುಚ್ಚಿ ಕಾಣುವುದು ಏನು ಏನೂ ಇಲ್ಲ ಕಣ್ಣ ಒಳಗ ಕಾಣುವುದು ಕಾಣು ಕಾಣು ಕಾಣು ಏನು ಏನೂ ಇಲ್ಲ ಕಣ್ಣ ಪರದೆಯ ದಾಟಿ ಹೋದವರು ಯಾರು...

Comments 1

  1. Vinayak Narasapura
    Aug 8, 2022 Reply

    ಅರಿವಿನ ಭಿಕ್ಷೆಯ ಕವನ ಮನಮುಟ್ಟುವಂತಿದೆ. ಕವಿತೆಯ ಹಲವಾರು ಸಾಲುಗಳು ಮತ್ತೆ ಮತ್ತೆ ಓದಿಸಿಕೊಂಡವು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
ದೂಷಕರ ಧೂಮಕೇತು
ದೂಷಕರ ಧೂಮಕೇತು
August 8, 2021
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
October 6, 2020
ಧರ್ಮದ ಹೋರಾಟ ಗುಣಾತ್ಮಕವಾಗಿರಲಿ
ಧರ್ಮದ ಹೋರಾಟ ಗುಣಾತ್ಮಕವಾಗಿರಲಿ
April 29, 2018
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
July 10, 2025
ಗಮ್ಯದೆಡೆಗೆ ಗಮನ
ಗಮ್ಯದೆಡೆಗೆ ಗಮನ
July 5, 2019
ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…
May 10, 2022
ದಂಪತಿಗಳಲ್ಲಿ ಅನುಭಾವ ಚಿಂತನ
ದಂಪತಿಗಳಲ್ಲಿ ಅನುಭಾವ ಚಿಂತನ
March 12, 2022
ಸ್ತ್ರೀ ಸ್ವಾತಂತ್ರ್ಯ ಕುರಿತು…
ಸ್ತ್ರೀ ಸ್ವಾತಂತ್ರ್ಯ ಕುರಿತು…
April 29, 2018
ಬಯಲಾದ ದೇವರು
ಬಯಲಾದ ದೇವರು
January 15, 2026
Copyright © 2026 Bayalu