Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಚ್ಚು ಖೋಡಿ ಮನಸು
Share:
Poems August 6, 2022 ಕೆ.ಆರ್ ಮಂಗಳಾ

ಹುಚ್ಚು ಖೋಡಿ ಮನಸು

ಕಪ್ಪು ಕೌದಿಯ ಹೊದ್ದು
ತನ್ನ ಬಣ್ಣವನೇ ಮರೆತು
ಮಲಗಿಬಿಟ್ಟಿದೆ ನೀಲಿಯಾಗಸ
ಒಳ-ಹೊರಗು ಮಬ್ಬಾಯ್ತು…
ಕತ್ತಲೆಯ ನಂಜೇರಿ
ಕಣ್ಣು ಹರಿಸಿದುದ್ದಕ್ಕೂ
ಎಲ್ಲೆಲ್ಲೂ ಮಸುಕು
ನಿಂತಲ್ಲೇ ಯುಗಯುಗಕು ನಿಂತು
ಜೋಮುಗಟ್ಟಿತು ಕಾಲು
ನಡೆಯ ಮರೆತು…

ಮೇಘಗಳ ಆರ್ಭಟದಲಿ
ಆಗೀಗ ಸಿಡಿಯುತಿದೆ
ಮಿಂಚು-ಗುಡುಗು
ಕೊರೆವ ಚಳಿಯಲ್ಲೂ
ಬಿಟ್ಟ ನಿಟ್ಟುಸಿರ ಬಿಸಿ ಹಬೆಯು
ಸುರುಳಿಸುರುಳಿಯಾಗಿ
ಮೇಲೆ ಸರಿದು ಹೋಗುತಿದೆ…

ಎಡಬಿಡದೆ ಸುರಿಯುತಿಹ
ಮಳೆಯ ಹನಿಗಳಾ ಹಿಡಿದು
ಮುಗಿಲನೇರುವ ಕಿಚ್ಚು…
ಹಾಡುಹಗಲೇ ಕಾಣೆಯಾದ
ರವಿಯ ಹುಡುಕಿ ತರುವಾ ಹುಚ್ಚು
ಕಲ್ಪನೆಯ ಕುದುರೆಗೆ
ಎಣೆಯುಂಟೆ? ಕೊನೆವುಂಟೆ?
ನಿಜದತ್ತ ನಡೆಸುವ ಶಕ್ತಿಯುಂಟೆ?

ದೇಹ ಕಾವನು ಕಾಪಿಟ್ಟ ಜೀವಕೆ
ಎಲ್ಲಿಂದ ಬಂತಿದು
ಗಗನ ತಡಕುವ ಕನಸು!?
ನಿನ್ನೊಳಗೆ ನಿನ್ನಲ್ಲೇ
ಇಳಿದು ನೋಡೆಂದು
ತಲೆಗೆ ಮೊಟಕಿದ ಗುರು ಬೆನ್ನ ಬಳಿ ನಿಂತು

ಒಳಗಿದ್ದರೂ ಒಳಗ ನೋಡದೇ
ಹೊರಗೆ ಸುತ್ತುವ ಚಟ
ಭ್ರಮೆ ಬಿಡದ ಹಟ
ಮನಕಂಟಿ ಕಾಲಗಳೇ ಸರಿದವು…
ಗುರು ಕೊಟ್ಟ ಸುಳಿವುಗಳು
ಸಿಕ್ಕು ಕಣ್ಮರೆಯಾಗಿ ಕಾಡುತಿಹವು
ದೌರ್ಬಲ್ಯವೆನಲೇ, ಸೋಲೆನಲೆ
ಗೊಂದಲಗಳ ಬೀಡೆನಲೇ?
ಗೊತ್ತು ಗುರಿಯಿಲ್ಲದೆ ಅಲೆವ
ತುಂಡು ಮೋಡದ ತೆರದಿ
ತಳಮಳಿಸುತಿದೆ ಎದೆಯು
ಎಂದಿಗೋ ಎಂದಿಗೋ…
ನನ್ನಿರಿವಿನ ಅರಿವನರಿಯುವ ಗಳಿಗೆ
ಒದಗಿ ಬರುವುದೆಂದಿಗೋ…?

Previous post ಆಸರೆ
ಆಸರೆ
Next post ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ

Related Posts

ಹಾಯ್ಕು
Share:
Poems

ಹಾಯ್ಕು

September 6, 2023 ಜ್ಯೋತಿಲಿಂಗಪ್ಪ
೦೧ ದೀಪ ಹಿಡಿದು ಇರುಳು ಆ ನಕ್ಷತ್ರ ಹುಡುಕಲುಂಟೇ… ೦೨ ಮದವೇ ಮದ್ಯ ಮದ ಏರಿದ ಅಷ್ಟೂ ಮತ್ತು ಏರಿತು. ೦೩ ಸಾವು ಎಂಬುದು ಕೊಬ್ಬಿನ ಮಾತು ಅಲ್ಲಾ ಮೆಲ್ಲ ಮಾತಾಡು. ೦೪...
WHO AM I?
Share:
Poems

WHO AM I?

June 17, 2020 Chittara K. V
I have a wide brain And a open mind I think a lot at times But I come to a point To ask myself- Who am I? I swallow the pain But speak with the...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅನುಭವ ಮಂಟಪದ ವಿನ್ಯಾಸ…
ಅನುಭವ ಮಂಟಪದ ವಿನ್ಯಾಸ…
February 16, 2026
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ಈ ಕನ್ನಡಿ
ಈ ಕನ್ನಡಿ
March 6, 2024
ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
August 11, 2025
ನಾಥರು ಮತ್ತು ಶರಣರು-2
ನಾಥರು ಮತ್ತು ಶರಣರು-2
April 5, 2026
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
ಅಪರೂಪದ ಸಂಶೋಧಕ: ಅಣಜಿಗಿ ಗೌಡಪ್ಪ ಸಾಧು
January 8, 2023
ಕೊಂಡಗುಳಿ ಕೇಶಿರಾಜ ಮತ್ತು…
ಕೊಂಡಗುಳಿ ಕೇಶಿರಾಜ ಮತ್ತು…
April 6, 2020
ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ
September 6, 2023
ಆಗು ಕನ್ನಡಿಯಂತೆ…
ಆಗು ಕನ್ನಡಿಯಂತೆ…
September 13, 2025
ಅಷ್ಟವಿಧಾರ್ಚನೆ – ಷೋಡಶೋಪಚಾರ
ಅಷ್ಟವಿಧಾರ್ಚನೆ – ಷೋಡಶೋಪಚಾರ
November 1, 2018
Copyright © 2026 Bayalu