Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಚ್ಚು ಖೋಡಿ ಮನಸು
Share:
Poems August 6, 2022 ಕೆ.ಆರ್ ಮಂಗಳಾ

ಹುಚ್ಚು ಖೋಡಿ ಮನಸು

ಕಪ್ಪು ಕೌದಿಯ ಹೊದ್ದು
ತನ್ನ ಬಣ್ಣವನೇ ಮರೆತು
ಮಲಗಿಬಿಟ್ಟಿದೆ ನೀಲಿಯಾಗಸ
ಒಳ-ಹೊರಗು ಮಬ್ಬಾಯ್ತು…
ಕತ್ತಲೆಯ ನಂಜೇರಿ
ಕಣ್ಣು ಹರಿಸಿದುದ್ದಕ್ಕೂ
ಎಲ್ಲೆಲ್ಲೂ ಮಸುಕು
ನಿಂತಲ್ಲೇ ಯುಗಯುಗಕು ನಿಂತು
ಜೋಮುಗಟ್ಟಿತು ಕಾಲು
ನಡೆಯ ಮರೆತು…

ಮೇಘಗಳ ಆರ್ಭಟದಲಿ
ಆಗೀಗ ಸಿಡಿಯುತಿದೆ
ಮಿಂಚು-ಗುಡುಗು
ಕೊರೆವ ಚಳಿಯಲ್ಲೂ
ಬಿಟ್ಟ ನಿಟ್ಟುಸಿರ ಬಿಸಿ ಹಬೆಯು
ಸುರುಳಿಸುರುಳಿಯಾಗಿ
ಮೇಲೆ ಸರಿದು ಹೋಗುತಿದೆ…

ಎಡಬಿಡದೆ ಸುರಿಯುತಿಹ
ಮಳೆಯ ಹನಿಗಳಾ ಹಿಡಿದು
ಮುಗಿಲನೇರುವ ಕಿಚ್ಚು…
ಹಾಡುಹಗಲೇ ಕಾಣೆಯಾದ
ರವಿಯ ಹುಡುಕಿ ತರುವಾ ಹುಚ್ಚು
ಕಲ್ಪನೆಯ ಕುದುರೆಗೆ
ಎಣೆಯುಂಟೆ? ಕೊನೆವುಂಟೆ?
ನಿಜದತ್ತ ನಡೆಸುವ ಶಕ್ತಿಯುಂಟೆ?

ದೇಹ ಕಾವನು ಕಾಪಿಟ್ಟ ಜೀವಕೆ
ಎಲ್ಲಿಂದ ಬಂತಿದು
ಗಗನ ತಡಕುವ ಕನಸು!?
ನಿನ್ನೊಳಗೆ ನಿನ್ನಲ್ಲೇ
ಇಳಿದು ನೋಡೆಂದು
ತಲೆಗೆ ಮೊಟಕಿದ ಗುರು ಬೆನ್ನ ಬಳಿ ನಿಂತು

ಒಳಗಿದ್ದರೂ ಒಳಗ ನೋಡದೇ
ಹೊರಗೆ ಸುತ್ತುವ ಚಟ
ಭ್ರಮೆ ಬಿಡದ ಹಟ
ಮನಕಂಟಿ ಕಾಲಗಳೇ ಸರಿದವು…
ಗುರು ಕೊಟ್ಟ ಸುಳಿವುಗಳು
ಸಿಕ್ಕು ಕಣ್ಮರೆಯಾಗಿ ಕಾಡುತಿಹವು
ದೌರ್ಬಲ್ಯವೆನಲೇ, ಸೋಲೆನಲೆ
ಗೊಂದಲಗಳ ಬೀಡೆನಲೇ?
ಗೊತ್ತು ಗುರಿಯಿಲ್ಲದೆ ಅಲೆವ
ತುಂಡು ಮೋಡದ ತೆರದಿ
ತಳಮಳಿಸುತಿದೆ ಎದೆಯು
ಎಂದಿಗೋ ಎಂದಿಗೋ…
ನನ್ನಿರಿವಿನ ಅರಿವನರಿಯುವ ಗಳಿಗೆ
ಒದಗಿ ಬರುವುದೆಂದಿಗೋ…?

Previous post ಆಸರೆ
ಆಸರೆ
Next post ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ

Related Posts

ನಾನರಿಯದ ಬಯಲು
Share:
Poems

ನಾನರಿಯದ ಬಯಲು

April 9, 2021 ಜ್ಯೋತಿಲಿಂಗಪ್ಪ
ಈ ಬಯಲಿಗೆ ಎಷ್ಟು ಮುಖವಯ್ಯಾ ಇರುವ ಮುಖದ ಇರವ ನಾನರಿಯೆ ಇರದ ಮುಖದ ಇರವನೂ ನಾನರಿಯೆ ನಾನರಿಯದೆ ಮುಖ ಇರುವುದೆಲ್ಲಿ ಇರದ ಬಯಲೊಳು ಇರವು ಇರದು ಅರಿವಿನೊಳು ಇರವು ಇರುವುದು ಅರಿ...
ಒಳಗಣ ಮರ
Share:
Poems

ಒಳಗಣ ಮರ

March 12, 2022 ಜ್ಯೋತಿಲಿಂಗಪ್ಪ
ಈ ಪದ ಏನು ನಿಜ ಹೇಳುತ್ತಾ ನಿಜ ಹೇಳುವುದು ಅಲ್ಲಾ ಕಾಣುವುದು ಅಲ್ಲಾ ಕೇಳುವುದು ಅಲ್ಲಾ ಅನುಭಾವಿಸುವುದು ಭಾವದಲಿ ಆನು ನಿಜವಾಗುವುದು ಈ ಪದ ಅರ್ಥದಲಿ ಏನಿದೆಯೋ ಅಕ್ಷರ ಬಲ್ಲವರು...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಸವನಾ ಯೋಗದಿಂ…
ಬಸವನಾ ಯೋಗದಿಂ…
July 1, 2018
ತತ್ವಪದಗಳ ಗಾಯನ ಪರಂಪರೆ
ತತ್ವಪದಗಳ ಗಾಯನ ಪರಂಪರೆ
February 7, 2021
ಶಿವಾಚಾರ
ಶಿವಾಚಾರ
April 9, 2021
ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
September 14, 2024
ಮೈಸೂರು ಜನಗಣತಿ (ಭಾಗ-3)
ಮೈಸೂರು ಜನಗಣತಿ (ಭಾಗ-3)
May 10, 2023
ನಾನೆಲ್ಲಿ ಇದ್ದೆ?
ನಾನೆಲ್ಲಿ ಇದ್ದೆ?
April 29, 2018
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ಕರ್ತಾರನ ಕಮ್ಮಟ  ಭಾಗ-6
ಕರ್ತಾರನ ಕಮ್ಮಟ ಭಾಗ-6
December 22, 2019
ಶಿವಮಯ-ಶಿವೇತರ ಗುಣಗಳು
ಶಿವಮಯ-ಶಿವೇತರ ಗುಣಗಳು
January 4, 2020
ಲಿಂಗದ ಹಂಗೇ…
ಲಿಂಗದ ಹಂಗೇ…
September 10, 2022
Copyright © 2025 Bayalu