Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಚ್ಚು ಖೋಡಿ ಮನಸು
Share:
Poems August 6, 2022 ಕೆ.ಆರ್ ಮಂಗಳಾ

ಹುಚ್ಚು ಖೋಡಿ ಮನಸು

ಕಪ್ಪು ಕೌದಿಯ ಹೊದ್ದು
ತನ್ನ ಬಣ್ಣವನೇ ಮರೆತು
ಮಲಗಿಬಿಟ್ಟಿದೆ ನೀಲಿಯಾಗಸ
ಒಳ-ಹೊರಗು ಮಬ್ಬಾಯ್ತು…
ಕತ್ತಲೆಯ ನಂಜೇರಿ
ಕಣ್ಣು ಹರಿಸಿದುದ್ದಕ್ಕೂ
ಎಲ್ಲೆಲ್ಲೂ ಮಸುಕು
ನಿಂತಲ್ಲೇ ಯುಗಯುಗಕು ನಿಂತು
ಜೋಮುಗಟ್ಟಿತು ಕಾಲು
ನಡೆಯ ಮರೆತು…

ಮೇಘಗಳ ಆರ್ಭಟದಲಿ
ಆಗೀಗ ಸಿಡಿಯುತಿದೆ
ಮಿಂಚು-ಗುಡುಗು
ಕೊರೆವ ಚಳಿಯಲ್ಲೂ
ಬಿಟ್ಟ ನಿಟ್ಟುಸಿರ ಬಿಸಿ ಹಬೆಯು
ಸುರುಳಿಸುರುಳಿಯಾಗಿ
ಮೇಲೆ ಸರಿದು ಹೋಗುತಿದೆ…

ಎಡಬಿಡದೆ ಸುರಿಯುತಿಹ
ಮಳೆಯ ಹನಿಗಳಾ ಹಿಡಿದು
ಮುಗಿಲನೇರುವ ಕಿಚ್ಚು…
ಹಾಡುಹಗಲೇ ಕಾಣೆಯಾದ
ರವಿಯ ಹುಡುಕಿ ತರುವಾ ಹುಚ್ಚು
ಕಲ್ಪನೆಯ ಕುದುರೆಗೆ
ಎಣೆಯುಂಟೆ? ಕೊನೆವುಂಟೆ?
ನಿಜದತ್ತ ನಡೆಸುವ ಶಕ್ತಿಯುಂಟೆ?

ದೇಹ ಕಾವನು ಕಾಪಿಟ್ಟ ಜೀವಕೆ
ಎಲ್ಲಿಂದ ಬಂತಿದು
ಗಗನ ತಡಕುವ ಕನಸು!?
ನಿನ್ನೊಳಗೆ ನಿನ್ನಲ್ಲೇ
ಇಳಿದು ನೋಡೆಂದು
ತಲೆಗೆ ಮೊಟಕಿದ ಗುರು ಬೆನ್ನ ಬಳಿ ನಿಂತು

ಒಳಗಿದ್ದರೂ ಒಳಗ ನೋಡದೇ
ಹೊರಗೆ ಸುತ್ತುವ ಚಟ
ಭ್ರಮೆ ಬಿಡದ ಹಟ
ಮನಕಂಟಿ ಕಾಲಗಳೇ ಸರಿದವು…
ಗುರು ಕೊಟ್ಟ ಸುಳಿವುಗಳು
ಸಿಕ್ಕು ಕಣ್ಮರೆಯಾಗಿ ಕಾಡುತಿಹವು
ದೌರ್ಬಲ್ಯವೆನಲೇ, ಸೋಲೆನಲೆ
ಗೊಂದಲಗಳ ಬೀಡೆನಲೇ?
ಗೊತ್ತು ಗುರಿಯಿಲ್ಲದೆ ಅಲೆವ
ತುಂಡು ಮೋಡದ ತೆರದಿ
ತಳಮಳಿಸುತಿದೆ ಎದೆಯು
ಎಂದಿಗೋ ಎಂದಿಗೋ…
ನನ್ನಿರಿವಿನ ಅರಿವನರಿಯುವ ಗಳಿಗೆ
ಒದಗಿ ಬರುವುದೆಂದಿಗೋ…?

Previous post ಆಸರೆ
ಆಸರೆ
Next post ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ

Related Posts

ಗೇಣು ದಾರಿ
Share:
Poems

ಗೇಣು ದಾರಿ

July 10, 2023 ಜ್ಯೋತಿಲಿಂಗಪ್ಪ
ಮುಂದಿನ ಕಾಲು ಹಿಂದಕೆ ಬಾರದೇ ಹಿಂದಿನ ಕಾಲು ಮುಂದಕೆ ಬಾರದೇ ಹಿಂದು ಮುಂದು ಸಂತೆ ದಾರಿ ತನ್ನರಿವೇ ತನ್ನ ಕುರುಹು ತನ್ನ ಕುರುಹೇ ತನ್ನರಿವು ಹಿಂದು ಮುಂದಾದು ಪೂಜಿಸಿದೆ ಭಕ್ತಿ...
ಯಾಕೀ ಗೊಡವೆ?
Share:
Poems

ಯಾಕೀ ಗೊಡವೆ?

August 10, 2023 ಜ್ಯೋತಿಲಿಂಗಪ್ಪ
ಸಾಯುವುದು ಒಂದು ದಿನ ಇದ್ದೇ ಇದೆ ಬಿಡು ದಿನಾ ಏಕೆ ಸಾಯುವುದು ದಿನಕೆ ಸಾವಿಲ್ಲವೇ ಹುಟ್ಟುವ ಭರವಸೆ ಖಂಡಿತಾ ಹುಟ್ಟೇ ಒಂದು ಮದ ಸಾವರಿತರೆ ಮದ ಸಾವುದು ನಿತ್ಯ ಸತ್ಯದ ಗೊಡವೆ ಬೇಕೇ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನನ್ನ-ನಿನ್ನ ನಡುವೆ
ನನ್ನ-ನಿನ್ನ ನಡುವೆ
June 5, 2021
ಆಗು ಕನ್ನಡಿಯಂತೆ…
ಆಗು ಕನ್ನಡಿಯಂತೆ…
September 13, 2025
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ಧರ್ಮೋ ರಕ್ಷತಿ ರಕ್ಷಿತಃ
ಧರ್ಮೋ ರಕ್ಷತಿ ರಕ್ಷಿತಃ
January 7, 2019
ನಡೆದಾಡುವ ದೇವರು
ನಡೆದಾಡುವ ದೇವರು
April 9, 2021
ವೀರದಾಸಮ್ಮನ ಸಹಜಾಮನಸ್ಕ ಯೋಗ
ವೀರದಾಸಮ್ಮನ ಸಹಜಾಮನಸ್ಕ ಯೋಗ
October 21, 2024
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
October 2, 2018
ಕಾಲ- ಕಲ್ಪಿತವೇ?
ಕಾಲ- ಕಲ್ಪಿತವೇ?
April 11, 2025
ಮನವೇ ಮನವೇ…
ಮನವೇ ಮನವೇ…
May 6, 2020
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
October 13, 2022
Copyright © 2026 Bayalu