Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗೆರೆ ಎಳೆಯದೆ…
Share:
Poems October 13, 2022 ಜ್ಯೋತಿಲಿಂಗಪ್ಪ

ಗೆರೆ ಎಳೆಯದೆ…

ನೀನು
ಕೂಗುವ ತನಕ
ನನ್ನ
ಕಿವಿಯಲಿ ಸದ್ದಿರಲಿಲ್ಲ

ನನ್ನ
ಸದ್ದಲಿ ನಿನ್ನ ಕಿವಿಯು
ತೆರೆಯಲಿಲ್ಲ

ನನ್ನ ನಿನ್ನ ಪ್ರತಿಷ್ಠೆ
ಕಣ್ಣಲಿ ಬೆಳಕಾಗಲಿಲ್ಲ

ಈ
ಗಾಯಕೆ ಮುಲಾಮು
ನಿನ್ನಿಂದ ದೂರವಾಗುವುದು

ಬಿಸಿಲಿಗೆ ಮೋಡವೂ ಬೆವರುವುದು

ಕಣ್ಣಲಿ ನೋಡಿದು ಕಣ್ಣಲಿ ಕಾಣಲಿಲ್ಲ
ಕಣ್ಣಲಿ ಕಂಡುದು ಕಣ್ಣು ನೋಡಲಿಲ್ಲ

ಪರಿಚಿತ ಬೆಳಕಿಗೆ ಅಪರಿಚಿತ ನೆರಳು
ನೆರಳೂ ಅದೇ ಬೆಳಕೂ ಅದೇ

ಕೇಳಿದಷ್ಟು ಶಬ್ದದ ಉಲಿ
ನೋಡಿದಷ್ಟೂ ಕಣ್ಣ ಸುಳಿ

ಕಣ್ಣು ತುಂಬಿದೆ ನೋಡೆ
ಕಿವಿ ತುಂಬಿದೆ ಕೇಳೆ

ನಾನು ಓಡಿದಷ್ಟೂ ನೀನೂ ಓಡುವೆಯಾ…

ಗೆರೆ ಎಳೆಯದೆ ಆಚೆ ಈಚೆ ಎಂಬುದಿಲ್ಲ.

Previous post ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
Next post ಅರಿವಿನ ಬಾಗಿಲು…
ಅರಿವಿನ ಬಾಗಿಲು…

Related Posts

ದಡ ಸೋಂಕದ ಅಲೆಗಳು
Share:
Poems

ದಡ ಸೋಂಕದ ಅಲೆಗಳು

July 10, 2025 ಜ್ಯೋತಿಲಿಂಗಪ್ಪ
ನದಿ ಕೂಡುವ ಕಡಲ ಅಂಚು ನಿಂತು ಸಂಬಂಧ ಹುಡುಕುತಿರುವೆ ಕಡಲ ಸೇರುವ ನೀರು ನದಿ ಯಾವುದು ಕಡಲು ಯಾವುದು ಸಂಬಂಧ ಅಸಂಬಂಧ ಎರಡೆಂಬ ಭಿನ್ನ ಅಳಿಯದೇ.. ದಾರಿ ತೋರುವ ಕೈಯ ಹಿಡಿದಿರುವೆ...
ನೆಟ್ಟ ನಂಜು ಹಾಲೀಂಟದು
Share:
Poems

ನೆಟ್ಟ ನಂಜು ಹಾಲೀಂಟದು

June 5, 2021 Bayalu
ಯಾರ ಮನೆ ಯಾರ ತೆನೆ ಯಾರ ಅನ್ನ ಯಾರ ಚಿನ್ನ ಸಾವಲಿ ಜೊತೆ ಬರಲಿಹುದೆ ಕಟ್ಟಿ ಒಯ್ಯಲಾಗುವುದೆ ಆ ಬಂಧು ಈ ಬಳಗ ಆ ಹಣವು ಈ ಎಣೆಯು ಕಟ್ಟು ಕಟ್ಟಿ ಇಟ್ಟ ಗಂಟು ಯಾರಿಗೊ ಹೋಗಲಿಕುಂಟು...

Comments 2

  1. L.S. Patil
    Oct 18, 2022 Reply

    ಪರಿಚಿತ ಬೆಳಕಿಗೆ ಅಪರಿಚಿತ ನೆರಳು
    ನೆರಳೂ ಅದೇ ಬೆಳಕೂ ಅದೇ…
    ಜೋಡು ಸಾಲುಗಳ ಕವನದ ಆಂತರ್ಯ ಗೆರೆ ಎಳೆಯುತ್ತಿರುವ ಮನುಷ್ಯನ ಪ್ರವೃತ್ತಿಯನ್ನು ಅಣಕಿಸುವಂತಿದೆ.

  2. Chaitanya Indudhar
    Oct 18, 2022 Reply

    ಗೆರೆ ಎಳೆದು ವೈವಿಧ್ಯತೆಗೆ ತೆರೆದುಕೊಳ್ಳಬೇಕೋ, ಗೆರೆ ಅಳಿಸಿ ಸಾಮರಸ್ಯ ಸಾಧಿಸಬೇಕೋ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕೈಗೆಟುಕಿದ ಭಾವ ಬುತ್ತಿ
ಕೈಗೆಟುಕಿದ ಭಾವ ಬುತ್ತಿ
July 10, 2025
ತತ್ವಪದಗಳ ಗಾಯನ ಪರಂಪರೆ
ತತ್ವಪದಗಳ ಗಾಯನ ಪರಂಪರೆ
February 7, 2021
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
March 6, 2024
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
July 1, 2018
ಬರಿದಾಗುವ ಬೆರಗು
ಬರಿದಾಗುವ ಬೆರಗು
February 6, 2025
ಅಲ್ಲಮಪ್ರಭು ಮತ್ತು ಮಾಯೆ (ಭಾಗ-2)
ಅಲ್ಲಮಪ್ರಭು ಮತ್ತು ಮಾಯೆ (ಭಾಗ-2)
February 11, 2022
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
ಚೋರಚಿಕ್ಕ ಶರಣ ಚಿಕ್ಕಯ್ಯನಾದ ಕತೆ
January 7, 2019
ಪರಿಪೂರ್ಣತೆಯೆಡೆಗೆ ಪಯಣ
ಪರಿಪೂರ್ಣತೆಯೆಡೆಗೆ ಪಯಣ
April 29, 2018
ಪ್ರಕೃತಿಯೊಂದಿಗೆ ಬಾಳಿದವರು…
ಪ್ರಕೃತಿಯೊಂದಿಗೆ ಬಾಳಿದವರು…
June 14, 2024
ಭವಸಾಗರ ದಾಂಟಿಪ ಹಡಗು-ಬಸವಣ್ಣ
ಭವಸಾಗರ ದಾಂಟಿಪ ಹಡಗು-ಬಸವಣ್ಣ
May 1, 2018
Copyright © 2026 Bayalu