Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅರಿವಿನ ಬಾಗಿಲು…
Share:
Poems October 13, 2022 ಕೆ.ಆರ್ ಮಂಗಳಾ

ಅರಿವಿನ ಬಾಗಿಲು…

ಹುಚ್ಚು ಮನಸಿನ ಕುಣಿತ
ದಿಕ್ಕುದಿಕ್ಕಿಗೂ ಸೆಳೆತ
ಅಡಿಗಡಿಗು ಎಡತಾಕುವ
ವಿಷಯಗಳ ಡೈನಮೈಟು
ಕಾಲು ಎಚ್ಚರ ತಪ್ಪದಂತೆ
ಜಾಣ ನಡಿಗೆಯ ಹೇಳಿಕೊಡುತಾನೆ
ಹುಟ್ಟು-ಸಾವಿನ ಚಕ್ರದ ಮರ್ಮ ತೋರುತಾನೆ

ಭಾವ ಜಾಲಗಳ ಹೆಣಿಗೆ
ಚಿತ್ತ ಭ್ರಾಂತಿಯ ಮೆರವಣಿಗೆ
ಪಂಚೇಂದ್ರಿಯಗಳ ಉರವಣೆ
ಮುಗಿಯಲಾರದ ಬವಣೆ
ಉಸಿರುಸಿಕ್ಕು ಚಡಪಡಿಸುವಾಗ
ಬಲೆ ಕತ್ತರಿಸುವ ಕಲೆಯ ಕಲಿಸುತಾನೆ
ಮತ್ತೆ ಅದ ಕಟ್ಟದಾ ತಂತ್ರ ತಿಳಿಸುತಾನೆ

ಬಾಳ ಕದಳಿಯಲಿ
ಬಸವಳಿದು ಕುಸಿದಾಗ
ದಿಕ್ಕುಗಾಣದೆ ಕಂಗೆಟ್ಟು ಅಲೆವಾಗ
ಮಮ್ಮಲ ಮರುಗುತಾನೆ
ಮಮತೆಯಲಿ ಕೈಹಿಡಿದು
ಪಯಣದ ನಿಜವ ಅರುಹುತಾನೆ
ಮತ್ತೆ ದಾರಿತಪ್ಪದ ಗುಟ್ಟು ಕಲಿಸುತಾನೆ

ನಿನ್ನ ನೀತಿಳಿಯೆಂದು
ಅರಿವಿನ ಕಂದೀಲ ಕೈಗಿಕ್ಕಿ
ಅಂತರಂಗದ ಪಯಣಕೆ
ಮನವ ಸಿದ್ಧಗೊಳಿಸುತಾನೆ
ಭವದ ಬೆಂಗುಡಿಯ ಬಿಡಿಸಿ
ಭಕ್ತಿಯ ಮರ್ಮವನು ಅಂಗೈಗೆ ಇಡುತಾನೆ
ನಿಜಮುಕ್ತಿಯ ಮಾರ್ಗವನು ತೋರುತಾನೆ

ತಿದ್ದಿ ತೀಡಿ ಬೆಳೆಸುತಾನೆ
ಝುಂಕಿಸಿ ಮನವ ಚುಚ್ಚುತಾನೆ
ಕದ್ದು ನಡೆದರೆ ಗುದ್ದುತಾನೆ
ಸುಳ್ಳು ನುಡಿಯಲು ಕೆರಳುತಾನೆ
ಸೋಗು ಮುಖಗಳ ಕೆಡವುತಾನೆ
ಬೀಳದಂತೆ ಎಚ್ಚರಿಸುತಾನೆ
ಬಿದ್ದಾಗಲೆಲ್ಲಾ ಎತ್ತುತಾನೆ

ಬೈದು ಬುದ್ಧಿ ಹೇಳುತಾನೆ
ನನ್ನ ಮೋಸ ನನಗೆ ತೋರುತಾನೆ
ಕಂಗಳ ಕರುಳ ಕತ್ತರಿಸುತಾನೆ
ಮನದ ತಿರುಳ ಹುರಿಯುತಾನೆ
ಮಾತಿನ ಮೂಲಕೆ ಒಯ್ಯುತಾನೆ
ಅರಿವಿನ ನೆಲೆಯತ್ತ ನಡೆಸುತಾನೆ
ನನ್ನ ಒಳಗನು ನನಗೆ ಪರಿಚಯಿಸುತಾನೆ

ನನ್ನ ನನಗೊಪ್ಪಿಸಲು
ಗುರು ತೆರೆಯದ ಕಿಟಕಿಗಳಿಲ್ಲ…
ತೋರದ ದಾರಿಗಳಿಲ್ಲ…
ಹೇಳದ ಗುಟ್ಟುಗಳಿಲ್ಲ…
ಸತ್ಯದ ದಾರಿ ತೋರಿದ
ಎನ್ನ ಭಾಗ್ಯದ ಬಾಗಿಲು ನೀ
ಶರಣು ಗುರುವೇ ನಿನಗೆ ಶರಣು ಶರಣು.

Previous post ಗೆರೆ ಎಳೆಯದೆ…
ಗೆರೆ ಎಳೆಯದೆ…
Next post ದುಡಿಮೆಯೆಲ್ಲವೂ ಕಾಯಕವೇ?
ದುಡಿಮೆಯೆಲ್ಲವೂ ಕಾಯಕವೇ?

Related Posts

ನದಿಯನರಸುತ್ತಾ…
Share:
Poems

ನದಿಯನರಸುತ್ತಾ…

October 6, 2020 ಜ್ಯೋತಿಲಿಂಗಪ್ಪ
ಜ್ಞಾನವೆಂಬುದೇನು? ಮನೋ ಭೇದ. -ಅಲ್ಲಮ ನಾನು ಹುಟ್ಟುವಾಗ ಹೇಳಿ ಬಂದೆನೇ ಸಾಯುವಾಗಲೂ ಅಷ್ಟೇ ಬದುಕು ಹೇಳದು ಏನೂ ಈ ಕಡಲಲಿ ಕಳೆದಿರುವ ನದಿ ಹುಡುಕುತಿರುವೆ ಹುಡುಕುತಿರುವ ನದಿ...
ನೆಲದ ನಿಧಾನ
Share:
Poems

ನೆಲದ ನಿಧಾನ

April 29, 2018 ಕೆ.ಆರ್ ಮಂಗಳಾ
ನನ್ನ ಶರಣರು ಅವರು ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು ಕಕ್ಕುಲತೆಯಿಂದ ಬದುಕ ಕಟ್ಟಿದವರು ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು. ನನ್ನ...

Comments 3

  1. ಶರಣ್ ಸ್ವಾಮಿ ಮಠಪತಿ
    Oct 19, 2022 Reply

    ಜೀವಾತ್ಮನ ಮನದ ಇಂಗಿತವನ್ನ ಕವನ ಕುಂಚದಿಂದ ಚೆಂದ ಬಿಡುಸಿರವಿರಿ.
    ನದಿ ಸಾಗರ ಸೇರಲು ಹೊರಟ ಪರಿಯಂತೆ ಜೀವಾತ್ಮ ಸದಾ ಪರಮನನ್ನ ಸೇರಲು ಹವಣಿಸುವ ಪರಿ ಕಷ್ಟಕರವಾದದ್ದು ಅದನ್ನ ಭಾಷೆ ಮೂಲಕ ವ್ಯಕ್ತಪಡಿಸುವ ಶ್ರಮಕ್ಕೆ ಭಕ್ತಿಯ ಶರಣುಗಳು
    ಸಲಹೆ: ಕನ್ನಡ ಕವನದಲ್ಲಿ ಆಂಗ್ಲ ಭಾಷೆಯಾದ ಡೈನಮೈಟ್ ಪದ ಬಳಸದೆ ಇದ್ದಲ್ಲಿ ಇನ್ನು ಚೆಂದವಿತ್ತು.
    ಶರಣು ಶರಣಾರ್ಥಿ
    ಶರಣ್ ಸ್ವಾಮಿ

  2. Sharan swami
    Oct 19, 2022 Reply

    ಜೀವಾತ್ಮನ ಮನದ ಇಂಗಿತವನ್ನ ಕವನ ಕುಂಚದಿಂದ ಚೆಂದ ಬಿಡುಸಿರವಿರಿ.
    ನದಿ ಸಾಗರ ಸೇರಲು ಹೊರಟ ಪರಿಯಂತೆ ಜೀವಾತ್ಮ ಸದಾ ಪರಮನನ್ನ ಸೇರಲು ಹವಣಿಸುವ ಪರಿ ಕಷ್ಟಕರವಾದದ್ದು ಅದನ್ನ ಭಾಷೆ ಮೂಲಕ ವ್ಯಕ್ತಪಡಿಸುವ ಶ್ರಮಕ್ಕೆ ಭಕ್ತಿಯ ಶರಣುಗಳು
    ಸಲಹೆ: ಕನ್ನಡ ಕವನದಲ್ಲಿ ಆಂಗ್ಲ ಭಾಷೆಯಾದ ಡೈನಮೈಟ್ ಪದ ಬಳಸದೆ ಇದ್ದಲ್ಲಿ ಇನ್ನು ಚೆಂದವಿತ್ತು.
    ಶರಣು ಶರಣಾರ್ಥಿ
    ಶರಣ್ ಸ್ವಾಮಿ

  3. ಪೆರೂರು ಜಾರು, ಉಡುಪಿ
    Oct 20, 2022 Reply

    ಗುರು ಅರಿವಿನ ಬಾಗಿಲಾದರೆ ಓಕೆ; ಗರುವದ ಬಾಗಿಲಾದರೆ ಜೋಕೆ; ಈಗಿನ ಗುರುಗಳನ್ನು ಕಾಣುವಾಗ ಹೊರಗೆ ಒಳಗೆ ಬರಿ ಬಯಕೆ!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಆಫ್ರಿಕಾದ ಸೂರ್ಯ
ಆಫ್ರಿಕಾದ ಸೂರ್ಯ
December 13, 2024
ವಚನಗಳಲ್ಲಿ ಶಿವ
ವಚನಗಳಲ್ಲಿ ಶಿವ
September 4, 2018
ವಚನಗಳ ಓದು ಮತ್ತು ಅರ್ಥೈಸುವಿಕೆ
ವಚನಗಳ ಓದು ಮತ್ತು ಅರ್ಥೈಸುವಿಕೆ
August 5, 2018
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
ಲಿಂಗಾಯತ ಧರ್ಮದ ತಾತ್ವಿಕ ಚಿಂತನಾ ಗೋಷ್ಠಿ
March 9, 2023
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
July 21, 2024
ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…
July 10, 2023
ಆತ್ಮಹತ್ಯೆ-ಆತ್ಮವಿಶ್ವಾಸ
ಆತ್ಮಹತ್ಯೆ-ಆತ್ಮವಿಶ್ವಾಸ
January 10, 2021
ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
October 5, 2021
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
August 2, 2019
ಪ್ರೇಮ ಮತ್ತು ದ್ವೇಷ
ಪ್ರೇಮ ಮತ್ತು ದ್ವೇಷ
July 10, 2025
Copyright © 2025 Bayalu