Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ತುದಿಗಳೆರಡು ಇಲ್ಲವಾದಾಗ…
Share:
Poems March 9, 2023 ಕೆ.ಆರ್ ಮಂಗಳಾ

ತುದಿಗಳೆರಡು ಇಲ್ಲವಾದಾಗ…

ಭೂಮಿ- ಆಕಾಶದ ದೂರ ಅಳಿದಾಗ
ಭುವಿಯ ಸೆಳೆತವೂ ಇಲ್ಲ
ಆಗಸದ ಎಳೆತವೂ ಇಲ್ಲ.

ಹಗಲು- ರಾತ್ರಿಗಳ ಭ್ರಮಣ ಸರಿದಾಗ
ಬೆಳಗಿನ ಬಯಕೆಯೂ ಇಲ್ಲ
ಕತ್ತಲೆಯ ಭಯವೂ ಇಲ್ಲ.

ಧರ್ಮ- ಅಧರ್ಮಗಳ ವಾದಗಳು ಸೋತಾಗ
ಧರ್ಮಾಂಧತೆಯೂ ಇಲ್ಲ
ಅಧರ್ಮದ ಜಂಜಡವೂ ಇಲ್ಲ.

ಪಾಪ- ಪುಣ್ಯಗಳ ಗುಟ್ಟು ಬಿಚ್ಚಿದಾಗ
ನರಕ ಭೀತಿಯೂ ಇಲ್ಲ
ಸ್ವರ್ಗದ ಆಸೆಯೂ ಇಲ್ಲ.

ದ್ವೈತ- ಅದ್ವೈತಗಳ ಮೇಲಾಟ ನಿಂತಾಗ
ಎರಡೆಂಬ ಭಿನ್ನತೆ ಇಲ್ಲ
ಬ್ರಹ್ಮ ನಾನೆಂಬ ಧಾಷ್ಟ್ಯವೂ ಇಲ್ಲ.

ಸಾಕಾರ- ನಿರಾಕಾರಗಳ ಗೊಂದಲ ಬಿಟ್ಟಾಗ
ಮೂರ್ತಿಗಳ ಹಂಗೂ ಇಲ್ಲ
ಕಾಣದುದರ ಕಲ್ಪನೆಯೂ ಇಲ್ಲ.

ರೂಪ- ವಿರೂಪಗಳ ದಿಟ್ಟಿಸಿ ಕಂಡಾಗ
ಸೌಂದರ್ಯದ ಬಣ್ಣನೆಯೂ ಇಲ್ಲ
ಕುರೂಪದ ಹೇವರಿಕೆಯೂ ಇಲ್ಲ.

ಸೋಲು- ಗೆಲುವುಗಳ ಒಳಹೊಕ್ಕು ಬಂದಾಗ
ಬೀಳುವ ಭಯವೂ ಇಲ್ಲ
ಬೀಗುವ ಭ್ರಮೆಯೂ ಇಲ್ಲ.

ಸುಖ- ದುಃಖಗಳ ಸುಳಿಯ ತೆಗೆದಾಗ
ಹಿತದ ಮೈಮರೆವಿಕೆ ಇಲ್ಲ
ತಲ್ಲಣದ ದುಗುಡವೂ ಇಲ್ಲ.

ಜ್ಞಾನ- ಅಜ್ಞಾನದ ಜಾಡ ತಿಳಿದಾಗ
ನಾ ಬಲ್ಲೆನೆಂಬ ಕೋಡೂ ಇಲ್ಲ
ಅರಿಯೆನೆಂಬ ಅಳುಕೂ ಇಲ್ಲ.

ಶ್ರೇಷ್ಠ- ಕನಿಷ್ಠತೆಯ ಹುಸಿಯನರಿತಾಗ
ಹಿರಿದೆಂಬ ಹೊಗಳಿಕೆ ಇಲ್ಲ
ಕಿರಿದೆಂಬ ತಾತ್ಸಾರವಿಲ್ಲ.

ಇದೆ- ಇಲ್ಲಗಳ ಹೊಯ್ದಾಟ ಮರೆಯಾದಾಗ
ಇರುವುದರ ಗುಂಗೂ ಇಲ್ಲ
ಇಲ್ಲದುದರ ಗುಲ್ಲೂ ಇಲ್ಲ.

ಬೇಕು- ಬೇಡಗಳ ಆಯ್ಕೆಗಳು ಸರಿದಾಗ
ಇನ್ನೇನಿದೆ ಹಾತೊರೆವುದಕೆ?
ಬೇಡೆಂದು ಬೇಸರಿಸುವುದಕೆ?

ತಾನು- ಎದಿರು ಎನುವ ಮಾಯೆ ಹರಿದಾಗ
ನಾನೆನ್ನುವ ಅಹಮಿಕೆ ಎಲ್ಲಿದೆ?
ನೀನೆನುವ ಬೇಧವಾದರೂ ಎಲ್ಲಿ?

Previous post ಬೆಳಕು ಸಿಕ್ಕೀತೆ?
ಬೆಳಕು ಸಿಕ್ಕೀತೆ?
Next post ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ
ಲಿಂಗಾಯತ ಧರ್ಮದ ಆಚಾರ-ವಿಚಾರ-ಸಂಘಟನೆ

Related Posts

ಪಾದಕೂ ನೆಲಕೂ…
Share:
Poems

ಪಾದಕೂ ನೆಲಕೂ…

June 14, 2024 ಜ್ಯೋತಿಲಿಂಗಪ್ಪ
ಕಣ್ಣೇ ಸೋತಿರಲು ಈ ಮಾಯಾಂಗನೆ ಬೆತ್ತಲೆ ಆಗುವಳು ನದಿ ಒಣಗಿದೆ ಒರತೆಯಲೂ ನೀರು ಜಿನುಗದು ಕಣ್ಣ ಒಳಗಣ ದೀಪ ಮಂಕು ಯಾರಿಗೆ ಗೊತ್ತು ಯಾವ ದಾರಿ ಎಲ್ಲಿಗೋ ಪಾದಕೂ ನೆಲಕೂ ಎನಿತು ಅಂತರ...
ಸುಳ್ಳು ಅನ್ನೋದು…
Share:
Poems

ಸುಳ್ಳು ಅನ್ನೋದು…

April 6, 2023 ಜ್ಯೋತಿಲಿಂಗಪ್ಪ
ನಾ ಭಕ್ತನಾಗದೆ ನೀ ದೇವನಾದೆಯಾ ಭಕ್ತಿ ಎನ್ನಳವಲ್ಲ ದೇವತನವೂ ನಿನ್ನಳವಲ್ಲ ಕೂಡಿ ಕೊಂಡಾಡುವ ಭಾವ ಭಾವ ತಪ್ಪಿದ ಇಜ್ಜೋಡು ಕತ್ತಲೊಳಗೆ ಬೆತ್ತಲಾಟ ಅಂಗಣದೊಳಗಾಡುವ ಆರು ಗಿಳಿವಿಂಡು...

Comments 3

  1. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Mar 11, 2023 Reply

    ನಿಜ..ಎರಡರ ಹಂಗು ತೊರೆದರೆ ಏನೂ ಉಳಿಯದು.ಸರಳವಾಗಿ ಹೇಳಿರುವ ಇರಿ.

  2. ಸುನಂದಾ ರಾಚಣ್ಣ, ದಾವಣಗೆರೆ
    Mar 12, 2023 Reply

    ತುದಿಗಳೆರಡು ಇಲ್ಲವಾದಾಗ ಏನು ಇವೆ, ಏನೂ ಇಲ್ಲ ಎಂದಾಗ, ಇದು ಭ್ರಮೆಯೋ, ಕಲ್ಪನೆಯೋ, ನಿಜವೋ ಸುಳ್ಳೋ ತಿಳಿಯದೇ ತಲೆಕೆರೆದುಕೊಂಡಾಗ ಸಿಕ್ಕಿದ್ದು ಬಯಲು, ಬರೀ ಬಯಲು, ಅಲ್ಲೇನು ಹುಡುಕಲಿ? ಆದಿ, ಅಂತ್ಯ ಎರಡೂ ಇಲ್ಲ, ಬದುಕು ಸಾಗುತಿದೆ, ಜೀವನ ಎಂಥ ವಿಸ್ಮಯ ಅಲ್ಲವೇ?

  3. ಅಂಬಾರಾಯ ಬಿರಾದಾರ
    Mar 14, 2023 Reply

    ತುದಿ ಮೊದಲಿಲ್ಲದ ಘನ ಬಯಲು
    👌👍👌👍

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅವಿರಳ ಅನುಭಾವಿ-2
ಅವಿರಳ ಅನುಭಾವಿ-2
April 6, 2020
ತಮ್ಮೊಳಗಿರ್ದ ಮಹಾಘನವನರಿಯರು
ತಮ್ಮೊಳಗಿರ್ದ ಮಹಾಘನವನರಿಯರು
May 8, 2024
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ದುಡಿಮೆಯೆಲ್ಲವೂ ಕಾಯಕವೇ?
ದುಡಿಮೆಯೆಲ್ಲವೂ ಕಾಯಕವೇ?
November 10, 2022
ಭೃತ್ಯಾಚಾರ
ಭೃತ್ಯಾಚಾರ
June 5, 2021
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
ದಿಟ್ಟ ಗಣಾಚಾರಿ ಮಡಿವಾಳ ಮಾಚಿದೇವ
April 29, 2018
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
December 8, 2021
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
November 7, 2020
ಬೆಳಗಿನ ಬೆಳಗು ಮಹಾಬೆಳಗು
ಬೆಳಗಿನ ಬೆಳಗು ಮಹಾಬೆಳಗು
November 1, 2018
Copyright © 2025 Bayalu