Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹೀಗೊಂದು ಸಂವಾದ…
Share:
Poems April 6, 2023 ಕೆ.ಆರ್ ಮಂಗಳಾ

ಹೀಗೊಂದು ಸಂವಾದ…

ಶಿಷ್ಯೆ: ಮರೆವಿನ ಹಿಡಿತಕೆ ಮನ ಸಿಲುಕಿಹುದು
ಬಯಕೆಯ ಸೆಲೆಗೆ ಮರುಳಾಗಿಹುದು
ಕಾಣುವೆನೆಂತು ಜೀವದ ಸೊಬಗ
ಅರಿಯುವುದೆಂತು ಪ್ರಾಣದ ಹೊಲಬ
ಗೊತ್ತಿಲ್ಲದ ನಡಿಗೆ ಕತ್ತಲ ದಾರಿ
ಕಾಲಿಡಲೆಲ್ಲಿ ಹೇಳು ಗುರು
ಗುರು: ಕಂಡುದ ಹಿಡಿಯದ ಅಜ್ಞಾನಕೆ ಮರುಗುವೆ
ಕಾಣದ ಠಾವಿನ ಕನಸಿಗೆ ಕನಿಕರಿಸುವೆ
ಇಳಿಯದೆ ಕಾಣದು, ಹುಡುಕದೆ ದಕ್ಕದು
ನಡೆಯದೆ ಸೋತರೆ ಹೇಗಮ್ಮಾ…

ಶಿಷ್ಯೆ: ಎಲ್ಲಿಂದಲೋ ಬಂದು ಎತ್ತೆತ್ತಲೋ ಎಳೆವ
ನೋವು- ನಗು- ಉದ್ವೇಗದ ಸರಿಗಮ
ಪ್ರೀತಿ- ಪ್ರೇಮ- ವ್ಯಾಮೋಹದ ಪದನಿಸ
ದ್ವೇಷ, ರೋಷ, ಕುಹಕ, ಸೇಡು
ಒಂದೇ ಎರಡೇ ಉನ್ಮಾದದ ಅಲೆಬಲೆ
ಯಾವುದು ದಿಟ, ಯಾವುದು ಸೆಟೆ
ಕಂಗೆಟ್ಟಿರುವೆ ಹೇಳು ಗುರು
ಗುರು: ರುಚಿಗಳ ಸೆಳೆತಕೆ, ಬದಲಾಗುವ ಬಣ್ಣಕೆ
ನಿಲುಕುವುದಲ್ಲ ನಿಜದ ನೆಲೆ
ಇಲ್ಲದ ಸವಿಗೆ ನಾಲಿಗೆ ಚಾಚಿ
ಸುಮ್ಮನೆ ಬಳಲಿಕೆ ಯಾಕಮ್ಮಾ?

ಶಿಷ್ಯೆ: ದೇಹದಲಿರುವೆ, ಜ್ಞಾನದಲಿರುವೆ
ಬುದ್ಧಿಯಲಿರುವೆ, ಭಾವದಲಿರುವೆ
ಮಾತೂ ನನದೆ, ಮೌನವೂ ನನದೆ
ಅಲ್ಲಿಯೂ ನಾನೇ, ಇಲ್ಲಿಯೂ ನಾನೇ
ಎಲ್ಲೆಲ್ಲಿಯೂ ಥಕದಿಮಿ ಎನುತಿದೆ ‘ನಾನು’
ನಾನಿಲ್ಲದ ಠಾವಾದರೂ ಎಲ್ಲಿದೆ…
ಯಾರೀ ‘ನಾನು’ ಹೇಳು ಗುರು…
ಗುರು: ಗಗನದ ಕುಸುಮಕೆ ಕೈ ಚಾಚಿರುವೆ
ಕನಸಿನ ಸಿರಿಗೆ ಮನಸೋತಿರುವೆ
ಹುಸಿಯಲಿ ನಿಂತು ಹುಸಿಯನೇ ಹೊದ್ದು
ನಾ… ನಾ… ಎಂದರೆ ಹೇಗಮ್ಮಾ?

ಶಿಷ್ಯೆ: ಕಣ್ಣಿಗೆ ರಾಚಿದೆ ಅಹಮಿನ ದೂಳು
ಕಾಲಿಗೆ ನಾಟಿದೆ ಭವದ ಮುಳ್ಳು
ಕಲ್ಪಿತವನು ನಿಜವೆಂದೇ ಅಪ್ಪಿದೆ
ನಿತ್ಯವು ಸರಿದು ಆಯಸ್ಸು ಕರಗುವ
ಕಾಲದ ಓಟಕೆ ಭಯ ಬಿದ್ದಿರುವೆ
ಶಿವನನು ಕಾಣುವ ಬಯಲನು ಹೊಂದುವ
ಭಾಗ್ಯವು ದಕ್ಕೀತೆ ಹೇಳು ಗುರು
ಗುರು: ಕಣ್ಣಿನ ಕಸವನು, ಕಾಲಿನ ಮುಳ್ಳನು
ತೆಗೆಯಲು ಅಲ್ಲೇ ಇಹ ಅಕಲ್ಪಿತ ಶಿವನು
ಇಲ್ಲದ ಮನವನು ಜಾಡಿಸಿ ಕೊಡವಲು
ತನ್ನಲಿ ತಾನೇ ನಿಜ ನಿರ್ಬಯಲು.

Previous post ಸುಳ್ಳು ಅನ್ನೋದು…
ಸುಳ್ಳು ಅನ್ನೋದು…
Next post ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು

Related Posts

ಬಯಲಾಟ
Share:
Poems

ಬಯಲಾಟ

March 17, 2021 ಜ್ಯೋತಿಲಿಂಗಪ್ಪ
ಆ ಮನೆ ಬಿಟ್ಟು ಬಂದಿರುವೆ ಎಂಬುದು ಈಗಲೂ ಇದೆ ಆ ಮನೆ ಇದೆಯೇ ಎಂಬುದು ಈಗಲೂ ಇದೆ ನಿಜ ಸುಳ್ಳು ಎಂಬುದು ನನ್ನ ಹಿತ ಆ ಮನೆ ಸಮುದ್ರ ದಾಟಲು ಹಾರುವ ಚಿಟ್ಟೆ ಹುಡುಕುತಿರುವೆ ಇನ್ನೂ...
ದಾರಿ ಬಿಡಿ…
Share:
Poems

ದಾರಿ ಬಿಡಿ…

December 6, 2020 ಕೆ.ಆರ್ ಮಂಗಳಾ
ದಾರಿ ಬಿಡಿ ದಾರಿ ಬಿಡಿ ಕಲ್ಯಾಣಪುರಕೆ ಹೊರಟಿದ್ದೇನೆ ದಾರಿಬಿಡಿ ನೆನಪುಗಳೇ ಜಗ್ಗದಿರಿ ಹಿಂದಕ್ಕೆ ಅಡ್ಡಕೆ ಕಾಲ್ಕೊಟ್ಟು ಕೆಳಗೆ ಕೆಡವದಿರಿ ಕಳೆದ ಕಾಲಗಳಿಗೆಳೆದು ಸಮಯ...

Comments 2

  1. K S Mallesh
    Apr 7, 2023 Reply

    ಪದ್ಮಾಲಯ ನಾಗರಾಜ್ ಅವರ ಲೇಖನ ಮತ್ತು ನಿಮ್ಮ ಹೀಗೊಂದು ಸಂವಾದ ಕವನ ಎರಡೂ ಮನಸೆಳೆದವು. ಎಳೆ ಎಳೆಯಾಗಿ ಬಿಡಿಸಿ ಬಿಡಿಸಿ ನಾನುವನ್ನು ಇಬ್ಬರೂ ತೋರಿದ್ದೀರಿ. ಇಬ್ಬನಿಯ ಹನಿಯಂತೆ ನಿಮ್ಮ ಕವನ ಪದ್ಮಾಲಯ ಅವರ ನಾನುವಿನ ವಿರಾಟ್ ರೂಪವನ್ನು ಹೃದ್ಯವಾಗಿ ಪ್ರತಿಬಿಂಬಿಸಿದೆ. ಪದ್ಮಾಲಯ ರವರ ಈ ಲೇಖನದಲ್ಲಿ ಸ್ವಾತಂತ್ರ್ಯ ಮುಂತಾದ ಪದಗಳ ಮಹತ್ವವನ್ನು ತಿಳಿದೆ. ಕೆಲವು ಉದಾಹರಣೆಗಳ ಮೂಲಕ ನಾನುವಿನ ಮೆರೆದಾಟಗಳನ್ನು ಮನಮುಟ್ಟುವಂತೆ ಚಿತ್ರಿಸಿದ್ದಾರೆ. ಮತ್ತೆ ಓದಿ ಮಗದೊಮ್ಮೆ ಓದಿ ಮನನಮಾಡಿಕೊಳ್ಳಬೇಕಾದ ಲೇಖನ. ನಿಮ್ಮ ಕವನವೂ ಕೂಡ ದಾರಿಯ ಬೇಲಿಯ ಹಸಿರ ಮಧ್ಯೆ ಅರಳಿನಿಂತ ಹೂವಂತಿದೆ.

  2. ಪಂಚಾಕ್ಷರಿ ಹಳೇಬೀಡು
    Apr 9, 2023 Reply

    “ಅಕಲ್ಪಿತ ಶಿವ ಇಲ್ಲದ ಮನವ ಜಾಡಿಸಿ ಕೊಡವಲು ನಿರ್ವಯಲು!” ಅದ್ಭುತ ಸಾಲುಗಳು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
December 6, 2020
ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
April 6, 2024
ಆಕಾರ-ನಿರಾಕಾರ
ಆಕಾರ-ನಿರಾಕಾರ
January 7, 2022
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ಮೀನಿನ ಬಯಕೆ
ಮೀನಿನ ಬಯಕೆ
June 10, 2023
ಅರಿವಿಗೆ ಬಂದ ಆರು ಸ್ಥಲಗಳು
ಅರಿವಿಗೆ ಬಂದ ಆರು ಸ್ಥಲಗಳು
August 11, 2025
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
December 13, 2024
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
March 17, 2021
ಕನ್ನಗತ್ತಿಯ ಮಾರಯ್ಯ
ಕನ್ನಗತ್ತಿಯ ಮಾರಯ್ಯ
April 3, 2019
Copyright © 2025 Bayalu