Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹೀಗೊಂದು ಸಂವಾದ…
Share:
Poems April 6, 2023 ಕೆ.ಆರ್ ಮಂಗಳಾ

ಹೀಗೊಂದು ಸಂವಾದ…

ಶಿಷ್ಯೆ: ಮರೆವಿನ ಹಿಡಿತಕೆ ಮನ ಸಿಲುಕಿಹುದು
ಬಯಕೆಯ ಸೆಲೆಗೆ ಮರುಳಾಗಿಹುದು
ಕಾಣುವೆನೆಂತು ಜೀವದ ಸೊಬಗ
ಅರಿಯುವುದೆಂತು ಪ್ರಾಣದ ಹೊಲಬ
ಗೊತ್ತಿಲ್ಲದ ನಡಿಗೆ ಕತ್ತಲ ದಾರಿ
ಕಾಲಿಡಲೆಲ್ಲಿ ಹೇಳು ಗುರು
ಗುರು: ಕಂಡುದ ಹಿಡಿಯದ ಅಜ್ಞಾನಕೆ ಮರುಗುವೆ
ಕಾಣದ ಠಾವಿನ ಕನಸಿಗೆ ಕನಿಕರಿಸುವೆ
ಇಳಿಯದೆ ಕಾಣದು, ಹುಡುಕದೆ ದಕ್ಕದು
ನಡೆಯದೆ ಸೋತರೆ ಹೇಗಮ್ಮಾ…

ಶಿಷ್ಯೆ: ಎಲ್ಲಿಂದಲೋ ಬಂದು ಎತ್ತೆತ್ತಲೋ ಎಳೆವ
ನೋವು- ನಗು- ಉದ್ವೇಗದ ಸರಿಗಮ
ಪ್ರೀತಿ- ಪ್ರೇಮ- ವ್ಯಾಮೋಹದ ಪದನಿಸ
ದ್ವೇಷ, ರೋಷ, ಕುಹಕ, ಸೇಡು
ಒಂದೇ ಎರಡೇ ಉನ್ಮಾದದ ಅಲೆಬಲೆ
ಯಾವುದು ದಿಟ, ಯಾವುದು ಸೆಟೆ
ಕಂಗೆಟ್ಟಿರುವೆ ಹೇಳು ಗುರು
ಗುರು: ರುಚಿಗಳ ಸೆಳೆತಕೆ, ಬದಲಾಗುವ ಬಣ್ಣಕೆ
ನಿಲುಕುವುದಲ್ಲ ನಿಜದ ನೆಲೆ
ಇಲ್ಲದ ಸವಿಗೆ ನಾಲಿಗೆ ಚಾಚಿ
ಸುಮ್ಮನೆ ಬಳಲಿಕೆ ಯಾಕಮ್ಮಾ?

ಶಿಷ್ಯೆ: ದೇಹದಲಿರುವೆ, ಜ್ಞಾನದಲಿರುವೆ
ಬುದ್ಧಿಯಲಿರುವೆ, ಭಾವದಲಿರುವೆ
ಮಾತೂ ನನದೆ, ಮೌನವೂ ನನದೆ
ಅಲ್ಲಿಯೂ ನಾನೇ, ಇಲ್ಲಿಯೂ ನಾನೇ
ಎಲ್ಲೆಲ್ಲಿಯೂ ಥಕದಿಮಿ ಎನುತಿದೆ ‘ನಾನು’
ನಾನಿಲ್ಲದ ಠಾವಾದರೂ ಎಲ್ಲಿದೆ…
ಯಾರೀ ‘ನಾನು’ ಹೇಳು ಗುರು…
ಗುರು: ಗಗನದ ಕುಸುಮಕೆ ಕೈ ಚಾಚಿರುವೆ
ಕನಸಿನ ಸಿರಿಗೆ ಮನಸೋತಿರುವೆ
ಹುಸಿಯಲಿ ನಿಂತು ಹುಸಿಯನೇ ಹೊದ್ದು
ನಾ… ನಾ… ಎಂದರೆ ಹೇಗಮ್ಮಾ?

ಶಿಷ್ಯೆ: ಕಣ್ಣಿಗೆ ರಾಚಿದೆ ಅಹಮಿನ ದೂಳು
ಕಾಲಿಗೆ ನಾಟಿದೆ ಭವದ ಮುಳ್ಳು
ಕಲ್ಪಿತವನು ನಿಜವೆಂದೇ ಅಪ್ಪಿದೆ
ನಿತ್ಯವು ಸರಿದು ಆಯಸ್ಸು ಕರಗುವ
ಕಾಲದ ಓಟಕೆ ಭಯ ಬಿದ್ದಿರುವೆ
ಶಿವನನು ಕಾಣುವ ಬಯಲನು ಹೊಂದುವ
ಭಾಗ್ಯವು ದಕ್ಕೀತೆ ಹೇಳು ಗುರು
ಗುರು: ಕಣ್ಣಿನ ಕಸವನು, ಕಾಲಿನ ಮುಳ್ಳನು
ತೆಗೆಯಲು ಅಲ್ಲೇ ಇಹ ಅಕಲ್ಪಿತ ಶಿವನು
ಇಲ್ಲದ ಮನವನು ಜಾಡಿಸಿ ಕೊಡವಲು
ತನ್ನಲಿ ತಾನೇ ನಿಜ ನಿರ್ಬಯಲು.

Previous post ಸುಳ್ಳು ಅನ್ನೋದು…
ಸುಳ್ಳು ಅನ್ನೋದು…
Next post ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು

Related Posts

ಕುರುಹೇ ಬಯಲು
Share:
Poems

ಕುರುಹೇ ಬಯಲು

February 16, 2026 ಜ್ಯೋತಿಲಿಂಗಪ್ಪ
ದೇವರಿಗೆ ಕುರುಹು ಇಲ್ಲ ಕುರುಹುವಿಗೆ ದೇವರು ಉಂಟು ಬೆರಳು ಮಡಿಚಿದರೆ ನಾನು ಬೆರಳು ಬಿಚ್ಚಿದರೆ ನೀನು ಹೆಜ್ಜೆ ಹೆಜ್ಜೆಯಲಿ ಸದ್ದಿಲ್ಲದ ನಡೆ ಬಿಲ್ಲು ಇಲ್ಲದ ಬಾಣ ಮುಟ್ಟೀತೇ ಗುರಿ...
ನೀನು ನಾನಲ್ಲ…
Share:
Poems

ನೀನು ನಾನಲ್ಲ…

July 21, 2024 ಕೆ.ಆರ್ ಮಂಗಳಾ
ಹಿಂದಿನ ಹೆಜ್ಜೆಗಳಲಿ ತನ್ನನ್ನೇ ಅರಸುವ ಮುಂದಿನ ದಿನಗಳಲಿ ತನ್ನನ್ನೇ ಮೆರೆಯಿಸುವ ಅಸ್ತಿತ್ವದ ಹುಡುಕಾಟವೇ ನೀನು ನಾನಲ್ಲ ಎಂದೋ ಆದುದನು ಜತನದಲಿ ಕೂಡಿಟ್ಟು ಎಲ್ಲವನೂ ಎಲ್ಲರನೂ ಆ...

Comments 2

  1. K S Mallesh
    Apr 7, 2023 Reply

    ಪದ್ಮಾಲಯ ನಾಗರಾಜ್ ಅವರ ಲೇಖನ ಮತ್ತು ನಿಮ್ಮ ಹೀಗೊಂದು ಸಂವಾದ ಕವನ ಎರಡೂ ಮನಸೆಳೆದವು. ಎಳೆ ಎಳೆಯಾಗಿ ಬಿಡಿಸಿ ಬಿಡಿಸಿ ನಾನುವನ್ನು ಇಬ್ಬರೂ ತೋರಿದ್ದೀರಿ. ಇಬ್ಬನಿಯ ಹನಿಯಂತೆ ನಿಮ್ಮ ಕವನ ಪದ್ಮಾಲಯ ಅವರ ನಾನುವಿನ ವಿರಾಟ್ ರೂಪವನ್ನು ಹೃದ್ಯವಾಗಿ ಪ್ರತಿಬಿಂಬಿಸಿದೆ. ಪದ್ಮಾಲಯ ರವರ ಈ ಲೇಖನದಲ್ಲಿ ಸ್ವಾತಂತ್ರ್ಯ ಮುಂತಾದ ಪದಗಳ ಮಹತ್ವವನ್ನು ತಿಳಿದೆ. ಕೆಲವು ಉದಾಹರಣೆಗಳ ಮೂಲಕ ನಾನುವಿನ ಮೆರೆದಾಟಗಳನ್ನು ಮನಮುಟ್ಟುವಂತೆ ಚಿತ್ರಿಸಿದ್ದಾರೆ. ಮತ್ತೆ ಓದಿ ಮಗದೊಮ್ಮೆ ಓದಿ ಮನನಮಾಡಿಕೊಳ್ಳಬೇಕಾದ ಲೇಖನ. ನಿಮ್ಮ ಕವನವೂ ಕೂಡ ದಾರಿಯ ಬೇಲಿಯ ಹಸಿರ ಮಧ್ಯೆ ಅರಳಿನಿಂತ ಹೂವಂತಿದೆ.

  2. ಪಂಚಾಕ್ಷರಿ ಹಳೇಬೀಡು
    Apr 9, 2023 Reply

    “ಅಕಲ್ಪಿತ ಶಿವ ಇಲ್ಲದ ಮನವ ಜಾಡಿಸಿ ಕೊಡವಲು ನಿರ್ವಯಲು!” ಅದ್ಭುತ ಸಾಲುಗಳು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಲಿಸು ಗುರುವೆ…
ಕಲಿಸು ಗುರುವೆ…
July 10, 2025
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
December 9, 2025
ತೋರಲಿಲ್ಲದ ಸಿಂಹಾಸನದ ಮೇಲೆ…
ತೋರಲಿಲ್ಲದ ಸಿಂಹಾಸನದ ಮೇಲೆ…
December 22, 2019
ಒಳಗನರಿವ ಬೆಡಗು
ಒಳಗನರಿವ ಬೆಡಗು
September 10, 2022
  ಅವಿರಳ ಅನುಭಾವಿ-3
  ಅವಿರಳ ಅನುಭಾವಿ-3
May 6, 2020
ಅಬದ್ಧ ಆರ್ಥಿಕತೆ
ಅಬದ್ಧ ಆರ್ಥಿಕತೆ
March 5, 2019
ಅನುಭವ ಮಂಟಪದ ಸುತ್ತ (ಭಾಗ-1)
ಅನುಭವ ಮಂಟಪದ ಸುತ್ತ (ಭಾಗ-1)
January 15, 2026
ಮಣ್ಣಲ್ಲಿ ಹುಟ್ಟಿ…
ಮಣ್ಣಲ್ಲಿ ಹುಟ್ಟಿ…
February 6, 2025
ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
April 6, 2024
Copyright © 2026 Bayalu