Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹುಲಿ ಸವಾರಿ…
Share:
Poems June 10, 2023 ಜ್ಯೋತಿಲಿಂಗಪ್ಪ

ಹುಲಿ ಸವಾರಿ…

ಖಾಲೀ…
ಇರುವೆಯಲ್ಲಾ ಏನಾದರೂ ನೋಡು
ಕಣ್ಣು ತುಂಬಿದೆ ನೋಡಲೇನುಂಟು ನೋಡದು

ಏನಾದರೂ ಕೇಳು
ಕಿವಿ ತುಂಬಿದೆ ಕೇಳಲೇನುಂಟು ಕೇಳದು

ಈ ಇಂದ್ರಿಯಗಳೆಲ್ಲಾ ತುಂಬಿ ತುಂಬಿ
ತುಳುಕಾಡುತಿವೆ

ಇರು ಇಲ್ಲವಾಗಿರು
ನೆನೆ ನೆನೆದು ನೆನಹು ಅಳಿಯಲಿ

ಹುಲಿ ಸವಾರಿ ಮಾಡಿರುವೆ
ಇಳಿಯುವ ಭಯ
ಭಾವರಹಿತ ಆಗುವುದೆಂದರೆ
ಹುಲಿ ಸವಾರಿಯೇ…

ಹಳೆಯ ಗಾಯ ತಾಗಿ ನೋಯಿಸಿತೇ
ಮಾಯದ ಗಾಯ ನೋವು
ಇದ್ದೇನೋ ಇರೆನೋ….

*** *** ***

ಈ
ಮನವ
ನಿನಗೆ ಕೊಟ್ಟಿರುವೆ ಇನ್ನಾವ
ಮನದಲಿ ಧ್ಯಾನಿಸಲಿ ನಿನ್ನ

ಅಕ್ಕಾ

ನಿನ್ನ ಧ್ಯಾನಿಸುವ ವ್ಯಸನ
ಅಶನ ತೊರೆದಿರುವೆ

ಒಲಿಯುವೆಯೋ
ಒಲಿಯೆಯೋ…

ಆವ ಸಂಬಂಧವೂ ಇಲ್ಲ

ಇನ್ನೇನಿದೆ
ಕಾಯ ಮಣ್ಣಾದಡೆ
ಜೀವ ಬಯಲಾಗದೇ

ಅರಿವೇ
ನೀನಾಗಿರಲು ಇನ್ನಾರ ಕೇಳಲಿ

ಬಯಲಾಗದ ಜೀವಕೆ ಕಾಯ
ಮಣ್ಣಾಗುವುದರಿಯದು

ಈ
ಕಣ್ಣ ಕಾಯದಿಂದ
ಬಿಡಿಸು ಕಾಣುವೆ ನಿನ್ನ

ಕಾಣುವ ಕಣ್ಣಿರಲು ಕಾಯ ಮಣ್ಣು

ಧ್ಯಾನಿಸುವುದೇನು ಒಂದು ವ್ಯಸನವೇ…

ಕತೆಗಾರನಾದರೂ ಕತೆಯಲಿ ಬಾಗಿ.

Previous post ಬಸವತತ್ವ ಸಮ್ಮೇಳನ
ಬಸವತತ್ವ ಸಮ್ಮೇಳನ
Next post ಮೀನಿನ ಬಯಕೆ
ಮೀನಿನ ಬಯಕೆ

Related Posts

ನೀನು ನಾನಲ್ಲ…
Share:
Poems

ನೀನು ನಾನಲ್ಲ…

July 21, 2024 ಕೆ.ಆರ್ ಮಂಗಳಾ
ಹಿಂದಿನ ಹೆಜ್ಜೆಗಳಲಿ ತನ್ನನ್ನೇ ಅರಸುವ ಮುಂದಿನ ದಿನಗಳಲಿ ತನ್ನನ್ನೇ ಮೆರೆಯಿಸುವ ಅಸ್ತಿತ್ವದ ಹುಡುಕಾಟವೇ ನೀನು ನಾನಲ್ಲ ಎಂದೋ ಆದುದನು ಜತನದಲಿ ಕೂಡಿಟ್ಟು ಎಲ್ಲವನೂ ಎಲ್ಲರನೂ ಆ...
ಎಲ್ಲಿದೆ ಈ ಕ್ಷಣ?
Share:
Poems

ಎಲ್ಲಿದೆ ಈ ಕ್ಷಣ?

October 21, 2024 ಕೆ.ಆರ್ ಮಂಗಳಾ
ವರ್ತಮಾನದಲ್ಲಿ ನಡೆಯಲರಿಯದೆ ನುಡಿಯಲರಿಯದೆ ಬಾಳಲರಿಯದೆ ಕಳದೇ ಹೋಗುವ ಬದುಕು ಕಾಣಲಾರದು ಯಾಕೆ- ‘ಈ ಕ್ಷಣ’? ರಾಗಾಲಾಪಗಳ ಬಣ್ಣಗಳಲಿ ಮಿಂದೇಳುತಿರುವಾಗ ಬಯಕೆ ಬೇಗುದಿಗಳಲಿ...

Comments 3

  1. ZABIULLA M. Asad
    Jun 12, 2023 Reply

    ನಮಸ್ತೆ ಸರ್
    ನಿಮ್ಮ ಎರಡೂ ಕವಿತೆಗಳ ಓದಿನೊಂದಿಗೆ ನನ್ನ ಮುಂಜಾವು ಸಂಪನ್ನವಾಯಿತು ಸರ್.
    ಕವಿತೆಗಳ ಅಮೂರ್ತಡೆದೆಗಿನ ಅನುಭಾವದ ನಡಿಗೆ ಆತ್ಮವನ್ನು ತಾಕಿತು. ಗಾಳಿ ಎಲೆಯನ್ನು ಸ್ಪರ್ಶಸಿದ ಹಾಗೆ…
    ಮೇಘಕೆ ಹಕ್ಕಿಯ ರೆಕ್ಕೆ ಮುಟ್ಟಿದ ಹಾಗೆ…

    ಮಣ್ಣು ಮೆಟ್ಟಿದ ದಾರಿ ಕವಿತೆಯನ್ನು ಸಹ ಓದಿದೆ.

    ಧನ್ಯವಾದಗಳು ಸರ್ 🙏🏻💐

  2. ರವಿಕುಮಾರ ಜಗಳೂರು
    Jun 14, 2023 Reply

    ಕಂಗಳು ತುಂಬಿದ ಬಳಿಕ ನೋಡಲಿಲ್ಲ, ಕಿವಿಗಳು ತುಂಬಿದ ಬಳಿಕ ಕೇಳಲಿಲ್ಲ… ಬಸವಣ್ಣನವರ ಆಶಯ ನೆನಪಾಯಿತು…

  3. ದಯಾಶಂಕರ ಮಧುಗಿರಿ
    Jun 20, 2023 Reply

    ಕತೆಗಾರನೂ ಕತೆಯಲಿ ಭಾಗಿಯಾದ ಪರಿ, ನನಗೆ ನಾನೊಡ್ಡಿದ ವಿಧಿ!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮಾಡುವಂತಿರಬೇಕು, ಮಾಡದಂತಿರಬೇಕು…
ಮಾಡುವಂತಿರಬೇಕು, ಮಾಡದಂತಿರಬೇಕು…
April 29, 2018
ಬಸವಣ್ಣವರ ಆಶಯಗಳು
ಬಸವಣ್ಣವರ ಆಶಯಗಳು
July 4, 2021
ನೆಲದ ನಿಧಾನ
ನೆಲದ ನಿಧಾನ
April 29, 2018
ಮನಸ್ಸು
ಮನಸ್ಸು
September 7, 2020
ಅನುಭಾವ ಮತ್ತು ಅನಿರ್ವಚನೀಯತೆ
ಅನುಭಾವ ಮತ್ತು ಅನಿರ್ವಚನೀಯತೆ
March 12, 2022
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
August 11, 2025
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
December 8, 2021
ಮನಕ್ಕೆ ಮನ ಸಾಕ್ಷಿಯಾಗಿ…
ಮನಕ್ಕೆ ಮನ ಸಾಕ್ಷಿಯಾಗಿ…
October 2, 2018
ವೀರದಾಸಮ್ಮನ ಸಹಜಾಮನಸ್ಕ ಯೋಗ
ವೀರದಾಸಮ್ಮನ ಸಹಜಾಮನಸ್ಕ ಯೋಗ
October 21, 2024
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
Copyright © 2026 Bayalu