Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಿಜ ನನಸಿನ ತಾವ…
Share:
Poems July 10, 2023 ಕೆ.ಆರ್ ಮಂಗಳಾ

ನಿಜ ನನಸಿನ ತಾವ…

ಕಣ್ಣು ಮುಚ್ಚಿದಾಗ ಬರುವ ಕನಸಿಗೂ
ಕಣ್ಬಿಟ್ಟಾಗಿನ ದಿನದ ಚಿತ್ರಾವಳಿಗೂ
ಏನಿಹುದು ಅಂತರ?
ನಗು, ಅಳು, ನೋವು, ಸಂಕಟ…
ಅನುಭವದಲ್ಲಿ ಅದ್ದಿ ತೆಗೆದಂತೆ
ಎಲ್ಲ ಎದುರೆದುರೇ ನಡೆದಂತೆ!
ಹೊಯ್ದಾಟಗಳ ಹಗಲ ನನಸು,
ಕನವರಿಕೆಗಳಾ ಇರುಳ ಕನಸು

ನನಸಂತೆ ಕನಸಲೂ ಅದೇ ಅದೇ
ಒಡಲ ಹಸಿವು, ಹುಸಿಗಳು
ಚಡಪಡಿಕೆಗಳು, ಹುಡುಕಾಟಗಳು
ಅಸಹಾಯಕತೆಯ ತಡವರಿಕೆಗಳು
ಇಲ್ಲಿರುವವರೆಲ್ಲಾ ಅಲ್ಲಿ ಸಿಗುತ್ತಾರೆ
ಅಲ್ಲಿಯವರೆಲ್ಲಾ ಇಲ್ಲಿ ಕಾಣುತ್ತಾರೆ
ಸಂಬಂಧಗಳು, ವಿರೋಧಗಳು,
ದಡಗಳೆರಡರ ಮೇಲೂ ನಿತ್ಯ ಹರಿದಾಡುತ್ತವೆ

ಕನಸು-ನನಸಿನ ಮೋಡಿಯಾಟದಲಿ
ನಾಳೆಗಳು ನಿನ್ನೆಗಳಾಗುತಿವೆ
ಮಲಗಿದಾಗ ದಿನ ಮರೆಯಾಗುತ್ತದೆ
ಎಚ್ಚರಾದಾಗ ಕನಸು ಸರಿಯುತ್ತದೆ
ಯಾವುದು ದಿಟ, ಯಾವುದು ಸಟೆ?
ಅಲ್ಲಿ ತೋರಿದ್ದೋ, ಇಲ್ಲಿ ಕಂಡದ್ದೋ?

ಅರಿವಾಗಿ ಎದೆಗಿಳಿದ ಗುರು ಹೇಳಿದ-
ಎರಡೂ ಸುಳ್ಳಲ್ಲ, ನಿಜದಿರುವೂ ಅಲ್ಲಿಲ್ಲ
ವಿಷಮ ವಿಷಯಗಳ ಹಗಲಿನ ಜಾತ್ರೆ
ಸಿಗದ ಬೇಗುದಿಗಳ ಇರುಳಿನ ಸಂತೆ
ಎಚ್ಚರವಾಗದ ಅಮಲಿನ ಬದುಕಿಗೆ
ಸತ್ಯದ ನೆಲೆಯು ಕಾಣುವುದೆ?
ಕನಸೊಳಗೊಂದು ಕನಸನು ಕಟ್ಟಲು
ನಿಜ ನನಸಿನ ಮರ್ಮ ತಿಳಿಯುವುದೆ?

ನಿನ್ನ ಕದಳಿಯ ನೀ ದಾಟಲೇ ಬೇಕು
ನಿನ್ನ ತಾವಕೆ ನೀ ಸೇರಲೇ ಬೇಕು
ಜಂಗಮ ಚಲನೆಯ ಲಾಸ್ಯವನರಿಯಲು
ಅಚಲವಾಗಿ ನೀ ನಿಲ್ಲಲೇ ಬೇಕು.

Previous post ಗೇಣು ದಾರಿ
ಗೇಣು ದಾರಿ
Next post ಬೆಳಕಿನೆಡೆಗೆ- 2
ಬೆಳಕಿನೆಡೆಗೆ- 2

Related Posts

ಗ್ರಹಣ
Share:
Poems

ಗ್ರಹಣ

December 9, 2025 ಡಾ. ಪಂಚಾಕ್ಷರಿ ಹಳೇಬೀಡು
ಗ್ರಹಣ ಹಿಡಿದದ್ದು ಯಾರಿಗೆ? ರವಿಗೋ, ಶಶಿಗೋ, ಮೂರ್ಖನಿಗೋ? ವಿಶಾಲಾಗಸದಿ ಸುತ್ತುವರು ಭೂರವಿಚಂದ್ರತಾರೆ ಸೃಷ್ಟಿಯಲಿ ಸನಿಹವಿಲ್ಲ, ಸಂಬಂಧವುಂಟು! ಸ್ಪರ್ಷ ಮೊದಲಿಲ್ಲ...
ದಾರಿಯಲ್ಲದ ದಾರಿ…
Share:
Poems

ದಾರಿಯಲ್ಲದ ದಾರಿ…

October 10, 2023 ಕೆ.ಆರ್ ಮಂಗಳಾ
ಗುರು ತೋರಿದ ದಾರಿಯಲಿ ಬಂಡೆಗಳ ಸಿಡಿಸಬೇಕು ಗುಡ್ಡಗಳ ಒಡೆಯಬೇಕು ಕಮರಿ, ಹೊಳ್ಳ ದಾಟಬೇಕು ಮುಳ್ಳುಗಂಟಿ ಕಿತ್ತಬೇಕು ಇಷ್ಟಪಟ್ಟು ನಡೆಯದಿದ್ದರೆ ಇದು ಬಲು ಕಷ್ಟದ ದಾರಿ...

Comments 1

  1. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Jul 13, 2023 Reply

    ಕಣ್ಣೆಚ್ಚರದಲಿ ಕನಸ ನೋಡಬೇಕು.. ಎಂಬುದನ್ನು ಎಷ್ಟು ಸರಳವಾಗಿ ಹೇಳಿರುವಿರಿ.
    ಓದುವುದೇ ಒಂದು ಚೆಂದ .

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
August 11, 2025
ಶಬ್ದದೊಳಗಣ ನಿಃಶಬ್ದ…
ಶಬ್ದದೊಳಗಣ ನಿಃಶಬ್ದ…
April 11, 2025
ವಚನಗಳಲ್ಲಿ ಜೀವವಿಜ್ಞಾನ
ವಚನಗಳಲ್ಲಿ ಜೀವವಿಜ್ಞಾನ
December 22, 2019
ನನ್ನನ್ನು ಕ್ಷಮಿಸು
ನನ್ನನ್ನು ಕ್ಷಮಿಸು
April 5, 2026
ಶರಣನಾಗುವುದು…
ಶರಣನಾಗುವುದು…
February 10, 2023
ಜಗವ ಸುತ್ತಿಪ್ಪುದು ನಿನ್ನ ಮಾಯೆ…
ಜಗವ ಸುತ್ತಿಪ್ಪುದು ನಿನ್ನ ಮಾಯೆ…
April 29, 2018
ಮರೆಯಲಾಗದ ಜನಪರ ಹೋರಾಟಗಾರ
ಮರೆಯಲಾಗದ ಜನಪರ ಹೋರಾಟಗಾರ
May 10, 2023
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
May 1, 2019
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
ಲಿಂಗಾಂಗ ಸಮರಸವೆಂಬ ಮಹಾಪ್ರಸಾದ
August 2, 2019
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
May 6, 2021
Copyright © 2026 Bayalu