Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರವಲು ಮನೆ…
Share:
Poems August 10, 2023 ಕೆ.ಆರ್ ಮಂಗಳಾ

ಎರವಲು ಮನೆ…

ಬೆಂಕಿ ಬಿದ್ದಿತ್ತು ಥಳುಕಿನ ಮಹಲಿಗೆ
ಉರಿದುರಿದು ಬೂದಿಯಾಗಿತ್ತು
ಪೇರಿಸಿ ಇಟ್ಟ ಸಿರಿ-ಸಂಪತ್ತು
ಆರಿಸ ಹೋದರೆ ಕೈ ಸುಟ್ಟಿತ್ತು
ಹಲುಬಿಹೆನೆಂದರೆ ದನಿ ಅಡಗಿತ್ತು
ಕೂಗಲು ಹೋದರೆ ಕಂಠ ಒಡೆದಿತ್ತು

ಹೊತ್ತಿ ಉರಿದಿತ್ತು ತಲೆ ಮೇಲಿನ ಸೂರು
ಕರಕಲಾದವು ಐದು ತೊಲೆಗಳು
ವಿಷಯಗಳಾಸರೆ ಕುಸಿಯತೊಡಗಿತ್ತು
ನಿಂತ ನೆಲವೇ ಜಾರುತಲಿತ್ತು
ಓಡಿಹೆನೆಂದರೆ ಬೀದಿಗಳಿಲ್ಲ
ಅವಿತುಕೊಳ್ಳಲು ಒಂದೂ ಗಲ್ಲಿಗಳಿಲ್ಲ

ಎತ್ತಲೋ ಓಡಿತು ಕಿಚ್ಚಿಗೆ ಅಂಜಿ
ದೂಳೆಬ್ಬಿಸಿ ಕಾಲ್ಕೆದರುತಲಿದ್ದ
ನನ್ನೊಳಗಿನ ಮದವೇರಿದ ಗೂಳಿ
ದೂಳುಕಟ್ಟಿದ ನೋಟಗಳಿಲ್ಲ
ಚಿತ್ತ ಭ್ರಾಂತಿಯ ರೂಪಗಳಿಲ್ಲ
ದಿಟ್ಟಿಸಲಿಕ್ಕೆ ಎದುರೆಂಬುದೇ ಇಲ್ಲ

ಭಸ್ಮವಾಗಲು ಮನೆ ಕಣ್ಣೆದುರಲ್ಲೇ
ಮೂಕವಾಯಿತು ಮನ ಒಳಗಲ್ಲೇ
ಕೂಡಿಹೆನೆಂದರೆ ಆತ್ಮ ಬೇರಿಲ್ಲ
ಹಿಡಿದಿಡಲು ದೇಹ ಉಳಿಯುವುದಿಲ್ಲ
ವೇದಿಕೆ ಏರಲು ವೇಷಗಳಿಲ್ಲ
ಬಣ್ಣ ಹಚ್ಚಲು ಮುಖವೇ ಇಲ್ಲ!

ಗುಪ್ತ ನಿಧಿಯ ಸಂಚಯ ಕೆಡಿಸಿ,
ತೋರುವ ಜಗದ ಸಂಚನು ತಿಳಿಸಿ
ನಂಬಿದ ಗುರುವೇ ಕಿಚ್ಚನ್ನಿಟ್ಟ
ಬಯಲ ಬಾಳಿಗೆ ಮುನ್ನುಡಿ ಬರೆದ
ಭಾವಗಳಿಲ್ಲ, ಜಾಲಗಳಿಲ್ಲ
ನೋಟಗಳಿಲ್ಲ, ಕೂಟಗಳಿಲ್ಲ…

ಎರವಲು ಮನೆಯ ಋಣ ಹರಿದಿತ್ತು
ಜಗದ ಜಗುಲಿಯಲಿ ಬೆಳಕೊಂದಿತ್ತು.

Previous post ಯಾಕೀ ಗೊಡವೆ?
ಯಾಕೀ ಗೊಡವೆ?
Next post ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ

Related Posts

ಕೊನೆಯಿರದ ಚಕ್ರದ ಉರುಳು
Share:
Poems

ಕೊನೆಯಿರದ ಚಕ್ರದ ಉರುಳು

April 11, 2025 ಜಬೀವುಲ್ಲಾ ಎಂ.ಅಸದ್
ಬೆಳಗು ಕತ್ತಲಿನೊಳಗೊ ಕತ್ತಲು ಬೆಳಗಿನೊಳಗೊ ನರ್ತಿಸುತ್ತಿರೆ ಜೀವ, ಭಾವ, ದೇಹ, ಆತ್ಮ ಎಲ್ಲಾ ಬಯಲಾಗಿ ಬಯಲೊಳಗೊ… ಸತ್ಯ ಸುಳ್ಳಿನೊಳಗೊ ಸುಳ್ಳು ಸತ್ಯದೊಳಗೊ ಹತ್ತಿ...
ಕಾಯೋ ಗುರುವೇ…
Share:
Poems

ಕಾಯೋ ಗುರುವೇ…

February 11, 2022 ಕೆ.ಆರ್ ಮಂಗಳಾ
ನಾನು: ಗಾಳಿಯೇ ಆಡದ, ಕತ್ತಲ ಕೋಣ್ಯಾಗ ಕಳೆದು ಹೋಗಿನಿ ನನ ಗುರುವೆ ಚಿಲಕವ ಸರಿಸಿ, ಬಾಗಿಲು ತೆಗೆದು ಬೆಳಕಾ ತೋರಿಸು ನನ ಗುರುವೆ ತಡವುತ ಎಡವುತ, ಅಲ್ಲಲ್ಲೇ ಸುತ್ತುತ ಹೈರಾಣಾಗಿಹೆ...

Comments 1

  1. ಪೆರೂರು ಜಾರು, ಉಡುಪಿ
    Aug 16, 2023 Reply

    ಬಯಲು ಎರವಲೊಳಗೊ
    ಎರವಲು ಗುರುವೊಳಗೊ
    ಬಯಲು ಗುರುವೆರಡು ಎರವಲ
    ಬೂದಿ ಮುಚ್ಚಿದ ಕಿಚ್ಚಿನೊಳಗೊ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
October 2, 2018
ಕನ್ನಗತ್ತಿಯ ಮಾರಯ್ಯ
ಕನ್ನಗತ್ತಿಯ ಮಾರಯ್ಯ
April 3, 2019
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
ದಿಟ್ಟ ಹೆಜ್ಜೆಯ ಗುರುವಿನ ವಾಣಿಗಳು
June 17, 2020
ಮೈಯೆಲ್ಲಾ ಕಣ್ಣಾಗಿ (10)
ಮೈಯೆಲ್ಲಾ ಕಣ್ಣಾಗಿ (10)
September 13, 2025
ಕುವೆಂಪು ಮತ್ತು ಬ್ರೆಕ್ಟ್
ಕುವೆಂಪು ಮತ್ತು ಬ್ರೆಕ್ಟ್
August 11, 2025
ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…
March 9, 2023
ಪ್ರಭುವಿನ ಗುರು ಅನಿಮಿಷಯೋಗಿ
ಪ್ರಭುವಿನ ಗುರು ಅನಿಮಿಷಯೋಗಿ
July 21, 2024
ಅರಿವಿನ ಬಾಗಿಲು…
ಅರಿವಿನ ಬಾಗಿಲು…
October 13, 2022
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಲಿಂಗಾಯತ ಸ್ವತಂತ್ರ ಧರ್ಮ
ಲಿಂಗಾಯತ ಸ್ವತಂತ್ರ ಧರ್ಮ
July 10, 2023
Copyright © 2026 Bayalu