Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎರವಲು ಮನೆ…
Share:
Poems August 10, 2023 ಕೆ.ಆರ್ ಮಂಗಳಾ

ಎರವಲು ಮನೆ…

ಬೆಂಕಿ ಬಿದ್ದಿತ್ತು ಥಳುಕಿನ ಮಹಲಿಗೆ
ಉರಿದುರಿದು ಬೂದಿಯಾಗಿತ್ತು
ಪೇರಿಸಿ ಇಟ್ಟ ಸಿರಿ-ಸಂಪತ್ತು
ಆರಿಸ ಹೋದರೆ ಕೈ ಸುಟ್ಟಿತ್ತು
ಹಲುಬಿಹೆನೆಂದರೆ ದನಿ ಅಡಗಿತ್ತು
ಕೂಗಲು ಹೋದರೆ ಕಂಠ ಒಡೆದಿತ್ತು

ಹೊತ್ತಿ ಉರಿದಿತ್ತು ತಲೆ ಮೇಲಿನ ಸೂರು
ಕರಕಲಾದವು ಐದು ತೊಲೆಗಳು
ವಿಷಯಗಳಾಸರೆ ಕುಸಿಯತೊಡಗಿತ್ತು
ನಿಂತ ನೆಲವೇ ಜಾರುತಲಿತ್ತು
ಓಡಿಹೆನೆಂದರೆ ಬೀದಿಗಳಿಲ್ಲ
ಅವಿತುಕೊಳ್ಳಲು ಒಂದೂ ಗಲ್ಲಿಗಳಿಲ್ಲ

ಎತ್ತಲೋ ಓಡಿತು ಕಿಚ್ಚಿಗೆ ಅಂಜಿ
ದೂಳೆಬ್ಬಿಸಿ ಕಾಲ್ಕೆದರುತಲಿದ್ದ
ನನ್ನೊಳಗಿನ ಮದವೇರಿದ ಗೂಳಿ
ದೂಳುಕಟ್ಟಿದ ನೋಟಗಳಿಲ್ಲ
ಚಿತ್ತ ಭ್ರಾಂತಿಯ ರೂಪಗಳಿಲ್ಲ
ದಿಟ್ಟಿಸಲಿಕ್ಕೆ ಎದುರೆಂಬುದೇ ಇಲ್ಲ

ಭಸ್ಮವಾಗಲು ಮನೆ ಕಣ್ಣೆದುರಲ್ಲೇ
ಮೂಕವಾಯಿತು ಮನ ಒಳಗಲ್ಲೇ
ಕೂಡಿಹೆನೆಂದರೆ ಆತ್ಮ ಬೇರಿಲ್ಲ
ಹಿಡಿದಿಡಲು ದೇಹ ಉಳಿಯುವುದಿಲ್ಲ
ವೇದಿಕೆ ಏರಲು ವೇಷಗಳಿಲ್ಲ
ಬಣ್ಣ ಹಚ್ಚಲು ಮುಖವೇ ಇಲ್ಲ!

ಗುಪ್ತ ನಿಧಿಯ ಸಂಚಯ ಕೆಡಿಸಿ,
ತೋರುವ ಜಗದ ಸಂಚನು ತಿಳಿಸಿ
ನಂಬಿದ ಗುರುವೇ ಕಿಚ್ಚನ್ನಿಟ್ಟ
ಬಯಲ ಬಾಳಿಗೆ ಮುನ್ನುಡಿ ಬರೆದ
ಭಾವಗಳಿಲ್ಲ, ಜಾಲಗಳಿಲ್ಲ
ನೋಟಗಳಿಲ್ಲ, ಕೂಟಗಳಿಲ್ಲ…

ಎರವಲು ಮನೆಯ ಋಣ ಹರಿದಿತ್ತು
ಜಗದ ಜಗುಲಿಯಲಿ ಬೆಳಕೊಂದಿತ್ತು.

Previous post ಯಾಕೀ ಗೊಡವೆ?
ಯಾಕೀ ಗೊಡವೆ?
Next post ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ

Related Posts

ಕಣ್ಣ ಪರಿಧಿ
Share:
Poems

ಕಣ್ಣ ಪರಿಧಿ

February 10, 2023 ಜ್ಯೋತಿಲಿಂಗಪ್ಪ
ಕಣ್ಣ ಬಿಚ್ಚಿ ಕಾಣುವುದು ಏನು ಏನೂ ಇಲ್ಲ ಕಣ್ಣ ಮುಚ್ಚಿ ಕಾಣುವುದು ಏನು ಏನೂ ಇಲ್ಲ ಕಣ್ಣ ಒಳಗ ಕಾಣುವುದು ಕಾಣು ಕಾಣು ಕಾಣು ಏನು ಏನೂ ಇಲ್ಲ ಕಣ್ಣ ಪರದೆಯ ದಾಟಿ ಹೋದವರು ಯಾರು...
ತುದಿಗಳೆರಡು ಇಲ್ಲವಾದಾಗ…
Share:
Poems

ತುದಿಗಳೆರಡು ಇಲ್ಲವಾದಾಗ…

March 9, 2023 ಕೆ.ಆರ್ ಮಂಗಳಾ
ಭೂಮಿ- ಆಕಾಶದ ದೂರ ಅಳಿದಾಗ ಭುವಿಯ ಸೆಳೆತವೂ ಇಲ್ಲ ಆಗಸದ ಎಳೆತವೂ ಇಲ್ಲ. ಹಗಲು- ರಾತ್ರಿಗಳ ಭ್ರಮಣ ಸರಿದಾಗ ಬೆಳಗಿನ ಬಯಕೆಯೂ ಇಲ್ಲ ಕತ್ತಲೆಯ ಭಯವೂ ಇಲ್ಲ. ಧರ್ಮ- ಅಧರ್ಮಗಳ...

Comments 1

  1. ಪೆರೂರು ಜಾರು, ಉಡುಪಿ
    Aug 16, 2023 Reply

    ಬಯಲು ಎರವಲೊಳಗೊ
    ಎರವಲು ಗುರುವೊಳಗೊ
    ಬಯಲು ಗುರುವೆರಡು ಎರವಲ
    ಬೂದಿ ಮುಚ್ಚಿದ ಕಿಚ್ಚಿನೊಳಗೊ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾನು ಯಾರು? ಎಂಬ ಆಳನಿರಾಳ – 2
ನಾನು ಯಾರು? ಎಂಬ ಆಳನಿರಾಳ – 2
April 6, 2020
ಕುರುಹೇ ಬಯಲು
ಕುರುಹೇ ಬಯಲು
February 16, 2026
ಪಾದಕೂ ನೆಲಕೂ…
ಪಾದಕೂ ನೆಲಕೂ…
June 14, 2024
ಪ್ರಭುವಿನ ಗುರು ಅನಿಮಿಷ -2
ಪ್ರಭುವಿನ ಗುರು ಅನಿಮಿಷ -2
September 14, 2024
ಅವಿರಳ ಅನುಭಾವಿ-2
ಅವಿರಳ ಅನುಭಾವಿ-2
April 6, 2020
ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
October 21, 2024
ಬಸವನಾ ಯೋಗದಿಂ…
ಬಸವನಾ ಯೋಗದಿಂ…
July 1, 2018
ಮರೆತೆ…
ಮರೆತೆ…
July 4, 2022
ಸಾವಿನ ಸುತ್ತ…
ಸಾವಿನ ಸುತ್ತ…
January 8, 2023
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
Copyright © 2026 Bayalu