Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನೊಂದು ನೀರ್ಗುಳ್ಳೆ
Share:
Poems September 6, 2023 ಕೆ.ಆರ್ ಮಂಗಳಾ

ನಾನೊಂದು ನೀರ್ಗುಳ್ಳೆ

ಕಾಲದ ಊದುಗೊಳವೆಯಲಿ
ನಿರಂತರವಾಗಿ ಉಕ್ಕುತಿವೆ
ಅನಂತಾನಂತ ನೀರ್ಗುಳ್ಳೆ
ಎಲ್ಲಕೂ ಒಂದೇ ಹುಟ್ಟು
ಒಂದೇ ಬಗೆಯ ಸಂಯೋಜನೆ

ನಾ ಬೇರೆ ನೀ ಬೇರೆ
ಅಂವ ಬೇರೆ ಇಂವ ಬೇರೆ
ನಾ ಮೇಲು ನೀ ಕೆಳಗೆ
ಅಕಿ ಹೆಚ್ಚು ಇಕಿ ಕಡಿಮೆ
ಗುಳ್ಳೆಯ ತೆಳು ಗೆರೆಯ ಆಚೀಚೆ
ಜಗದುದ್ದಗಲಕ್ಕೂ ತಾರತಮ್ಯ

ನೋಡುನೋಡುತ್ತಲೇ
ಇಲ್ಲೇ ಇದ್ದದ್ದು, ಅತ್ತ ಸರಿದದ್ದು
ಈಗ ಚಿಮ್ಮಿದ್ದು, ಮೇಲೆ ಹಾರಿದ್ದು
ಇಲ್ಲವಾಗುವ ನೀರ್ಗುಳ್ಳೆಗಳಲ್ಲಿ
ಯಾವುದಕೆ ಪೈಪೋಟಿ?
ಹಿರಿದಾದರೇನು, ಕಿರಿದಾದರೇನು
ಬಣ್ಣ ಯಾವುದಾದರೇನು
ಅಮರತ್ವವುಂಟೆ ಗುಳ್ಳೆಗೆ?

ಮುಟ್ಟಿದರೆ ಫಟ್ಟೆನುವ ಗುಳ್ಳೆ
ತನ್ನಲ್ಲಿ ತಾನೇ ಊದೆಬ್ಬಿಸುವ
ಮೋಹ, ಮದ, ಮತ್ಸರ
ದ್ವೇಷ, ದುರ್ಗುಣಗಳ
ಒಂದಲ್ಲಾ ಎರಡಲ್ಲಾ
ನೂರಾರು ಬುರುಜುಗಳು
ಗುಳ್ಳೆಯೊಳಗಣ ಗುಳ್ಳೆಗಳ
ಈ ಮೆಳ್ಳಗಣ್ಣಿನ ನೋಟಕೆ
ಕಂಡೀತೇ ಲೋಕ ಸತ್ಯ?

ನಿನ್ನೊಳು ನೀನಿರು ಎನುವ
ಗುರು ಸೂತ್ರವ ಹಿಡಿದು
ಈ ಪರಕಾಯ ಪೊರೆಗಳ
ಹಂಗು ಕಳಚಲೇ ಬೇಕು…
ಕೊರಗಲಿಕೆ, ಬೇಯಲಿಕೆ
ಸಮಯವೆಲ್ಲಿದೆ ಎನುವ
ನಶ್ವರತೆಯ ಸತ್ಯವನು
ಕಣ್ಬಿಟ್ಟು ನೋಡಲೇ ಬೇಕು.

ಇಬ್ಬನಿಯ ಹನಿ ಎನ್ನಿ
ಮಿನುಗಿ ಮರೆಯಾಗೋ ಮಿಂಚೆನ್ನಿ,
ಭ್ರಮೆಯೆನ್ನಿ, ಕನಸೆನ್ನಿ,
ಮೋಡದ ನೆರಳೆನ್ನಿ,
ಅಲೆಯೆನ್ನಿ, ಇಂಚರವೆನ್ನಿ,
ಬೀಸಿ ಹೋಗುವ ಗಾಳಿಯೆನ್ನಿ,
ಹಬೆ ಎನ್ನಿ, ಬಾಷ್ಪವೆನ್ನಿ…
ಏನಾದರೂ ಅನ್ನಿ ಈ ಗುಳ್ಳೆಗೆ

ಅನಂತ ಕಾಲದಲಿ, ಅನಂತ ವಸ್ತುವಿನಲಿ
ಅನಂತ ಜಾಗದಲಿ
ಅನಂತಾನಂತ ಗುಳ್ಳೆಗಳಲಿ
ಕ್ಷಣ ಮಾತ್ರವೇ ಇರುವ,
ಯಾವಾಗ ಬೇಕಾದರೂ ಸಿಡಿವ
ನೀರ ನಿರ್ಮಿತಿ ಮಾತ್ರವೇ
ನಾನೆನುವ ನಿಜವು ಮರೆಯದಿರಲಿ.

Previous post ಹಾಯ್ಕು
ಹಾಯ್ಕು
Next post ವಚನ – ಚಿಂತನ
ವಚನ – ಚಿಂತನ

Related Posts

ನಿನ್ನೆ-ಇಂದು
Share:
Poems

ನಿನ್ನೆ-ಇಂದು

May 10, 2022 ಕೆ.ಆರ್ ಮಂಗಳಾ
ನಿನ್ನೆ- ಬೆಳಗ ಕಾಣದ ಮಸುಕು ಚಿತ್ತದ ಜಾಡ್ಯ, ಮರೆವಿನ ಬಾಧೆ ಬೆಂಬಿಡದ ಕಾಮನೆಗಳಲಿ ಬಂಧಿಯಾಗಿದೆ ಜೀವ ಬಿಡಿಸು ಗುರುವೆ ಇದರ ಪ್ರವರ… ಇಂದು- ಬೆಳಕ ಕೊಡುತಿಹ ಆ ದೀಪ ಯಾವುದಕೆ...
ಮಣ್ಣಲ್ಲಿ ಹುಟ್ಟಿ…
Share:
Poems

ಮಣ್ಣಲ್ಲಿ ಹುಟ್ಟಿ…

February 6, 2025 ಜ್ಯೋತಿಲಿಂಗಪ್ಪ
ಬರಿದಾಗದ ಕನಸುಗಳು ಮರೆವಿಗೆ ಸರಿಯವೇ.. ಕನಸುಗಳ ನುಂಗಿ ನುಂಗಿ ಕಣ್ಣೇನೂ ಬತ್ತವು ತುಂಬಲು ಆಸೆಯೇ ಇಲ್ಲ ಖಾಲಿ ಆಗುವುದು ಏನೂ ಇರದು ಆಸೆ ಹೊತ್ತ ಮನವಿಲ್ಲ ನಿರಾಸೆ ಎಂಬುದೇನೋ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬೆಳಕಿನ ಹುಳು
ಬೆಳಕಿನ ಹುಳು
December 9, 2025
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
January 15, 2026
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
March 6, 2024
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
ಬಸವಬಳ್ಳಿಗಳ ಸಾಂಸ್ಕೃತಿಕ ಯಾತ್ರೆ
March 9, 2023
ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು
May 10, 2023
ಮುಕ್ತಾಯಕ್ಕ- ಅಲ್ಲಮರ ಸಂವಾದ
ಮುಕ್ತಾಯಕ್ಕ- ಅಲ್ಲಮರ ಸಂವಾದ
October 13, 2022
ಬೆಳಕಿನೆಡೆಗೆ…
ಬೆಳಕಿನೆಡೆಗೆ…
June 10, 2023
ವಚನಗಳಲ್ಲಿ ಶಿವ
ವಚನಗಳಲ್ಲಿ ಶಿವ
September 4, 2018
ಯಾಕೀ ಗೊಡವೆ?
ಯಾಕೀ ಗೊಡವೆ?
August 10, 2023
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
Copyright © 2026 Bayalu