Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ದಾರಿಯಲ್ಲದ ದಾರಿ…
Share:
Poems October 10, 2023 ಕೆ.ಆರ್ ಮಂಗಳಾ

ದಾರಿಯಲ್ಲದ ದಾರಿ…

ಗುರು ತೋರಿದ ದಾರಿಯಲಿ
ಬಂಡೆಗಳ ಸಿಡಿಸಬೇಕು
ಗುಡ್ಡಗಳ ಒಡೆಯಬೇಕು
ಕಮರಿ, ಹೊಳ್ಳ ದಾಟಬೇಕು
ಮುಳ್ಳುಗಂಟಿ ಕಿತ್ತಬೇಕು

ಇಷ್ಟಪಟ್ಟು ನಡೆಯದಿದ್ದರೆ
ಇದು ಬಲು ಕಷ್ಟದ ದಾರಿ

ಧರ್ಮಗ್ರಂಥಗಳ ಹಿಡಿದರೆ
ಎದುರಿದ್ದೂ ಕಾಣದಾ ದಾರಿ

ಮಾತಿನಾಟಕೆ ಸಿಲುಕಿದರೆ
ಮರೆಯಾಗೋ ದಾರಿ

ಅರ್ಥಕ್ಕೆ ಆತುಕೊಂಡರೆ
ಪತ್ತೆಯಾಗದ ದಾರಿ

ಜ್ಞಾನದಾಹಕೆ ಬಾಯ್ತೆರೆದರೆ
ಮರೀಚಿಕೆಯಾಗೋ ದಾರಿ

ಯೋಗದ ಬೆನ್ನ ಬಿದ್ದರೆ
ದೂರ ಉಳಿಯುವ ದಾರಿ

ನಮ್ಮ ಕಗ್ಗಾಡನ್ನು
ನಾವೇ ತರಿಯಬೇಕು
ನಮ್ಮ ಕದಳಿಯ ಹೊಲಬ
ನಾವೇ ಅರಿಯಬೇಕು

ಕೆಚ್ಚಿರಬೇಕು ನಡೆಯುದಕೆ
ಹುಚ್ಚಿರಬೇಕು ಬಿಡೆ ಎನ್ನಲಿಕೆ
ಪಟ್ಟುಹಿಡಿಯಲೇ ಬೇಕು
ಬಾಗದ ಮನಸಿನ ಮುಂದೆ

ಸರಳಾತಿ ಸರಳವಾಗಿದ್ದರೂ
ಸುಲಭದಲಿ ಸಿಗದು
ಹಮ್ಮುಬಿಮ್ಮುಗಳಿಗಂತೂ
ಹತ್ತಿರವೇ ಸುಳಿಯದು
ಅಂತಿಂಥದಲ್ಲ ಈ ಮಹಾದಾರಿ
ಕರುಣೆಯಲಿ ಗುರು ಕೊಟ್ಟ
ಶಿವಪಥಕೊಯ್ಯುವ ಈ ರಹದಾರಿ.

Previous post ಕನ್ನಡಿ ನಂಟು
ಕನ್ನಡಿ ನಂಟು
Next post ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ

Related Posts

ನನ್ನೊಳಗಿನ ನೀನು
Share:
Poems

ನನ್ನೊಳಗಿನ ನೀನು

April 29, 2018 ಕೆ.ಆರ್ ಮಂಗಳಾ
ನಿನ್ನೆ ನಾಳೆಯ ನಡುವೆ ಜೀವಯಾನ ಮಾತು-ಮೌನದ ನಡುವೆ ಭಾವಯಾನ… ಅಲ್ಲಿಷ್ಟು ಇಲ್ಲಿಷ್ಟು ಆಗಸದ ಅಗಲಕ್ಕೂ ಹರಿದ ಹತ್ತಿಯ ತುಂಡು ಮನದ ಭಿತ್ತಿಯ ಮೇಲೆ ಅಸ್ಪಷ್ಟ ಹೆಜ್ಜೆ ಗುರುತು ಕಳವಳದ...
ಗುರುಪಥ
Share:
Poems

ಗುರುಪಥ

January 4, 2020 ಕೆ.ಆರ್ ಮಂಗಳಾ
ಎಲ್ಲೆಲ್ಲಿಯೋ ಸುತ್ತಿ, ಎಲ್ಲೆಲ್ಲಿಯೋ ಅಲೆದು ಕಂಡಕಂಡವರನ್ನೆಲ್ಲ ಕೇಳಿ ಓದುಬಲ್ಲವರನ್ನೆಲ್ಲ ಹುಡುಕಿ ಸುಸ್ತಾದದ್ದೆ ಬಂತು, ದಾರಿ ಸಿಗಲಿಲ್ಲ ಹೇಳುವದನ್ನೆಲ್ಲ ಹಿಡಿದು...

Comments 1

  1. Padmalaya
    Oct 11, 2023 Reply

    ಕಿತ್ತಬೇಕು ಅಲ್ಲಮ್ಮಕೀಳಬೇಕು

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
ಶರಣರ ಮನೆಯ ಲೆಂಗಿಯ ಡಿಂಗರಿಗ ನಾನು: ಬಸವಣ್ಣ
September 4, 2018
ಸನ್ಯಾಸ ದೀಕ್ಷೆ
ಸನ್ಯಾಸ ದೀಕ್ಷೆ
June 12, 2025
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
ಕಲ್ಯಾಣ ಕೈಲಾಸವೆಂಬ ನುಡಿ ಹಸನಾಯಿತ್ತು
December 6, 2020
ಮೈಯೆಲ್ಲಾ ಕಣ್ಣಾಗಿ (10)
ಮೈಯೆಲ್ಲಾ ಕಣ್ಣಾಗಿ (10)
September 13, 2025
ಅರಿವು ಕಣ್ತೆರೆಯದವರಲಿ….
ಅರಿವು ಕಣ್ತೆರೆಯದವರಲಿ….
August 5, 2018
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
ಒಂದು ಕನಸಿನಲ್ಲಿ ಪೇಜಾವರರು ಮತ್ತು ಲಿಂಗಾಯತರು
ಒಂದು ಕನಸಿನಲ್ಲಿ ಪೇಜಾವರರು ಮತ್ತು ಲಿಂಗಾಯತರು
September 5, 2019
ಸವೇಜನಾಃ ಸುಖಿನೋ ಭವಂತು
ಸವೇಜನಾಃ ಸುಖಿನೋ ಭವಂತು
August 2, 2020
ಭಕ್ತನೆಂತಪ್ಪೆ?
ಭಕ್ತನೆಂತಪ್ಪೆ?
April 29, 2018
Copyright © 2026 Bayalu