Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ದಾರಿಯಲ್ಲದ ದಾರಿ…
Share:
Poems October 10, 2023 ಕೆ.ಆರ್ ಮಂಗಳಾ

ದಾರಿಯಲ್ಲದ ದಾರಿ…

ಗುರು ತೋರಿದ ದಾರಿಯಲಿ
ಬಂಡೆಗಳ ಸಿಡಿಸಬೇಕು
ಗುಡ್ಡಗಳ ಒಡೆಯಬೇಕು
ಕಮರಿ, ಹೊಳ್ಳ ದಾಟಬೇಕು
ಮುಳ್ಳುಗಂಟಿ ಕಿತ್ತಬೇಕು

ಇಷ್ಟಪಟ್ಟು ನಡೆಯದಿದ್ದರೆ
ಇದು ಬಲು ಕಷ್ಟದ ದಾರಿ

ಧರ್ಮಗ್ರಂಥಗಳ ಹಿಡಿದರೆ
ಎದುರಿದ್ದೂ ಕಾಣದಾ ದಾರಿ

ಮಾತಿನಾಟಕೆ ಸಿಲುಕಿದರೆ
ಮರೆಯಾಗೋ ದಾರಿ

ಅರ್ಥಕ್ಕೆ ಆತುಕೊಂಡರೆ
ಪತ್ತೆಯಾಗದ ದಾರಿ

ಜ್ಞಾನದಾಹಕೆ ಬಾಯ್ತೆರೆದರೆ
ಮರೀಚಿಕೆಯಾಗೋ ದಾರಿ

ಯೋಗದ ಬೆನ್ನ ಬಿದ್ದರೆ
ದೂರ ಉಳಿಯುವ ದಾರಿ

ನಮ್ಮ ಕಗ್ಗಾಡನ್ನು
ನಾವೇ ತರಿಯಬೇಕು
ನಮ್ಮ ಕದಳಿಯ ಹೊಲಬ
ನಾವೇ ಅರಿಯಬೇಕು

ಕೆಚ್ಚಿರಬೇಕು ನಡೆಯುದಕೆ
ಹುಚ್ಚಿರಬೇಕು ಬಿಡೆ ಎನ್ನಲಿಕೆ
ಪಟ್ಟುಹಿಡಿಯಲೇ ಬೇಕು
ಬಾಗದ ಮನಸಿನ ಮುಂದೆ

ಸರಳಾತಿ ಸರಳವಾಗಿದ್ದರೂ
ಸುಲಭದಲಿ ಸಿಗದು
ಹಮ್ಮುಬಿಮ್ಮುಗಳಿಗಂತೂ
ಹತ್ತಿರವೇ ಸುಳಿಯದು
ಅಂತಿಂಥದಲ್ಲ ಈ ಮಹಾದಾರಿ
ಕರುಣೆಯಲಿ ಗುರು ಕೊಟ್ಟ
ಶಿವಪಥಕೊಯ್ಯುವ ಈ ರಹದಾರಿ.

Previous post ಕನ್ನಡಿ ನಂಟು
ಕನ್ನಡಿ ನಂಟು
Next post ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ

Related Posts

ಅರ್ಥ – ವ್ಯರ್ಥ
Share:
Poems

ಅರ್ಥ – ವ್ಯರ್ಥ

April 5, 2026 ಜಬೀವುಲ್ಲಾ ಎಂ.ಅಸದ್
ಮುಗಿಲಿಗೆ ಜಿಗಿದ ಪಾದ ಮಸ್ತಕದ ಕಂದಕದಲ್ಲಿ ಚಿಗುರಿ ಶತಮಾನಗಳ ಮೊಳೆ ಹೊಡೆದ ಬಿಸಿ ನೆತ್ತರು ಹೆಪ್ಪುಗಟ್ಟಿದ ಗುರುತು ಕಾಲದ ಸಹಿಯಾಗಿ ಬದಲಾಗಿ ಉಸಿರ ಗೊರಿಯೊಳಗೆ ಬೆರೆತು ಹೆಜ್ಜೆ...
ನಾನೊಂದು ನೀರ್ಗುಳ್ಳೆ
Share:
Poems

ನಾನೊಂದು ನೀರ್ಗುಳ್ಳೆ

September 6, 2023 ಕೆ.ಆರ್ ಮಂಗಳಾ
ಕಾಲದ ಊದುಗೊಳವೆಯಲಿ ನಿರಂತರವಾಗಿ ಉಕ್ಕುತಿವೆ ಅನಂತಾನಂತ ನೀರ್ಗುಳ್ಳೆ ಎಲ್ಲಕೂ ಒಂದೇ ಹುಟ್ಟು ಒಂದೇ ಬಗೆಯ ಸಂಯೋಜನೆ ನಾ ಬೇರೆ ನೀ ಬೇರೆ ಅಂವ ಬೇರೆ ಇಂವ ಬೇರೆ ನಾ ಮೇಲು ನೀ ಕೆಳಗೆ...

Comments 1

  1. Padmalaya
    Oct 11, 2023 Reply

    ಕಿತ್ತಬೇಕು ಅಲ್ಲಮ್ಮಕೀಳಬೇಕು

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಲಿಂಗಾಯತ ಧರ್ಮದ ನಿಜದ ನಿಲುವು
ಲಿಂಗಾಯತ ಧರ್ಮದ ನಿಜದ ನಿಲುವು
April 29, 2018
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
April 29, 2018
ಕುರುಹೇ ಬಯಲು
ಕುರುಹೇ ಬಯಲು
February 16, 2026
ಹೆಂಗೂಸೆಂಬ ಭಾವ ತೋರದ ಮುನ್ನ…
ಹೆಂಗೂಸೆಂಬ ಭಾವ ತೋರದ ಮುನ್ನ…
June 10, 2023
ದಾರಿ ಬಿಡಿ…
ದಾರಿ ಬಿಡಿ…
December 6, 2020
ಅಲ್ಲಮಪ್ರಭುದೇವರ ಸ್ವರವಚನಗಳು
ಅಲ್ಲಮಪ್ರಭುದೇವರ ಸ್ವರವಚನಗಳು
December 9, 2025
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
July 1, 2018
ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
March 17, 2021
ನಡುವೆ ಸುಳಿವಾತ್ಮ…
ನಡುವೆ ಸುಳಿವಾತ್ಮ…
April 6, 2024
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
Copyright © 2026 Bayalu