Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನನ್ನೆದುರು ನಾ…
Share:
Poems March 6, 2024 ಕೆ.ಆರ್ ಮಂಗಳಾ

ನನ್ನೆದುರು ನಾ…

ಅದೇಕೋ ಮೊನ್ನೆ ಮೊನ್ನೆ
ಸಂತೆ ತೋರುವೆ, ಜಾತ್ರೆ ನೋಡುವೆ
ನಡಿ ನನ್ನೊಡನೆ ಎಂದ ಗುರು
ಹಿಗ್ಗಿನಲಿ, ಗೆಲುವಿನಲಿ
ಚೆಂದದ ಸಿಂಗಾರದಲಿ
ಹೊರಟಿತ್ತು ನನ್ನ ಮೆರವಣಿಗೆ
ಸಂಭ್ರಮವೇನು, ಕುತೂಹಲಗಳೇನು
ಪ್ರಶ್ನೆಗಳ ಸುರಿಮಳೆಯೇನು…

ಆತನ ದಾಪುಗಾಲಿಗೆ ಸಮವೇ
ನನ್ನ ಪುಟ್ಟ ಹೆಜ್ಜೆ
ಸೋಲುತಿದ್ದವು… ಎಷ್ಟುದ್ದದ ದಾರಿ…
ಸಾಕೆನಿಸಿ ದಣಿವಾಗಿ ಅಲ್ಲಲ್ಲಿ ನಿಂತಾಗ
ಕತೆಯ ನೇಯುತ ನಡೆಸುತಿದ್ದ
ದಣಿವ ಮರೆಸುತ್ತಾ…

ಯಾರ ಮಾತೂ ಯಾರಿಗೂ ಕೇಳದ
ಜನಜಂಗುಳಿಯ ಮುಂದೆ…
ಬಂದು ನಿಂತದ್ದೇ ತಿಳಿಯಲಿಲ್ಲ
ಗೌಜಿನಲಿ ಕಳೆದೀಯ,
ತಪ್ಪಿಸಿಕೊಂಡು ಅಲೆದೀಯ
ಜೋಪಾನವೆನುತಾ ಕೈಯ ಬಿಟ್ಟಿದ್ದಾ…

ಯಾರಿವರು ನೆರೆದವರು
ನಂಟರು, ಗುರುತಿನವರು
ಯಾರಾದರೂ ಇದ್ದಾರೆಯೇ
ಕತ್ತು ಹೊರಳಿಸಿದಲೆಲ್ಲಾ
ಕಣ್ಣಿಟ್ಟು ದಿಟ್ಟಿಸಿದಡಲೆಲ್ಲಾ
ಅರೆ, ನನ್ನದೇ ನೋಟ!!

ಮೈಯು ಬೆವತಿತ್ತು, ಎದೆಯು ನಡುಗಿತ್ತು
ಎಲ್ಲ ಮುಖಗಳಲೂ ನನ್ನದೇ ಬಿಂಬ
ಮರೆವೋ… ಅರಿವೋ…
ಭ್ರಮೆಯ ಹಿಂದಿತ್ತು
ನಾನು, ನಾನು, ನಾನು…
ಕನ್ನಡಿಯ ಕೋಣೆಯಲಿ
ಸಿಕ್ಕಿ ಬಿದ್ದಿಹ ಸತ್ಯ ಕಣ್ಣೆದುರೆ ತೆರೆದಿತ್ತು…
ಅಹಂಕಾರ ಮನವನಿಂಬುಗೊಂಡಲ್ಲಿ
ಲಿಂಗ ತಾನೆಲ್ಲಿಯದೋ?

Previous post ಈ ಕನ್ನಡಿ
ಈ ಕನ್ನಡಿ
Next post ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ

Related Posts

ಭಾರ
Share:
Poems

ಭಾರ

October 6, 2020 ಕೆ.ಆರ್ ಮಂಗಳಾ
ಕಳೆದು ಹೋದ ದಿನಗಳ ಭಾರ ಉಳಿಸಿಕೊಂಡ ನೆನಪಿನ ಭಾರ ಕಾಣದಿರುವ ಕ್ಷಣಗಳ ಭಾರ ಕಲ್ಪನೆಗಳ ಹೆಣಿಕೆಯ ಭಾರ… ಹೊರಲಾರೆ ತಂದೆ ಈ ತಲೆಭಾರ ಹೊತ್ತು ನಡೆಯಲಾರೆ ಮುಂದೆ… ಹಳಸಿಹೋದ ವಿಷಯದ ಭಾರ...
ಸಾವಿನ ಅರಿವೆ ಕಳಚಿ!
Share:
Poems

ಸಾವಿನ ಅರಿವೆ ಕಳಚಿ!

September 14, 2024 ಜಬೀವುಲ್ಲಾ ಎಂ.ಅಸದ್
ತೆರೆದ ಬೆಂಕಿಯ ಕಣ್ಣಲಿ ತಾವರೆಯ ಪ್ರತಿಬಿಂಬ ಕತ್ತಲೆ ಬೆಳಕಿನ ನಡುವಿನ ಯುದ್ಧ ಮುಗುಳ್ನಕ್ಕ ಬುದ್ಧ! ಕಟ್ಟಿದ ಸೇತುವೆ ಬಳಸಿದ ಲತೆ ಚಿಗುರಿದ ಎಲೆಎಲೆಯ ತುಂಬಾ ಇಬ್ಬನಿಯ ಕಲರವ...

Comments 1

  1. ಮುಗದ
    Mar 20, 2024 Reply

    ಹುಡುಕುವದು ನನ್ನೊಳಗೆ ಇದೆ ಎಂಬುದು ತಿಳಿಯದೆ ಕಾಡು ಮೇಡುಗಳನ್ನೆಲ್ಲ ಸುತ್ತಿ ಅಲೆದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಿನ್ನದೊಂದು ಸ್ಪರ್ಶ
ನಿನ್ನದೊಂದು ಸ್ಪರ್ಶ
February 16, 2026
ನಿಮ್ಮಿಂದಲೇ ನಾನು
ನಿಮ್ಮಿಂದಲೇ ನಾನು
February 11, 2022
ಆಕಾರ-ನಿರಾಕಾರ
ಆಕಾರ-ನಿರಾಕಾರ
January 7, 2022
ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
October 13, 2022
ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು
May 10, 2023
ವೇದ ಶಾಸ್ತ್ರದವರ ಹಿರಿಯರೆನ್ನೆ…
ವೇದ ಶಾಸ್ತ್ರದವರ ಹಿರಿಯರೆನ್ನೆ…
October 21, 2024
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
May 1, 2019
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
July 10, 2025
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
April 29, 2018
ಕೈಗೆಟುಕಿದ ಭಾವ ಬುತ್ತಿ
ಕೈಗೆಟುಕಿದ ಭಾವ ಬುತ್ತಿ
July 10, 2025
Copyright © 2026 Bayalu