Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುಟುಕು ಆಸೆ…
Share:
Poems May 8, 2024 ಜ್ಯೋತಿಲಿಂಗಪ್ಪ

ಗುಟುಕು ಆಸೆ…

ಕಣ್ಣ
ಮುಂದಣ ಬೆಳಕು ಹಿಂದಣ ನೆರಳು
ಕಂಡೂ ಕಾಣವು

ಈ
ಕಣ್ಣಿಗೆ ನಾಚಿಕೆಯೇ ಸದ್ದು
ಕಾಣಲು ಹವಣಿಸುವುದು
ಸದ್ದು ಕಾಣುವುದೇ..ಕೇಳಿಸಿಕೋ

ಗಗನಕ್ಕೆ ಬಯಲುಂಟೇ
ಬಯಲಿಗೆ ಗಗನ ಉಂಟೇ

ರಗುತದ ನೀರೆಲ್ಲವ ಹಿಂಡಿ ಹಿಂಡಿ
ತೆಗೆದಿದೆ ಈ ಬಿಸಿಲು
ಒಣಗಲು ಏನುಂಟು

ಮೇಲೆ ಕೆಳಗೆ ಎಂಬುದು
ನನ್ನ ಕಣ್ಣ ಗೆರೆ

ಆದಿಗೂ ಮುನ್ನ ಏನಿತ್ತು
ಅಂತ್ಯದ ಆಚೆ ಏನಿದೆ

ಇರುವೆ ಅಳೆಯಲು ಮಾನ ಆನೆ

ಮರಳ ಕಣದಷ್ಟಿರುವ ಮನಕೆ
ಬಂಡೆಯಷ್ಟು ಬಯಕೆ
ಉದ್ದಕ್ಕೂ ಇಚ್ಛೆ ನೆರಳು

ಹಸಿ ರಕ್ತ ಒಣಗಿದೆ
ರಾಗವಿಲ್ಲ ದ್ವೇಷ ಇಲ್ಲ

ಕಳ್ಳಗತ್ತಲು ಸುಳ್ಳು ಹುಡುಕುವುದು

ಈ
ಆಸೆ ಒಂದು ಗುಟುಕು
ಒಂದೊಂದೇ ಗುಟುಕು ಈ ಆಸೆ

ಬಾಯಾರದೆ ಕುಡಿದು ಬಿಟ್ಟ ನೀರು
ಈ ಕೆರೆ ನುಂಗುತಿದೆ

ಖಾಲೀ ಇರುವ ಕನ್ನಡಿ
ಎದುರು ನಿಂತು ನಾನು ತುಂಬುತಿರುವೆ.

Previous post ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
Next post ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…

Related Posts

ಮಣ್ಣಲ್ಲಿ ಹುಟ್ಟಿ…
Share:
Poems

ಮಣ್ಣಲ್ಲಿ ಹುಟ್ಟಿ…

February 6, 2025 ಜ್ಯೋತಿಲಿಂಗಪ್ಪ
ಬರಿದಾಗದ ಕನಸುಗಳು ಮರೆವಿಗೆ ಸರಿಯವೇ.. ಕನಸುಗಳ ನುಂಗಿ ನುಂಗಿ ಕಣ್ಣೇನೂ ಬತ್ತವು ತುಂಬಲು ಆಸೆಯೇ ಇಲ್ಲ ಖಾಲಿ ಆಗುವುದು ಏನೂ ಇರದು ಆಸೆ ಹೊತ್ತ ಮನವಿಲ್ಲ ನಿರಾಸೆ ಎಂಬುದೇನೋ...
ಗುರುವೆ ಸುಜ್ಞಾನವೇ…
Share:
Poems

ಗುರುವೆ ಸುಜ್ಞಾನವೇ…

September 7, 2021 ಕೆ.ಆರ್ ಮಂಗಳಾ
ಇದೆ ಎಂದೊಲಿದದ್ದು ಇಲ್ಲ ಹಾಗೇನೂ ಅಲ್ಲ ಎಂದು ಬಲವಾಗಿ ನಂಬಿದ್ದೂ ಇಲ್ಲವೇ ಇಲ್ಲ… ಹಂಬಲಿಸಿ ಹಿಡಿದಿದ್ದೆ ಹಟ ತೊಟ್ಟು ಪಡೆದಿದ್ದೆ ಹಬ್ಬಿಸಿಕೊಂಡಿದ್ದೇ ಕುಸುರಿ ಭಾವಗಳ, ಮನದ...

Comments 2

  1. Padmalaya
    May 9, 2024 Reply

    ಜೋತಿಲಿಂಗಪ್ಪನವರ ಕಾವ್ಯದ ಓದು ಸಂಕಟದ ಸಂಗತಿ.ಬೌದ್ಧ ಮೀಮಾಂಸೆ ಒಂದು ಕಡೆ ಹೇಳುತ್ತದೆ….ನಿಸರ್ಗ ಧರ್ಮ ಭಾಷೆ ಮತ್ತು ಮಾತಿಗೆ ಸಿಗುವಂತಹದ್ದಲ್ಲ.ಆದರೆ ಭಾಷೆ ಮತ್ತು ಮಾತಿನ ಹೊರತು ಧರ್ಮ ಇರಲಾರದು. ಈ ನೆಲೆ ಯಿಂದ ಅವರ ಕಾವ್ಯವನ್ನ ಪ್ರವೇಶಿಸಿದರೆ,ಅವರ ಐಡಿಯಾಲಜಿ ಗೊತ್ತಾಗಿ ಬಿಡುತ್ತದೆ.ಐಡಿಯಾಲಜಿ ಇಲ್ಲದೆ ಕಾವ್ಯ ಅಸಾಧ್ಯ.

  2. ವರದರಾಜ್, ಬೆಂಗಳೂರು
    May 9, 2024 Reply

    ಗುಟುಕು ಆಸೆಗಳೇ ಜೀವನವನ್ನು ಸ್ವಾಹಾ ಮಾಡಿಬಿಡುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಒಳಗನರಿವ ಬೆಡಗು
ಒಳಗನರಿವ ಬೆಡಗು
September 10, 2022
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ವಚನ ಸಾಹಿತ್ಯದ ಹಿರಿಮೆ
ವಚನ ಸಾಹಿತ್ಯದ ಹಿರಿಮೆ
September 6, 2023
ಮಾತು ಮಾಯೆ
ಮಾತು ಮಾಯೆ
July 4, 2021
ಪಾದಕೂ ನೆಲಕೂ…
ಪಾದಕೂ ನೆಲಕೂ…
June 14, 2024
ಶರಣರು ಕಂಡ ಸಹಜಧರ್ಮ
ಶರಣರು ಕಂಡ ಸಹಜಧರ್ಮ
April 29, 2018
ಕಾಲ ಎಲ್ಲಿದೆ?
ಕಾಲ ಎಲ್ಲಿದೆ?
January 7, 2022
ಹಿರಿಯರ ಹಾದಿ…
ಹಿರಿಯರ ಹಾದಿ…
July 4, 2022
ಲಿಂಗಾಯತರು ಮತ್ತು ಬಸವತತ್ವ
ಲಿಂಗಾಯತರು ಮತ್ತು ಬಸವತತ್ವ
May 10, 2023
ಸತ್ಯದ ಬೆನ್ನು ಹತ್ತಿ…
ಸತ್ಯದ ಬೆನ್ನು ಹತ್ತಿ…
April 29, 2018
Copyright © 2026 Bayalu