Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗುಟುಕು ಆಸೆ…
Share:
Poems May 8, 2024 ಜ್ಯೋತಿಲಿಂಗಪ್ಪ

ಗುಟುಕು ಆಸೆ…

ಕಣ್ಣ
ಮುಂದಣ ಬೆಳಕು ಹಿಂದಣ ನೆರಳು
ಕಂಡೂ ಕಾಣವು

ಈ
ಕಣ್ಣಿಗೆ ನಾಚಿಕೆಯೇ ಸದ್ದು
ಕಾಣಲು ಹವಣಿಸುವುದು
ಸದ್ದು ಕಾಣುವುದೇ..ಕೇಳಿಸಿಕೋ

ಗಗನಕ್ಕೆ ಬಯಲುಂಟೇ
ಬಯಲಿಗೆ ಗಗನ ಉಂಟೇ

ರಗುತದ ನೀರೆಲ್ಲವ ಹಿಂಡಿ ಹಿಂಡಿ
ತೆಗೆದಿದೆ ಈ ಬಿಸಿಲು
ಒಣಗಲು ಏನುಂಟು

ಮೇಲೆ ಕೆಳಗೆ ಎಂಬುದು
ನನ್ನ ಕಣ್ಣ ಗೆರೆ

ಆದಿಗೂ ಮುನ್ನ ಏನಿತ್ತು
ಅಂತ್ಯದ ಆಚೆ ಏನಿದೆ

ಇರುವೆ ಅಳೆಯಲು ಮಾನ ಆನೆ

ಮರಳ ಕಣದಷ್ಟಿರುವ ಮನಕೆ
ಬಂಡೆಯಷ್ಟು ಬಯಕೆ
ಉದ್ದಕ್ಕೂ ಇಚ್ಛೆ ನೆರಳು

ಹಸಿ ರಕ್ತ ಒಣಗಿದೆ
ರಾಗವಿಲ್ಲ ದ್ವೇಷ ಇಲ್ಲ

ಕಳ್ಳಗತ್ತಲು ಸುಳ್ಳು ಹುಡುಕುವುದು

ಈ
ಆಸೆ ಒಂದು ಗುಟುಕು
ಒಂದೊಂದೇ ಗುಟುಕು ಈ ಆಸೆ

ಬಾಯಾರದೆ ಕುಡಿದು ಬಿಟ್ಟ ನೀರು
ಈ ಕೆರೆ ನುಂಗುತಿದೆ

ಖಾಲೀ ಇರುವ ಕನ್ನಡಿ
ಎದುರು ನಿಂತು ನಾನು ತುಂಬುತಿರುವೆ.

Previous post ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
Next post ರೆಕ್ಕೆ ಬಿಚ್ಚಿ…
ರೆಕ್ಕೆ ಬಿಚ್ಚಿ…

Related Posts

ಬೆಳಕು ಸಿಕ್ಕೀತೆ?
Share:
Poems

ಬೆಳಕು ಸಿಕ್ಕೀತೆ?

March 9, 2023 ಜ್ಯೋತಿಲಿಂಗಪ್ಪ
ಈಗ ನೀನು ಮರೆವು ನಾನು ಇರುವೆ ನಾ.. ಹೇಳ ಬಾರದು ಕೇಳ ಬಾರದು ಬಾಳೆ ಹಣ್ಣಾಗಿ ಈಗಷ್ಟೇ ಬಾಗಿದೆ ಏನೇ ಹೇಳಿ ಕಾಣುವುದೆಲ್ಲಾ ಸತ್ಯವೇ ಅಲ್ಲಾ ಏನೂ ಆಗಬಹುದು ಆಕಾಶ ಮೈದೆರೆದರೆ ಬಯಲು...
ತುತ್ತೂರಿ…
Share:
Poems

ತುತ್ತೂರಿ…

June 10, 2023 ಕೆ.ಆರ್ ಮಂಗಳಾ
ತುತ್ತೂರಿ ತುತ್ತೂರಿ ಯಾಕೆ ಇಂತಹ ಪಿತೂರಿ? ಯಾವುದೇ ಮಾತಲೂ ನಿನ್ನದೇ ರಾಗ ಯಾವುದೇ ಭಾವಕೂ ನಿನ್ನದೇ ತಾಳ ಬಾಯಿಬಿಟ್ಟರೂ ನಿನ್ನದೇ ಗಾನ ಮೌನದಲಿದ್ದರೂ ನಿನ್ನದೇ ಧ್ಯಾನ...

Comments 2

  1. Padmalaya
    May 9, 2024 Reply

    ಜೋತಿಲಿಂಗಪ್ಪನವರ ಕಾವ್ಯದ ಓದು ಸಂಕಟದ ಸಂಗತಿ.ಬೌದ್ಧ ಮೀಮಾಂಸೆ ಒಂದು ಕಡೆ ಹೇಳುತ್ತದೆ….ನಿಸರ್ಗ ಧರ್ಮ ಭಾಷೆ ಮತ್ತು ಮಾತಿಗೆ ಸಿಗುವಂತಹದ್ದಲ್ಲ.ಆದರೆ ಭಾಷೆ ಮತ್ತು ಮಾತಿನ ಹೊರತು ಧರ್ಮ ಇರಲಾರದು. ಈ ನೆಲೆ ಯಿಂದ ಅವರ ಕಾವ್ಯವನ್ನ ಪ್ರವೇಶಿಸಿದರೆ,ಅವರ ಐಡಿಯಾಲಜಿ ಗೊತ್ತಾಗಿ ಬಿಡುತ್ತದೆ.ಐಡಿಯಾಲಜಿ ಇಲ್ಲದೆ ಕಾವ್ಯ ಅಸಾಧ್ಯ.

  2. ವರದರಾಜ್, ಬೆಂಗಳೂರು
    May 9, 2024 Reply

    ಗುಟುಕು ಆಸೆಗಳೇ ಜೀವನವನ್ನು ಸ್ವಾಹಾ ಮಾಡಿಬಿಡುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ
March 17, 2021
ಮಾತು ಮಾಯೆ
ಮಾತು ಮಾಯೆ
July 4, 2021
ಕಾಲ- ಕಲ್ಪಿತವೇ?
ಕಾಲ- ಕಲ್ಪಿತವೇ?
April 11, 2025
ಗುರು-ಶಿಷ್ಯ ಸಂಬಂಧ
ಗುರು-ಶಿಷ್ಯ ಸಂಬಂಧ
August 8, 2021
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
ಮಠಗಳೂ, ಮಠಾಧೀಶರೂ ಮತ್ತು ಹೋರಾಟವೂ
April 29, 2018
ಕಾಲನೆಂಬ ಜಾಲಗಾರ…
ಕಾಲನೆಂಬ ಜಾಲಗಾರ…
January 7, 2019
ದಾರಿ ಬಿಡಿ…
ದಾರಿ ಬಿಡಿ…
December 6, 2020
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
August 11, 2025
ಬಯಲುಡುಗೆಯ ಬೊಂತಾದೇವಿ
ಬಯಲುಡುಗೆಯ ಬೊಂತಾದೇವಿ
February 6, 2019
ಅರಿವಿಗೆ ಬಂದ ಆರು ಸ್ಥಲಗಳು
ಅರಿವಿಗೆ ಬಂದ ಆರು ಸ್ಥಲಗಳು
August 11, 2025
Copyright © 2026 Bayalu