Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಪಾದಕೂ ನೆಲಕೂ…
Share:
Poems June 14, 2024 ಜ್ಯೋತಿಲಿಂಗಪ್ಪ

ಪಾದಕೂ ನೆಲಕೂ…

ಕಣ್ಣೇ ಸೋತಿರಲು
ಈ ಮಾಯಾಂಗನೆ ಬೆತ್ತಲೆ ಆಗುವಳು

ನದಿ
ಒಣಗಿದೆ ಒರತೆಯಲೂ ನೀರು ಜಿನುಗದು

ಕಣ್ಣ
ಒಳಗಣ ದೀಪ ಮಂಕು

ಯಾರಿಗೆ ಗೊತ್ತು
ಯಾವ ದಾರಿ ಎಲ್ಲಿಗೋ
ಪಾದಕೂ ನೆಲಕೂ ಎನಿತು ಅಂತರ

ಈ
ಕಣ್ಣ ಪಾಪೆ ಹೀರಿದ್ದಷ್ಟೇ ಬೆಳಕು
ಪಾಪೆ ಸುಕ್ಕು

ಮೊದಲು ಉಂಡಿಟ್ಟ ತಟ್ಟೆಗಳನೆಲ್ಲಾ ತಿಕ್ಕಿ ತೊಳೆಯಬೇಕು

ಈ ನನ್ನ ಗೆಳತಿಗೆ ಹೇಳುವುದೇನಿದೆ
ಎಲ್ಲಾ ಅರಿತೂ ಅರಿಯದಂತೆ
ಅರಿಯದಿರಲೂ ಅರಿದಂತೆಯೇ ಒಡನಾಡುವ ಚತುರೆ

ಈ
ಧ್ಯಾನದೊಳು ಏನಿದೆಯೋ…
ಏನಿಲ್ಲವೋ…

ಅಳಿಸಲಾಗದು
ಅಂಗೈಯ ಗೆರೆ
ಸಾವು ಎಂಬುದು ಅಮೂರ್ತ.

Previous post ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
Next post ಚಿತ್ತ ಸತ್ಯ…
ಚಿತ್ತ ಸತ್ಯ…

Related Posts

ನೋಟದ ಕೂಟ…
Share:
Poems

ನೋಟದ ಕೂಟ…

May 10, 2023 ಕೆ.ಆರ್ ಮಂಗಳಾ
ಕಾಣುವುದೇ ಒಂದು ನೋಟ ಹೇಳುವುದೇ ಬೇರೊಂದು ಉಸಿರ ಘಮಲಲಿ ಇಲ್ಲಾ ಹಿಡಿದ ವಾಸನೆಯ ಕುರುಹು ಕಿವಿಗೆ ಬಿದ್ದ ಶಬ್ದಕೂ ಕೇಳಿಸಿಕೊಂಡುದಕೂ ಕಾಣಲಿಲ್ಲ ಸಾಮ್ಯತೆ ನಾಲಿಗೆ ರುಚಿಸಿದ್ದಕ್ಕೂ...
ಬಯಲಾಟ
Share:
Poems

ಬಯಲಾಟ

March 17, 2021 ಜ್ಯೋತಿಲಿಂಗಪ್ಪ
ಆ ಮನೆ ಬಿಟ್ಟು ಬಂದಿರುವೆ ಎಂಬುದು ಈಗಲೂ ಇದೆ ಆ ಮನೆ ಇದೆಯೇ ಎಂಬುದು ಈಗಲೂ ಇದೆ ನಿಜ ಸುಳ್ಳು ಎಂಬುದು ನನ್ನ ಹಿತ ಆ ಮನೆ ಸಮುದ್ರ ದಾಟಲು ಹಾರುವ ಚಿಟ್ಟೆ ಹುಡುಕುತಿರುವೆ ಇನ್ನೂ...

Comments 4

  1. Padmalaya
    Jun 14, 2024 Reply

    ಅತ್ಯಂತ….ಅತ್ಯಂತ…ಆಳ..ಕಣ್ಣಿಗೂ ಮೆದುಳಿಗೂ ಸಿಲುಕದಷ್ಟು ದೂರ…ದೂರ

  2. Giri Devaraj
    Jun 16, 2024 Reply

    ಸಾವು ಅಮೂರ್ತ- ಕವನ ಅನುಭಾವಿಕ ನೆಲೆಯಲ್ಲಿ ಮಾತಾಡುತ್ತದೆ🙏🏿

  3. ಬಸವ, ಕರುಣಾ ಜೀವ ಕಲ್ಯಾಣ ಟ್ರಸ್ಟ್, ದಾವಣಗೆರೆ
    Jun 17, 2024 Reply

    ಜ್ಯೋತಿಲಿಂಗಪ್ಪ ಅಣ್ಣಾವ್ರು ನಿಗೂಢ, ನಿಲುಕದ, ಪ್ರಜ್ಞೆ ಆಚೆಗಿನ ಕವಿ ಅನಿಸಿ ಮಿಂಚಿನಂತೆ ಅಲ್ಪ ಸ್ವಲ್ಪ ಅರ್ಥ ಗೋಚರಿಸಿ ನನ್ನ ಮಂದ ಮತಿಯ ಮಿತಿಯಿದು ಅನಿಸುತ್ತದೆ… ಚಿಂತನೆಗೆ, mysticism ಗೆ ದಾರಿ ತೋರುವ ಅವರಿಗೆ ಧನ್ಯವಾದಗಳು, ಕೃತಜ್ಞತೆಗಳು.

  4. Vishwa Loki
    Jul 1, 2024 Reply

    ಉಂಡಿಟ್ಟ ತಟ್ಟೆಗಳನ್ನೆಲ್ಲಾ ತಿಕ್ಕಿ ತೊಳೆಯುವುದೇ ಬದುಕಾಗಿದೆ. ಉಣ್ಣದೆ ಇರಲು ಸಾಧ್ಯವೇ? ತಿಕ್ಕಿ ತೊಳೆಯುವುದರಿಂದ ಮುಕ್ತಿ ಇಲ್ಲವೇ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನನ್ನ ಶರಣರು…
ನನ್ನ ಶರಣರು…
April 9, 2021
ದಾರಿಯಲ್ಲದ ದಾರಿ…
ದಾರಿಯಲ್ಲದ ದಾರಿ…
October 10, 2023
ಮುಖ- ಮುಖವಾಡ
ಮುಖ- ಮುಖವಾಡ
February 7, 2021
ಬೆಳಗಾವಿ ಅಧೀವೇಶನ: 1924
ಬೆಳಗಾವಿ ಅಧೀವೇಶನ: 1924
December 13, 2024
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
January 7, 2022
ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…
July 10, 2023
ಶಿವಯೋಗ
ಶಿವಯೋಗ
July 4, 2021
‘ಅಲ್ಲಮ’ ಎಂಬ ಹೆಸರು
‘ಅಲ್ಲಮ’ ಎಂಬ ಹೆಸರು
August 6, 2022
ಶಿವಾಚಾರ
ಶಿವಾಚಾರ
April 9, 2021
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
February 11, 2022
Copyright © 2026 Bayalu