Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಪಾದಕೂ ನೆಲಕೂ…
Share:
Poems June 14, 2024 ಜ್ಯೋತಿಲಿಂಗಪ್ಪ

ಪಾದಕೂ ನೆಲಕೂ…

ಕಣ್ಣೇ ಸೋತಿರಲು
ಈ ಮಾಯಾಂಗನೆ ಬೆತ್ತಲೆ ಆಗುವಳು

ನದಿ
ಒಣಗಿದೆ ಒರತೆಯಲೂ ನೀರು ಜಿನುಗದು

ಕಣ್ಣ
ಒಳಗಣ ದೀಪ ಮಂಕು

ಯಾರಿಗೆ ಗೊತ್ತು
ಯಾವ ದಾರಿ ಎಲ್ಲಿಗೋ
ಪಾದಕೂ ನೆಲಕೂ ಎನಿತು ಅಂತರ

ಈ
ಕಣ್ಣ ಪಾಪೆ ಹೀರಿದ್ದಷ್ಟೇ ಬೆಳಕು
ಪಾಪೆ ಸುಕ್ಕು

ಮೊದಲು ಉಂಡಿಟ್ಟ ತಟ್ಟೆಗಳನೆಲ್ಲಾ ತಿಕ್ಕಿ ತೊಳೆಯಬೇಕು

ಈ ನನ್ನ ಗೆಳತಿಗೆ ಹೇಳುವುದೇನಿದೆ
ಎಲ್ಲಾ ಅರಿತೂ ಅರಿಯದಂತೆ
ಅರಿಯದಿರಲೂ ಅರಿದಂತೆಯೇ ಒಡನಾಡುವ ಚತುರೆ

ಈ
ಧ್ಯಾನದೊಳು ಏನಿದೆಯೋ…
ಏನಿಲ್ಲವೋ…

ಅಳಿಸಲಾಗದು
ಅಂಗೈಯ ಗೆರೆ
ಸಾವು ಎಂಬುದು ಅಮೂರ್ತ.

Previous post ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
Next post ಚಿತ್ತ ಸತ್ಯ…
ಚಿತ್ತ ಸತ್ಯ…

Related Posts

ಮಣ್ಣಲ್ಲಿ ಹುಟ್ಟಿ…
Share:
Poems

ಮಣ್ಣಲ್ಲಿ ಹುಟ್ಟಿ…

February 6, 2025 ಜ್ಯೋತಿಲಿಂಗಪ್ಪ
ಬರಿದಾಗದ ಕನಸುಗಳು ಮರೆವಿಗೆ ಸರಿಯವೇ.. ಕನಸುಗಳ ನುಂಗಿ ನುಂಗಿ ಕಣ್ಣೇನೂ ಬತ್ತವು ತುಂಬಲು ಆಸೆಯೇ ಇಲ್ಲ ಖಾಲಿ ಆಗುವುದು ಏನೂ ಇರದು ಆಸೆ ಹೊತ್ತ ಮನವಿಲ್ಲ ನಿರಾಸೆ ಎಂಬುದೇನೋ...
ನಾನೆಲ್ಲಿ ಇದ್ದೆ?
Share:
Poems

ನಾನೆಲ್ಲಿ ಇದ್ದೆ?

April 29, 2018 ಕೆ.ಆರ್ ಮಂಗಳಾ
ಶರಧಿ ಭೂಮಿಯ ನುಂಗಿ ಸೂರ್ಯ ಶರಧಿಯ ನುಂಗಿ ಆಗಸ ಸೂರ್ಯನ ನುಂಗಿ ವಾಯು ಆಗಸ ನುಂಗಿ ಎಲ್ಲ ಎಲ್ಲವ ನುಂಗಿ ನೊಣೆಯುವಾಗ ನಾನೆಲ್ಲಿ ಅಡಗಿದ್ದೆ? ಬಾಲ್ಯ ಭ್ರೂಣವ ನುಂಗಿ ಹರಯ ಬಾಲ್ಯವ...

Comments 4

  1. Padmalaya
    Jun 14, 2024 Reply

    ಅತ್ಯಂತ….ಅತ್ಯಂತ…ಆಳ..ಕಣ್ಣಿಗೂ ಮೆದುಳಿಗೂ ಸಿಲುಕದಷ್ಟು ದೂರ…ದೂರ

  2. Giri Devaraj
    Jun 16, 2024 Reply

    ಸಾವು ಅಮೂರ್ತ- ಕವನ ಅನುಭಾವಿಕ ನೆಲೆಯಲ್ಲಿ ಮಾತಾಡುತ್ತದೆ🙏🏿

  3. ಬಸವ, ಕರುಣಾ ಜೀವ ಕಲ್ಯಾಣ ಟ್ರಸ್ಟ್, ದಾವಣಗೆರೆ
    Jun 17, 2024 Reply

    ಜ್ಯೋತಿಲಿಂಗಪ್ಪ ಅಣ್ಣಾವ್ರು ನಿಗೂಢ, ನಿಲುಕದ, ಪ್ರಜ್ಞೆ ಆಚೆಗಿನ ಕವಿ ಅನಿಸಿ ಮಿಂಚಿನಂತೆ ಅಲ್ಪ ಸ್ವಲ್ಪ ಅರ್ಥ ಗೋಚರಿಸಿ ನನ್ನ ಮಂದ ಮತಿಯ ಮಿತಿಯಿದು ಅನಿಸುತ್ತದೆ… ಚಿಂತನೆಗೆ, mysticism ಗೆ ದಾರಿ ತೋರುವ ಅವರಿಗೆ ಧನ್ಯವಾದಗಳು, ಕೃತಜ್ಞತೆಗಳು.

  4. Vishwa Loki
    Jul 1, 2024 Reply

    ಉಂಡಿಟ್ಟ ತಟ್ಟೆಗಳನ್ನೆಲ್ಲಾ ತಿಕ್ಕಿ ತೊಳೆಯುವುದೇ ಬದುಕಾಗಿದೆ. ಉಣ್ಣದೆ ಇರಲು ಸಾಧ್ಯವೇ? ತಿಕ್ಕಿ ತೊಳೆಯುವುದರಿಂದ ಮುಕ್ತಿ ಇಲ್ಲವೇ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹಣತೆಯ ಹಂಗು
ಹಣತೆಯ ಹಂಗು
October 19, 2025
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
January 7, 2022
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
February 11, 2022
ಮಾಣಿಕ್ಯದ ದೀಪ್ತಿ
ಮಾಣಿಕ್ಯದ ದೀಪ್ತಿ
June 12, 2025
ನಾನು ಯಾರು? ಎಂಬ ಆಳ-ನಿರಾಳ-5
ನಾನು ಯಾರು? ಎಂಬ ಆಳ-ನಿರಾಳ-5
August 2, 2020
ಯಾಲಪದದ ಸೊಗಡು
ಯಾಲಪದದ ಸೊಗಡು
December 13, 2024
ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…
July 10, 2023
ಲಿಂಗ ಕೂಡಲ ಸಂಗಮ
ಲಿಂಗ ಕೂಡಲ ಸಂಗಮ
April 29, 2018
ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…
May 10, 2022
ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
May 8, 2024
Copyright © 2026 Bayalu