Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಾವಿನ ಅರಿವೆ ಕಳಚಿ!
Share:
Poems September 14, 2024 ಜಬೀವುಲ್ಲಾ ಎಂ.ಅಸದ್

ಸಾವಿನ ಅರಿವೆ ಕಳಚಿ!

ತೆರೆದ ಬೆಂಕಿಯ ಕಣ್ಣಲಿ
ತಾವರೆಯ ಪ್ರತಿಬಿಂಬ
ಕತ್ತಲೆ ಬೆಳಕಿನ ನಡುವಿನ ಯುದ್ಧ
ಮುಗುಳ್ನಕ್ಕ ಬುದ್ಧ!

ಕಟ್ಟಿದ ಸೇತುವೆ ಬಳಸಿದ ಲತೆ
ಚಿಗುರಿದ ಎಲೆಎಲೆಯ ತುಂಬಾ
ಇಬ್ಬನಿಯ ಕಲರವ
ಧ್ಯಾನವಾಯಿತು ಭಂಗ!

ನೀಲಮೆಯ ಈಜಿ
ಮರಳಿದೆ ರೆಕ್ಕೆ ಸಂಕುಲ
ಕಡಲ ದಂಡೆಯಲಿ ಗೂಡು ಕಟ್ಟಿ
ಹುಟ್ಟಿತು ಸ್ಥಾವರ!

ದಿಗಂತದ ಬುಟ್ಟಿಯಲಿ
ಹಣ್ಣಾಗಿ ನೇಸರ
ನಾಳೆಗೆ ಮತ್ತೆ ಹುಟ್ಟುವನು
ಸಾವಿನ ಅರಿವೆ ಕಳಚಿ!

Previous post ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
Next post ಹಣತೆ ಸಾಕು
ಹಣತೆ ಸಾಕು

Related Posts

ಈ ಕನ್ನಡಿ
Share:
Poems

ಈ ಕನ್ನಡಿ

March 6, 2024 ಜ್ಯೋತಿಲಿಂಗಪ್ಪ
ಈಗೀಗ ಈ ಕನ್ನಡಿ ನನ್ನ ಮುದುಕನಾಗಿ ತೋರಿಸುತ್ತಿದೆ ಯುವಕನಾಗಿ ಕಾಣಿಸುತ್ತದೆ ನಾನೇನು…. ಮುಟ್ಟಲಾಗದು ಕನ್ನಡಿಯೊಳಗಣ ಬಿಂಬ ಕಣ್ಣಿದ್ದೂ ಕಾಣಲಾಗದು ನಿಜ ಬಿಂಬ ಈ ಕನ್ನಡಿ...
ಯಾಕೀ ಗೊಡವೆ?
Share:
Poems

ಯಾಕೀ ಗೊಡವೆ?

August 10, 2023 ಜ್ಯೋತಿಲಿಂಗಪ್ಪ
ಸಾಯುವುದು ಒಂದು ದಿನ ಇದ್ದೇ ಇದೆ ಬಿಡು ದಿನಾ ಏಕೆ ಸಾಯುವುದು ದಿನಕೆ ಸಾವಿಲ್ಲವೇ ಹುಟ್ಟುವ ಭರವಸೆ ಖಂಡಿತಾ ಹುಟ್ಟೇ ಒಂದು ಮದ ಸಾವರಿತರೆ ಮದ ಸಾವುದು ನಿತ್ಯ ಸತ್ಯದ ಗೊಡವೆ ಬೇಕೇ...

Comments 4

  1. ಮಧು ಬಿ.ಎನ್.
    Sep 17, 2024 Reply

    ಜಬೀವುಲ್ಲಾ ರವರ ‘ ಸಾವಿನ ಅರಿವೆ ಕಳಚಿ…’ ಕವಿತೆ ಇತ್ತೀಚೆಗೆ ನಾನು ಆಸ್ವಾದಿಸಿದ ಅತ್ಯುತ್ತಮ ಕವಿತೆ. ಬಳಸಿಕೊಂಡ ರೂಪಕಗಳು ಕೂಡಾ ನವನವೀನ. ಧನ್ಯವಾದಗಳು.

    • Zabiulla M Asad
      Sep 19, 2024 Reply

      ಧನ್ಯವಾದಗಳು ಸರ್ 🙏

  2. ಗಂಗಾಧರ ಜವಳೂರು
    Sep 19, 2024 Reply

    ‘ಕಡಲ ದಂಡೆಯಲಿ ಗೂಡು ಕಟ್ಟಿ
    ಹುಟ್ಟಿತು ಸ್ಥಾವರ!’… ತುಂಬಾ ಚೆನ್ನಾಗಿದೆ ಸರ್.

  3. Harsha, Raichur
    Sep 22, 2024 Reply

    ಕತ್ತಲೆ- ಬೆಳಗಿನ ನಡುವಿನ ಯುದ್ಧದಲ್ಲಿ ಬಿದ್ದವರು ನಾವಲ್ಲವೇ? ಅದಕ್ಕೇ ಬುದ್ಧ ನಕ್ಕಿದ್ದು… ನಮ್ಮ ಮತಿಹೀನತೆಯನ್ನು ಕಂಡು…..

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅನುಭಾವ ಮತ್ತು ಅನಿರ್ವಚನೀಯತೆ
ಅನುಭಾವ ಮತ್ತು ಅನಿರ್ವಚನೀಯತೆ
March 12, 2022
ನಾನು… ನನ್ನದು
ನಾನು… ನನ್ನದು
July 4, 2021
ಕರ್ತಾರನ ಕಮ್ಮಟ  ಭಾಗ-6
ಕರ್ತಾರನ ಕಮ್ಮಟ ಭಾಗ-6
December 22, 2019
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
March 17, 2021
ಭಕ್ತನಾಗುವುದೆಂದರೆ…
ಭಕ್ತನಾಗುವುದೆಂದರೆ…
January 10, 2021
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
ಮಿಲಿಂದ ಪ್ರಶ್ನೆ – ಮೂರು ಪ್ರಶ್ನೋತ್ತರಗಳು
July 10, 2023
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
January 4, 2020
‘ಅಲ್ಲಮ’ ಎಂಬ ಹೆಸರು
‘ಅಲ್ಲಮ’ ಎಂಬ ಹೆಸರು
August 6, 2022
ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
July 4, 2022
ನಾನು ಯಾರು? ಎಂಬ ಆಳ-ನಿರಾಳ-5
ನಾನು ಯಾರು? ಎಂಬ ಆಳ-ನಿರಾಳ-5
August 2, 2020
Copyright © 2026 Bayalu