Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಾವಿನ ಅರಿವೆ ಕಳಚಿ!
Share:
Poems September 14, 2024 ಜಬೀವುಲ್ಲಾ ಎಂ.ಅಸದ್

ಸಾವಿನ ಅರಿವೆ ಕಳಚಿ!

ತೆರೆದ ಬೆಂಕಿಯ ಕಣ್ಣಲಿ
ತಾವರೆಯ ಪ್ರತಿಬಿಂಬ
ಕತ್ತಲೆ ಬೆಳಕಿನ ನಡುವಿನ ಯುದ್ಧ
ಮುಗುಳ್ನಕ್ಕ ಬುದ್ಧ!

ಕಟ್ಟಿದ ಸೇತುವೆ ಬಳಸಿದ ಲತೆ
ಚಿಗುರಿದ ಎಲೆಎಲೆಯ ತುಂಬಾ
ಇಬ್ಬನಿಯ ಕಲರವ
ಧ್ಯಾನವಾಯಿತು ಭಂಗ!

ನೀಲಮೆಯ ಈಜಿ
ಮರಳಿದೆ ರೆಕ್ಕೆ ಸಂಕುಲ
ಕಡಲ ದಂಡೆಯಲಿ ಗೂಡು ಕಟ್ಟಿ
ಹುಟ್ಟಿತು ಸ್ಥಾವರ!

ದಿಗಂತದ ಬುಟ್ಟಿಯಲಿ
ಹಣ್ಣಾಗಿ ನೇಸರ
ನಾಳೆಗೆ ಮತ್ತೆ ಹುಟ್ಟುವನು
ಸಾವಿನ ಅರಿವೆ ಕಳಚಿ!

Previous post ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
Next post ಹಣತೆ ಸಾಕು
ಹಣತೆ ಸಾಕು

Related Posts

ಮನವೇ ಮನವೇ…
Share:
Poems

ಮನವೇ ಮನವೇ…

May 6, 2020 Bayalu
ಭವ ಸಂಸಾರದ ಸವಿಯನು ನಂಬಿ ಸವೆಯದಿರು ಮನವೇ ಶಿವಜ್ಞಾನಿಗಳ ತವಕದಿ ಬೆರಸು ಸವಿಯುಂಟಲೆ ಮನವೇ //ಪ// ಎಲುವನು ಕಡಿದ ಸೊಣಗನು ಕಂಡ ಫಲದಂತೆ ಮನವೇ ವಿಲವಿಲ ಎನ್ನುತ ನಲುಗಿದೆ ನೀನು...
ಇದ್ದ ಅಲ್ಲಮ ಇಲ್ಲದಂತೆ
Share:
Poems

ಇದ್ದ ಅಲ್ಲಮ ಇಲ್ಲದಂತೆ

April 29, 2018 ಡಾ. ಶಶಿಕಾಂತ ಪಟ್ಟಣ
ಕಲ್ಯಾಣ ಹಣತೆ ಭಕ್ತಿ ರಸ ತೈಲ ಅನುಭವ ಅಬ್ಬರ ಚಿಂತನೆ ಹೊರಗೆ ದುಡಿ ಮದ್ದಳೆ ಸದ್ದು ಒಳಗೊಳಗೆ ಮಿಡಿವ ತಂತಿ. ಕಾಣಲಾಗದ ತೋರಬಾರದ ಮಹಾ ಘನವ ತೋರಿ ಅರಿವು ಮರೆಯ ಜಾಣ ಅಂಧ ಮೌಢ್ಯಕೆ...

Comments 4

  1. ಮಧು ಬಿ.ಎನ್.
    Sep 17, 2024 Reply

    ಜಬೀವುಲ್ಲಾ ರವರ ‘ ಸಾವಿನ ಅರಿವೆ ಕಳಚಿ…’ ಕವಿತೆ ಇತ್ತೀಚೆಗೆ ನಾನು ಆಸ್ವಾದಿಸಿದ ಅತ್ಯುತ್ತಮ ಕವಿತೆ. ಬಳಸಿಕೊಂಡ ರೂಪಕಗಳು ಕೂಡಾ ನವನವೀನ. ಧನ್ಯವಾದಗಳು.

    • Zabiulla M Asad
      Sep 19, 2024 Reply

      ಧನ್ಯವಾದಗಳು ಸರ್ 🙏

  2. ಗಂಗಾಧರ ಜವಳೂರು
    Sep 19, 2024 Reply

    ‘ಕಡಲ ದಂಡೆಯಲಿ ಗೂಡು ಕಟ್ಟಿ
    ಹುಟ್ಟಿತು ಸ್ಥಾವರ!’… ತುಂಬಾ ಚೆನ್ನಾಗಿದೆ ಸರ್.

  3. Harsha, Raichur
    Sep 22, 2024 Reply

    ಕತ್ತಲೆ- ಬೆಳಗಿನ ನಡುವಿನ ಯುದ್ಧದಲ್ಲಿ ಬಿದ್ದವರು ನಾವಲ್ಲವೇ? ಅದಕ್ಕೇ ಬುದ್ಧ ನಕ್ಕಿದ್ದು… ನಮ್ಮ ಮತಿಹೀನತೆಯನ್ನು ಕಂಡು…..

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಸವನಾ ಯೋಗದಿಂ…
ಬಸವನಾ ಯೋಗದಿಂ…
July 1, 2018
ಅನುಭವ ಮಂಟಪ
ಅನುಭವ ಮಂಟಪ
April 11, 2025
ಅರಿವಿನ ಬಾಗಿಲು…
ಅರಿವಿನ ಬಾಗಿಲು…
October 13, 2022
ನಾನು ಕಂಡ ಡಾ.ಕಲಬುರ್ಗಿ
ನಾನು ಕಂಡ ಡಾ.ಕಲಬುರ್ಗಿ
September 7, 2021
ಹೆಸರಿಲ್ಲದಾ ಊರಿನ ಹಾಡು
ಹೆಸರಿಲ್ಲದಾ ಊರಿನ ಹಾಡು
May 6, 2020
ಗುರುವಿನ ಸಂಸ್ಮರಣೆ
ಗುರುವಿನ ಸಂಸ್ಮರಣೆ
October 6, 2020
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
ವಚನಗಳು ಮತ್ತು ವ್ಯಕ್ತಿತ್ವ ವಿಕಸನ
May 6, 2021
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
February 11, 2022
ಶಿವನ ಕುದುರೆ…
ಶಿವನ ಕುದುರೆ…
May 1, 2019
ಲಿಂಗಾಯತ ಧರ್ಮದ ನಿಜದ ನಿಲುವು
ಲಿಂಗಾಯತ ಧರ್ಮದ ನಿಜದ ನಿಲುವು
April 29, 2018
Copyright © 2026 Bayalu