Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಣತೆ ಸಾಕು
Share:
Poems September 14, 2024 ಜ್ಯೋತಿಲಿಂಗಪ್ಪ

ಹಣತೆ ಸಾಕು

ಬೆಳಕ ನೋಡಲಾಗದ ಕಣ್ಣು
ದೀಪ ಹಚ್ಚಿದರೆ ಕಣ್ಣು ಕತ್ತಲು
ಹಚ್ಚದಿರೆ ಹೃದಯ ಕತ್ತಲು

ದೀಪ ಬೆಳಗಿಸುವ ಕಷ್ಟ

ಕತ್ತಲೆಂಬುದು ಕತ್ತಲಾಗದು
ಬೆಳಕೆಂಬುದು ಬೆಳಕಾಗದು

ಏನೂ ಕೂಡಿಡದೆ
ಕಳೆಯುವುದು ಹೇಗೆ

ಈಗ
ಇರುವ ಸುಳ್ಳೇ ಅರಗಿಸಲಾಗಿಲ್ಲ
ಇನ್ನೇನು ಹೊಸಾ ಸುಳ್ಳು

ಬೆಟ್ಟದ
ತುದಿಯ ಬಂಡೆ
ಬಂಡೆಯ ಮೇಲೆ ನಿಂತಿರುವ
ಹೆಮ್ಮೆ
ಅಲುಗಾಡದೆ ಬಂಡೆ

ನಾನು ಸಾಯದೆ
ಕಾಣುವುದೇ ಬಯಲು

ಮತ್ತೇನೂ ಇಲ್ಲ ಸಾಯಲಿ

ಮುದ್ದಾದ ಮಿಥ್ಯ ಈ ದೇವರು

ಮನ ಮರೆತು
ಅಚಲವಾಗಿ ಹಾಯ್ಕು

ಮರೆತುದು ಏನು

ಈ ಕತ್ತಲು
ಬೆಳಗಿಸಲು ಒಂದು
ಹಣತೆ ಸಾಕು

ದೀಪ ಹಚ್ಚಲು ಗಾಳಿಗೆ
ಹೇಳಿರುವೆ.

Previous post ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
Next post ಕಾಲ ಕಲ್ಪಿತವೇ?!
ಕಾಲ ಕಲ್ಪಿತವೇ?!

Related Posts

ಎರಡು ಎಲ್ಲಿ?
Share:
Poems

ಎರಡು ಎಲ್ಲಿ?

October 5, 2021 ಕೆ.ಆರ್ ಮಂಗಳಾ
ನಾನು ದ್ವೈತವೋ ಅದ್ವೈತವೋ ಹೀಗೊಂದು ಪ್ರಶ್ನೆ ಎದ್ದದ್ದೇ ತಡ ನಡೆದಿತ್ತು ಒಳಗೊಂದು ತಾಕಲಾಟ- ಒಂದೆಡೆ- ನೆನಪುಗಳಿಗೆ, ಕನಸುಗಳಿಗೆ ಪ್ರೀತಿಯ ಕನವರಿಕೆಗಳಿಗೆ ಎದೆಯ ಹಂಬಲಗಳಿಗೆಲ್ಲ...
ಹುಡುಕಾಟ
Share:
Poems

ಹುಡುಕಾಟ

January 15, 2026 ಜಬೀವುಲ್ಲಾ ಎಂ.ಅಸದ್
ಭವದ ಒಡಲಿಗೆ ಬಿದ್ದ ಮೇಲೆ ಇನ್ನೆಲ್ಲಿಯ ಬಿಡುಗಡೆ ಇಹದ ಬಾಳು ಬಯಕೆಗಳ ಸಂಕೋಲೆ ಜಡಿದ ಬೇಗುದಿಯ ಕಡಲು ಈಜಬೇಕಷ್ಟೆ ಕಾಣದ ತೀರ ಭೂಮಿ, ಬಾನು ಒಂದಾದಂತೆ ಕಾಣುವ ದಿಗಂತ ಕಣ್ಣಿಗೆ...

Comments 4

  1. ಲಹರಿ ಬೆಂಗಳೂರು
    Sep 19, 2024 Reply

    ತಮಂಧ ಘನವ ಓಡಿಸಲು ಹಣತೆ ಸಾಕು. ಬಯಲ ಅರಿಯಲು ‘ನಾನು’ ಸಾಯಲೇ ಬೇಕು… ಕವನ ಅರ್ಥಗರ್ಭಿತ.💥💥

  2. ಸಂತೋಷ ಕುಮಾರ್, ಸಿ
    Sep 22, 2024 Reply

    ದೇವರು ಅದ್ಭುತ ಸುಳ್ಳು ಅಂತ ಹೇಳುತ್ತಿದ್ದೆ, ‘ಮುದ್ದಾದ ಮಿಥ್ಯ’ ಅನ್ನೋದು ಇನ್ನೂ ಮುದ್ದಾಗಿದೆ ಸರ್😀

  3. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Sep 27, 2024 Reply

    ನಿಮ್ಮ ಓದಿಗಾಗಿ ಧನ್ಯವಾದಗಳು

  4. ಶ್ರೀಶೈಲ ಹಾದಿಮನಿ, ಅಮೆರಿಕ
    Oct 3, 2024 Reply

    ತುಂಬಾ ಚೆನ್ನಾಗಿ ರಚಿತವಾದ ಕವನಗಳು. ತಮ್ಮ ನಿರಂತರ ಸೇವೆಗೆ ಧನ್ಯವಾದಗಳು 💐🙏

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
April 29, 2018
ಲಿಂಗದ ಹಂಗೇ…
ಲಿಂಗದ ಹಂಗೇ…
September 10, 2022
ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
November 7, 2020
ನಿನ್ನೆ-ಇಂದು
ನಿನ್ನೆ-ಇಂದು
May 10, 2022
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
May 6, 2021
ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು
May 10, 2023
ಅವಿರಳ ಅನುಭಾವಿ-4
ಅವಿರಳ ಅನುಭಾವಿ-4
June 17, 2020
ವಿದ್ಯೆಯೊಳಗಣ ಅವಿದ್ಯೆ
ವಿದ್ಯೆಯೊಳಗಣ ಅವಿದ್ಯೆ
February 6, 2019
ವೈಚಾರಿಕ ಚಳುವಳಿಯ ಮರುಸ್ಥಾಪನೆ
ವೈಚಾರಿಕ ಚಳುವಳಿಯ ಮರುಸ್ಥಾಪನೆ
April 29, 2018
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
September 10, 2022
Copyright © 2026 Bayalu