Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಣತೆ ಸಾಕು
Share:
Poems September 14, 2024 ಜ್ಯೋತಿಲಿಂಗಪ್ಪ

ಹಣತೆ ಸಾಕು

ಬೆಳಕ ನೋಡಲಾಗದ ಕಣ್ಣು
ದೀಪ ಹಚ್ಚಿದರೆ ಕಣ್ಣು ಕತ್ತಲು
ಹಚ್ಚದಿರೆ ಹೃದಯ ಕತ್ತಲು

ದೀಪ ಬೆಳಗಿಸುವ ಕಷ್ಟ

ಕತ್ತಲೆಂಬುದು ಕತ್ತಲಾಗದು
ಬೆಳಕೆಂಬುದು ಬೆಳಕಾಗದು

ಏನೂ ಕೂಡಿಡದೆ
ಕಳೆಯುವುದು ಹೇಗೆ

ಈಗ
ಇರುವ ಸುಳ್ಳೇ ಅರಗಿಸಲಾಗಿಲ್ಲ
ಇನ್ನೇನು ಹೊಸಾ ಸುಳ್ಳು

ಬೆಟ್ಟದ
ತುದಿಯ ಬಂಡೆ
ಬಂಡೆಯ ಮೇಲೆ ನಿಂತಿರುವ
ಹೆಮ್ಮೆ
ಅಲುಗಾಡದೆ ಬಂಡೆ

ನಾನು ಸಾಯದೆ
ಕಾಣುವುದೇ ಬಯಲು

ಮತ್ತೇನೂ ಇಲ್ಲ ಸಾಯಲಿ

ಮುದ್ದಾದ ಮಿಥ್ಯ ಈ ದೇವರು

ಮನ ಮರೆತು
ಅಚಲವಾಗಿ ಹಾಯ್ಕು

ಮರೆತುದು ಏನು

ಈ ಕತ್ತಲು
ಬೆಳಗಿಸಲು ಒಂದು
ಹಣತೆ ಸಾಕು

ದೀಪ ಹಚ್ಚಲು ಗಾಳಿಗೆ
ಹೇಳಿರುವೆ.

Previous post ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
Next post ಕಾಲ ಕಲ್ಪಿತವೇ?!
ಕಾಲ ಕಲ್ಪಿತವೇ?!

Related Posts

ನದಿಯನರಸುತ್ತಾ…
Share:
Poems

ನದಿಯನರಸುತ್ತಾ…

October 6, 2020 ಜ್ಯೋತಿಲಿಂಗಪ್ಪ
ಜ್ಞಾನವೆಂಬುದೇನು? ಮನೋ ಭೇದ. -ಅಲ್ಲಮ ನಾನು ಹುಟ್ಟುವಾಗ ಹೇಳಿ ಬಂದೆನೇ ಸಾಯುವಾಗಲೂ ಅಷ್ಟೇ ಬದುಕು ಹೇಳದು ಏನೂ ಈ ಕಡಲಲಿ ಕಳೆದಿರುವ ನದಿ ಹುಡುಕುತಿರುವೆ ಹುಡುಕುತಿರುವ ನದಿ...
ಸಂಭ್ರಮಿಸುವೆ ಬುದ್ದನಾಗಿ
Share:
Poems

ಸಂಭ್ರಮಿಸುವೆ ಬುದ್ದನಾಗಿ

August 11, 2025 ಜಬೀವುಲ್ಲಾ ಎಂ.ಅಸದ್
ಓಡೆದಿರುವುದು ಕನ್ನಡಕದ ಗಾಜಷ್ಟೆ ಲೋಕ ಎಂದಿನಂತೆಯೇ ಇದೆ ಮುರಿದಿರುವುದು ನಿನ್ನ ಮನಸ್ಸಷ್ಟೆ ಸೇತುವೆಗಳು ಗಟ್ಟಿಮುಟ್ಟಾಗಿಯೇ ಇವೆ ನೀ ನಡೆವ ದಾರಿ ನಿನ್ನೋಬ್ಬನದಲ್ಲ ಎಲ್ಲರದೂ...

Comments 4

  1. ಲಹರಿ ಬೆಂಗಳೂರು
    Sep 19, 2024 Reply

    ತಮಂಧ ಘನವ ಓಡಿಸಲು ಹಣತೆ ಸಾಕು. ಬಯಲ ಅರಿಯಲು ‘ನಾನು’ ಸಾಯಲೇ ಬೇಕು… ಕವನ ಅರ್ಥಗರ್ಭಿತ.💥💥

  2. ಸಂತೋಷ ಕುಮಾರ್, ಸಿ
    Sep 22, 2024 Reply

    ದೇವರು ಅದ್ಭುತ ಸುಳ್ಳು ಅಂತ ಹೇಳುತ್ತಿದ್ದೆ, ‘ಮುದ್ದಾದ ಮಿಥ್ಯ’ ಅನ್ನೋದು ಇನ್ನೂ ಮುದ್ದಾಗಿದೆ ಸರ್😀

  3. ಜಿ.ಎಚ್.ಜ್ಯೋತಿಲಿಂಗಪ್ಪ ಶಿವನಕೆರೆ
    Sep 27, 2024 Reply

    ನಿಮ್ಮ ಓದಿಗಾಗಿ ಧನ್ಯವಾದಗಳು

  4. ಶ್ರೀಶೈಲ ಹಾದಿಮನಿ, ಅಮೆರಿಕ
    Oct 3, 2024 Reply

    ತುಂಬಾ ಚೆನ್ನಾಗಿ ರಚಿತವಾದ ಕವನಗಳು. ತಮ್ಮ ನಿರಂತರ ಸೇವೆಗೆ ಧನ್ಯವಾದಗಳು 💐🙏

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹುಲಿ ಸವಾರಿ…
ಹುಲಿ ಸವಾರಿ…
June 10, 2023
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
October 13, 2022
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
ದೇವರಲ್ಲಿ ಬೇಡುವ ವರ: ಲಿಂಗಭಕ್ತಿ-ಜಂಗಮಪ್ರೇಮ
February 11, 2022
ಧರ್ಮದ ನೆಲೆಯಲ್ಲಿ ಬದುಕು
ಧರ್ಮದ ನೆಲೆಯಲ್ಲಿ ಬದುಕು
September 5, 2019
ಮೀನಿನ ಬಯಕೆ
ಮೀನಿನ ಬಯಕೆ
June 10, 2023
ಮೈಸೂರು ಜನಗಣತಿ (ಭಾಗ-3)
ಮೈಸೂರು ಜನಗಣತಿ (ಭಾಗ-3)
May 10, 2023
ಗುಟುಕು ಆಸೆ…
ಗುಟುಕು ಆಸೆ…
May 8, 2024
ಗಣಾಚಾರ
ಗಣಾಚಾರ
August 8, 2021
ಬಯಲುಡುಗೆಯ ಬೊಂತಾದೇವಿ
ಬಯಲುಡುಗೆಯ ಬೊಂತಾದೇವಿ
February 6, 2019
ಅರ್ಥ – ವ್ಯರ್ಥ
ಅರ್ಥ – ವ್ಯರ್ಥ
April 5, 2026
Copyright © 2026 Bayalu