Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎಲ್ಲಿದೆ ಈ ಕ್ಷಣ?
Share:
Poems October 21, 2024 ಕೆ.ಆರ್ ಮಂಗಳಾ

ಎಲ್ಲಿದೆ ಈ ಕ್ಷಣ?

ವರ್ತಮಾನದಲ್ಲಿ ನಡೆಯಲರಿಯದೆ
ನುಡಿಯಲರಿಯದೆ ಬಾಳಲರಿಯದೆ
ಕಳದೇ ಹೋಗುವ ಬದುಕು
ಕಾಣಲಾರದು ಯಾಕೆ- ‘ಈ ಕ್ಷಣ’?

ರಾಗಾಲಾಪಗಳ ಬಣ್ಣಗಳಲಿ
ಮಿಂದೇಳುತಿರುವಾಗ
ಬಯಕೆ ಬೇಗುದಿಗಳಲಿ
ಬೇಯುತಿರುವಾಗ, ಎಲ್ಲಿದೆ ಈ ಕ್ಷಣ?

ಅವರಿವರ ಸುದ್ದಿಯಲೇ
ದಿನ ಸವೆಯುತಿರುವಾಗ
ದ್ವೇಷ-ರೋಷ-ವಿಷಯಗಳ
ವಿಷ ತೊನೆಯುತಿರುವಾಗ, ತಿಳಿದೀತೆ ಈ ಕ್ಷಣ?

ಹಿಂದುಮುಂದುಗಳ ಗೊಂದಲ
ತಲೆ ತುಂಬಿಕೊಂಡಾಗ
ಆಸೆ ಆಮೋದಗಳಿಗೆ
ಹಗಲಿರುಳು ಸವೆವಾಗ, ಅರಿವಾದೀತೇ ಈ ಕ್ಷಣ?

ಸುಖ-ದುಃಖ ಸರಪಳಿಯ
ನನಗೆ ನಾನೇ ಹೊಸೆದು
ಸ್ವಹಿತದ ಸಂಬಂಧಗಳ
ಕೂಡಿ ಕಳೆಯುತಿರುವಾಗ ಸಿಕ್ಕೀತೆ ಈ ಕ್ಷಣ?

ಕಣ್ಣು ಹಾಯಿಸಿದಲೆಲ್ಲಾ
ಮನವು ಹರಿದಲೆಲ್ಲಾ
ಪೂರ್ವ ಸಂಚಿತಗಳೇ
ಬಗೆಬಗೆಯಾಗಿ ತೋರುವಾಗ, ಕಂಡೀತೆ ಈ ಕ್ಷಣ?

ಮಾತಲ್ಲೂ ಮೌನದಲೂ
ಪೂಜೆಯಲೂ, ಧ್ಯಾನದಲೂ
ಸಿಗದ ಈ ಕ್ಷಣ
ಕಣ್ಮುಂದೆ, ಕಾಲಡಿಯೇ
ಸರಿದು ಹೋಗುವ ಪರಿಗೆ
ಕಂಗಾಲಾಗಿ ಬೆಚ್ಚಿ ನಿಂತಾಗ
ಕರುಣಾಮಯಿ ಗುರು ಹೇಳಿದ-

ಈ ಕ್ಷಣಕೂ ಮುಖ್ಯ
ಇನ್ನೇನೋ ಇದೆ ಎನುವ
ಮನದ ಮೋಡಿ ಮಾತಿಗೆಲ್ಲಾ
ಕಿವಿಯಾಗಬೇಡಮ್ಮಾ
ಅಲ್ಲೇನಿದೆ…
ಬರಿ ತೆವಲುಗಳು
ಸುಖದ ಅಮಲುಗಳು
ಒಣ ಯೋಚನೆಗಳು
ನಾಳಿನ ಭಯಗಳು
ಏನೇನೋ ಆತಂಕಗಳು…
ಚಿತ್ತದಾಟದಲಿ ಮುಳುಗಿರುವುದೂ
ಗಾಢ ನಿದ್ದೆಯೇ!

ಕಂಗಳ ಕರುಳ ಕೊಯ್ಯದೆ
ಮನದ ತಿರುಳ ಹುರಿಯದೆ
ಹಿಡಿಯಲಾರೆ ನೀನದರ ಜಾಡ
ಕಾಣಲಾರೆ ಅದರ ಬೆಳಗ.
ತಿಳಿ ಮಗಳೇ-
ಈ ಕ್ಷಣವೆಂದರೆ
ಬೇರೇನೂ ಅಲ್ಲ-
ಅದೊಂದು ಬಿಡುಗಡೆ, ಮಹಾ ಎಚ್ಚರ!

Previous post ಈ ಬಳ್ಳಿ…
ಈ ಬಳ್ಳಿ…
Next post ಅನಿಮಿಷ: ಚಿಗುರಿದ ಒಲುಮೆ (4)
ಅನಿಮಿಷ: ಚಿಗುರಿದ ಒಲುಮೆ (4)

Related Posts

ಒಂದು ತೊಟ್ಟು ಬೆಳಕು
Share:
Poems

ಒಂದು ತೊಟ್ಟು ಬೆಳಕು

February 7, 2021 ಜ್ಯೋತಿಲಿಂಗಪ್ಪ
ಈ ಕತ್ತಲು ಒಂದು ತೊಟ್ಟು ಬೆಳಕು ಕುಡಿಯಿತು ಅಮಲೇರಿದೆ ಗಾಳಿ ಪಾಲು ಮುಂದಣ ಗೆರೆ ಹಿಂದಕೂ ತಾಗಿದೆ ಪರಿಧಿಯ ಬಿಂದು ತನ್ನ ಇಚ್ಛೆಯನರಿಯದು ಸುತ್ತುವುದು ಬಯಲು ಎಂಬುದೇನು ಬಯಲು ಏನೂ...
ಸನ್ಯಾಸ ದೀಕ್ಷೆ
Share:
Poems

ಸನ್ಯಾಸ ದೀಕ್ಷೆ

June 12, 2025 ಜಬೀವುಲ್ಲಾ ಎಂ.ಅಸದ್
ತುಂಬಿದ ಅಹಂ- ಸ್ವಾರ್ಥದ ಚೀಲವನು ಬಯಲಿಗೊಯ್ದು ಸುರಿದು ಸ್ವತಃ ಖಾಲಿಯಾಗಿ ಸಂಭ್ರಮಿಸುವುದು – ಸನ್ಯಾಸ ಒಂದೆಡೆ ನೆಲೆ ನಿಂತು ಮಹಾವೃಕ್ಷವಾಗಿ ಬೇರು ಬಿಟ್ಟು ಬಿಸಿಲು...

Comments 1

  1. ಶೋಭಾದೇವಿ ಅಮರಶೆಟ್ಟಿ, ಧಾರವಾಡ
    Oct 24, 2024 Reply

    ಈ ಕ್ಷಣವೆಂದರೆ ನಿಜವಾಗಿಯೂ ಮಹಾ ಎಚ್ಚರವೇ!!!
    ಎಲ್ಲಿದೆ ಈ ಕ್ಷಣ ತುಂಬ ಚೆನ್ನಾಗಿದೆ👌👌👍

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗಣಾಚಾರ
ಗಣಾಚಾರ
August 8, 2021
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
January 4, 2020
ಸ್ತ್ರೀ ಸ್ವಾತಂತ್ರ್ಯ ಕುರಿತು…
ಸ್ತ್ರೀ ಸ್ವಾತಂತ್ರ್ಯ ಕುರಿತು…
April 29, 2018
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
October 19, 2025
ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2
May 8, 2024
ಐನಸ್ಟೈನ್ ಮತ್ತು ದೇವರು
ಐನಸ್ಟೈನ್ ಮತ್ತು ದೇವರು
October 5, 2021
ನಿಚ್ಚ ನಿಚ್ಚ ಶಿವರಾತ್ರಿ
ನಿಚ್ಚ ನಿಚ್ಚ ಶಿವರಾತ್ರಿ
March 6, 2020
ಗುರುವೇ ತೆತ್ತಿಗನಾದ
ಗುರುವೇ ತೆತ್ತಿಗನಾದ
April 29, 2018
ಹುಡುಕಾಟ
ಹುಡುಕಾಟ
July 21, 2024
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
ಶರಣರ ದೃಷ್ಟಿಯಲ್ಲಿ ವ್ರತಾಚರಣೆ
October 2, 2018
Copyright © 2026 Bayalu