Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಎಲ್ಲಿದೆ ಈ ಕ್ಷಣ?
Share:
Poems October 21, 2024 ಕೆ.ಆರ್ ಮಂಗಳಾ

ಎಲ್ಲಿದೆ ಈ ಕ್ಷಣ?

ವರ್ತಮಾನದಲ್ಲಿ ನಡೆಯಲರಿಯದೆ
ನುಡಿಯಲರಿಯದೆ ಬಾಳಲರಿಯದೆ
ಕಳದೇ ಹೋಗುವ ಬದುಕು
ಕಾಣಲಾರದು ಯಾಕೆ- ‘ಈ ಕ್ಷಣ’?

ರಾಗಾಲಾಪಗಳ ಬಣ್ಣಗಳಲಿ
ಮಿಂದೇಳುತಿರುವಾಗ
ಬಯಕೆ ಬೇಗುದಿಗಳಲಿ
ಬೇಯುತಿರುವಾಗ, ಎಲ್ಲಿದೆ ಈ ಕ್ಷಣ?

ಅವರಿವರ ಸುದ್ದಿಯಲೇ
ದಿನ ಸವೆಯುತಿರುವಾಗ
ದ್ವೇಷ-ರೋಷ-ವಿಷಯಗಳ
ವಿಷ ತೊನೆಯುತಿರುವಾಗ, ತಿಳಿದೀತೆ ಈ ಕ್ಷಣ?

ಹಿಂದುಮುಂದುಗಳ ಗೊಂದಲ
ತಲೆ ತುಂಬಿಕೊಂಡಾಗ
ಆಸೆ ಆಮೋದಗಳಿಗೆ
ಹಗಲಿರುಳು ಸವೆವಾಗ, ಅರಿವಾದೀತೇ ಈ ಕ್ಷಣ?

ಸುಖ-ದುಃಖ ಸರಪಳಿಯ
ನನಗೆ ನಾನೇ ಹೊಸೆದು
ಸ್ವಹಿತದ ಸಂಬಂಧಗಳ
ಕೂಡಿ ಕಳೆಯುತಿರುವಾಗ ಸಿಕ್ಕೀತೆ ಈ ಕ್ಷಣ?

ಕಣ್ಣು ಹಾಯಿಸಿದಲೆಲ್ಲಾ
ಮನವು ಹರಿದಲೆಲ್ಲಾ
ಪೂರ್ವ ಸಂಚಿತಗಳೇ
ಬಗೆಬಗೆಯಾಗಿ ತೋರುವಾಗ, ಕಂಡೀತೆ ಈ ಕ್ಷಣ?

ಮಾತಲ್ಲೂ ಮೌನದಲೂ
ಪೂಜೆಯಲೂ, ಧ್ಯಾನದಲೂ
ಸಿಗದ ಈ ಕ್ಷಣ
ಕಣ್ಮುಂದೆ, ಕಾಲಡಿಯೇ
ಸರಿದು ಹೋಗುವ ಪರಿಗೆ
ಕಂಗಾಲಾಗಿ ಬೆಚ್ಚಿ ನಿಂತಾಗ
ಕರುಣಾಮಯಿ ಗುರು ಹೇಳಿದ-

ಈ ಕ್ಷಣಕೂ ಮುಖ್ಯ
ಇನ್ನೇನೋ ಇದೆ ಎನುವ
ಮನದ ಮೋಡಿ ಮಾತಿಗೆಲ್ಲಾ
ಕಿವಿಯಾಗಬೇಡಮ್ಮಾ
ಅಲ್ಲೇನಿದೆ…
ಬರಿ ತೆವಲುಗಳು
ಸುಖದ ಅಮಲುಗಳು
ಒಣ ಯೋಚನೆಗಳು
ನಾಳಿನ ಭಯಗಳು
ಏನೇನೋ ಆತಂಕಗಳು…
ಚಿತ್ತದಾಟದಲಿ ಮುಳುಗಿರುವುದೂ
ಗಾಢ ನಿದ್ದೆಯೇ!

ಕಂಗಳ ಕರುಳ ಕೊಯ್ಯದೆ
ಮನದ ತಿರುಳ ಹುರಿಯದೆ
ಹಿಡಿಯಲಾರೆ ನೀನದರ ಜಾಡ
ಕಾಣಲಾರೆ ಅದರ ಬೆಳಗ.
ತಿಳಿ ಮಗಳೇ-
ಈ ಕ್ಷಣವೆಂದರೆ
ಬೇರೇನೂ ಅಲ್ಲ-
ಅದೊಂದು ಬಿಡುಗಡೆ, ಮಹಾ ಎಚ್ಚರ!

Previous post ಈ ಬಳ್ಳಿ…
ಈ ಬಳ್ಳಿ…
Next post ಅನಿಮಿಷ: ಚಿಗುರಿದ ಒಲುಮೆ (4)
ಅನಿಮಿಷ: ಚಿಗುರಿದ ಒಲುಮೆ (4)

Related Posts

ನಿನ್ನೆ-ಇಂದು
Share:
Poems

ನಿನ್ನೆ-ಇಂದು

May 10, 2022 ಕೆ.ಆರ್ ಮಂಗಳಾ
ನಿನ್ನೆ- ಬೆಳಗ ಕಾಣದ ಮಸುಕು ಚಿತ್ತದ ಜಾಡ್ಯ, ಮರೆವಿನ ಬಾಧೆ ಬೆಂಬಿಡದ ಕಾಮನೆಗಳಲಿ ಬಂಧಿಯಾಗಿದೆ ಜೀವ ಬಿಡಿಸು ಗುರುವೆ ಇದರ ಪ್ರವರ… ಇಂದು- ಬೆಳಕ ಕೊಡುತಿಹ ಆ ದೀಪ ಯಾವುದಕೆ...
ವರದಿ ಕೊಡಬೇಕಿದೆ
Share:
Poems

ವರದಿ ಕೊಡಬೇಕಿದೆ

March 17, 2021 ಕೆ.ಆರ್ ಮಂಗಳಾ
ತನುವ ಭೇದಿಸಿ, ಮನವ ಶೋಧಿಸಿ ವರದಿ ಕೊಡಲು ಅಟ್ಟಿದ್ದಾನೆ ಗುರು ನನ್ನೊಳಗೆ ನನ್ನ… ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ ಎಲ್ಲೋ...

Comments 1

  1. ಶೋಭಾದೇವಿ ಅಮರಶೆಟ್ಟಿ, ಧಾರವಾಡ
    Oct 24, 2024 Reply

    ಈ ಕ್ಷಣವೆಂದರೆ ನಿಜವಾಗಿಯೂ ಮಹಾ ಎಚ್ಚರವೇ!!!
    ಎಲ್ಲಿದೆ ಈ ಕ್ಷಣ ತುಂಬ ಚೆನ್ನಾಗಿದೆ👌👌👍

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
March 6, 2024
ಸ್ತ್ರೀ ಸ್ವಾತಂತ್ರ್ಯ ಕುರಿತು…
ಸ್ತ್ರೀ ಸ್ವಾತಂತ್ರ್ಯ ಕುರಿತು…
April 29, 2018
ಗಣಾಚಾರ
ಗಣಾಚಾರ
August 8, 2021
ಲಿಂಗಾಯತ ಮಠಗಳು ಮತ್ತು ಬಸವತತ್ವ
ಲಿಂಗಾಯತ ಮಠಗಳು ಮತ್ತು ಬಸವತತ್ವ
July 21, 2024
ಅಮುಗೆ ರಾಯಮ್ಮ- ಜೀವನ ವೃತ್ತಾಂತ
ಅಮುಗೆ ರಾಯಮ್ಮ- ಜೀವನ ವೃತ್ತಾಂತ
September 10, 2022
ನಡೆದಾಡುವ ದೇವರು
ನಡೆದಾಡುವ ದೇವರು
April 9, 2021
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
April 29, 2018
ಮಿಥ್ಯಾದೃಷ್ಟಿ ರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿ ರಹಿತ ಬಯಲ ದರ್ಶನ
February 7, 2021
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
May 6, 2021
Copyright © 2026 Bayalu