Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಶಾಂತಿ
Share:
Poems April 11, 2025 Bayalu

ಶಾಂತಿ

ಪಯಣದ ಉಬ್ಬುತಗ್ಗು ಹಾದಿಯಲಿ,
ಗಂಧದ ಕಣವಾಗು ಬಯಲಲಿ,
ಸುಮದ ದಳವಾಗು ವನದಲಿ,
ಓ ಮನವೇ,
ಕಂದನ ಮುಗ್ದ ನಗುವಾಗು.| ೧ |

ಹರುಷ ದುಗುಡಗಳ ಮೇಳದಲಿ,
ಮಧುರ ನೆನಪುಗಳ ಹೊಳೆಯಾಗು,
ಹಾಡಾಗು ಕಾಡುವ ನೋವಿಗೆ,
ಓ ಮನವೇ,
ಬಾನಲಿ ಹಾರುವ ಹಕ್ಕಿಯಾಗು. | ೨ |

ಕಷ್ಟಸುಖಗಳು ಬೆರೆತ ಬದುಕಿನಲಿ,
ಚಿಂತನೆಯ ಮುನಿಯಾಗು ಗದ್ದಲದಲಿ,
ಹರಿವ ನದಿಯಾಗು ಹರುಷದಲಿ
ಓ ಮನವೇ,
ಕರುಣೆ ಮಮತೆಗಳ ಸೆಲೆಯಾಗು. | ೩ |

ನೇಸರನ ದಿಗಂತದಂಚಿನ ಪಥದಲಿ,
ಮುಪ್ಪುದೇಹ ಕೊನೆ ಕೋರಿದಂದು,
ಮುಕ್ತನಾಗು ತುಂಬು ಹೃದಯದಲಿ,
ಓ ಮನವೇ,
ಪರಮ ಶಾಂತಿಯ ನೆಲೆಯಾಗು. | ೪ |

-ಅಂಬಳೆ ನಾಗ
(ರವೀಂದ್ರನಾಥ್ ಟಾಗೋರ್ ಅವರ ಕವಿತೆಯಿಂದ ಸ್ಫೂರ್ತಿ ಪಡೆದು)

Previous post ಕಾಲ- ಕಲ್ಪಿತವೇ?
ಕಾಲ- ಕಲ್ಪಿತವೇ?
Next post ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು

Related Posts

ಮಾಯದ ಗಾಯ
Share:
Poems

ಮಾಯದ ಗಾಯ

October 19, 2025 ಜ್ಯೋತಿಲಿಂಗಪ್ಪ
ಯಾವಾಗ ಮಳೆ ಬರುವುದೋ ಕಾಯುವ ಆ ದಿನ ಯಾವಾಗ ಮಳೆ ನಿಲ್ಲುವುದೋ ಕಾಯುವ ಈ ದಿನ ದಿನಾ ಕಾಯುವ ಈ ದಿನಕರ ತೋಯಗಳಲಿ ತುಯ್ಯಲಾಟ ಘನವ ನಾನೇನು ಬಲ್ಲೆ ಗೂಡು ಕಟ್ಟಿದ ಹಕ್ಕಿ ಅಂಗಣದಲಿ...
ಬಯಲಾದ ದೇವರು
Share:
Poems

ಬಯಲಾದ ದೇವರು

January 15, 2026 ಜ್ಯೋತಿಲಿಂಗಪ್ಪ
ಈ ದೇವರು ಒಂದು ಕನಸು ನಿಜವೂ ಅಹುದು ಸುಳ್ಳೂ ಅಹುದು ಕಲ್ಪನೆಯ ಹಾಗೆ ಕಾಣುವುದು ಕಾಣದು ನಂಬಿದರೆ ಕೇಡಿಲ್ಲ ನಂಬದಿರಲೂ ಕೇಡಿಲ್ಲ ಕೇಡೆಲ್ಲವೂ ನನ್ನವು ಈ ಸುಳ್ಳಿಗೊಂದು ಕಾಣಿಸಲಾರೆ...

Comments 3

  1. Raviraju A
    Apr 20, 2025 Reply

    ಮುಕ್ತವಾಗಲಿ ಮನವು ಎಲ್ಲಾ ಕ್ಲೀಷೆಗಳಿಂದ… ಶಾಂತ ಲಹರಿಯಂತಿದೆ ಭಾವನೆ.

  2. ಕೀರ್ತಿ ಎನ್, ಗುಂಡ್ಲುಪೇಟೆ
    Apr 28, 2025 Reply

    ಪಯಣದ ಉಬ್ಬುತಗ್ಗು ಹಾದಿಯಲಿ, ಗಂಧದ ಕಣವಾಗು ಬಯಲಲಿ- ಮಾರ್ಮಿಕವಾದ ಸಾಲುಗಳು. ಗಂಧದ ಕಣವಾಗುವುದು!

  3. ಉಮಾದೇವಿ ಶಂಕರಪ್ಪ
    May 1, 2025 Reply

    ಬಯಲು ಕವನಗಳು ಮತ್ತೆ ಮತ್ತೆ ಓದುವಂತಿವೆ✌️

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
August 11, 2025
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
April 29, 2018
ಬಯಲು ಮತ್ತು ಆವರಣ
ಬಯಲು ಮತ್ತು ಆವರಣ
March 6, 2024
ಗೆರೆ ಎಳೆಯದೆ…
ಗೆರೆ ಎಳೆಯದೆ…
October 13, 2022
ಬೌದ್ಧ ಮೀಮಾಂಸೆ ಹಾಗೂ ವರ್ತಮಾನದ ಸವಾಲುಗಳು
ಬೌದ್ಧ ಮೀಮಾಂಸೆ ಹಾಗೂ ವರ್ತಮಾನದ ಸವಾಲುಗಳು
December 9, 2025
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
July 1, 2018
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
ನನ್ನ ಬುದ್ಧ ಮಹಾಗುರು
ನನ್ನ ಬುದ್ಧ ಮಹಾಗುರು
January 4, 2020
ಅನುಭವ ಮಂಟಪ: ಮುಂದೇನು?
ಅನುಭವ ಮಂಟಪ: ಮುಂದೇನು?
April 5, 2026
Copyright © 2026 Bayalu