Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾದಿಯ ಹಣತೆ…
Share:
Poems June 12, 2025 ಕೆ.ಆರ್ ಮಂಗಳಾ

ಹಾದಿಯ ಹಣತೆ…

ಕೈಯಲಿ ಹಿಡಿದು
ಅಲೆಯುತಲಿದ್ದೆ
ಕಣ್ಣಿಗೊತ್ತಿಕೊಂಡು
ಕರಗುತಲಿದ್ದೆ
ಎದೆಗವುಚಿಕೊಂಡು
ಮುದ್ದಾಡುತಲಿದ್ದೆ
ತಲೆಯ ಮೇಲೆ ಹೊತ್ತು
ಬೀಗುತಲಿದ್ದೆ…

ವಚನ ರಾಶಿಯಲಿ
ಅರಸುತಲಿದ್ದೆ
ಹಿರಿಯರ ಮಾತಲಿ
ಹುಡುಕುತಲಿದ್ದೆ
ಯೋಗಸಿದ್ದಿಗಳಿಗೆ
ತವಕಿಸುತಿದ್ದೆ
ಪೂಜೆ-ಪ್ರಾರ್ಥನೆಯಲಿ
ಪರಿತಪಿಸುತಿದ್ದೆ…

ಅಲ್ಲೆಲ್ಲೋ ಮಿಂಚಿದಂತೆ
ಇಲ್ಲೇನೋ ಹೊಳೆದಂತೆ
ಮತ್ತೆಲ್ಲೋ ಸುಳಿದಂತೆ
ಸಿಕ್ಕು ಸಿಗದ
ಬಿಸಿಲ್ಗುದುರೆಯಂತೆ…

ನೀರು ಹಿಡಿದು
ಬಾಯಾರಿ ಬಳಲುವ
ಬುತ್ತಿ ಹಿಡಿದು
ಹಸಿವಿಗೆ ಹಲಬುವ
ಬೆಪ್ಪುತನಕೆ ಮರುಗಿ
ಬಂದ ನೋಡವ್ವಾ… ನನ್ನ ಗುರು

ಕಣ್ಣೊಳಿತ್ತು
ಕಾರುಣ್ಯದ ಕಡಲು
ಹೃದಯವೋ
ವಾತ್ಸಲ್ಯದ ಒಡಲು
ಮಾತುಗಳೋ
ಚಾಟಿಯ ಏಟು

ಜ್ಞಾನದ ಬಣವೆಗೆ
ಕಿಚ್ಚನು ಹಚ್ಚಿದ
ಭಾವುಕ ಭ್ರಮೆಗೆ
ಬೆಂಕಿಯ ಹಾಕಿದ
ಕಳೆ-ಕೊಳೆ ತುಂಬಿದ
ಮನವ ತೊಳೆಸಿದ
ಕಣ್ಣಿಗೆ ಮೆತ್ತಿದ
ಪೊರೆಗಳ ಹರಿಸಿದ

ಅವಿತಿಹ ಅಹಮಿನ
ಆಟವ ತೋರಿಸಿ
ನಿಜನೆಲೆ ಅರಿಯಲು
ದಾರಿಯ ಮಾಡಿದ
ಹಿಂದಣ ಹಂಗಿನ
ಸಂಗವ ಬಿಡಿಸಿದ
ಮುಂದಣ ಮಾಯೆಯ
ತೆರೆಯನು ಸರಿಸಿದ

ಮಂತ್ರವ ಮರೆಸಿದ
ಮಾತನು ಬಿಡಿಸಿದ
ಮೌನದ ಬಯಲಿಗೆ
ಮಾರ್ಗವ ತೋರಿದ

Previous post ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು
Next post ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ

Related Posts

ನೆಟ್ಟ ನಂಜು ಹಾಲೀಂಟದು
Share:
Poems

ನೆಟ್ಟ ನಂಜು ಹಾಲೀಂಟದು

June 5, 2021 Bayalu
ಯಾರ ಮನೆ ಯಾರ ತೆನೆ ಯಾರ ಅನ್ನ ಯಾರ ಚಿನ್ನ ಸಾವಲಿ ಜೊತೆ ಬರಲಿಹುದೆ ಕಟ್ಟಿ ಒಯ್ಯಲಾಗುವುದೆ ಆ ಬಂಧು ಈ ಬಳಗ ಆ ಹಣವು ಈ ಎಣೆಯು ಕಟ್ಟು ಕಟ್ಟಿ ಇಟ್ಟ ಗಂಟು ಯಾರಿಗೊ ಹೋಗಲಿಕುಂಟು...
ಕಣ್ಣ ದೀಪ
Share:
Poems

ಕಣ್ಣ ದೀಪ

September 7, 2021 ಜ್ಯೋತಿಲಿಂಗಪ್ಪ
ನನ್ನ ಮನೆಯ ಅಂಗಳದಲ್ಲಿ ಒಬ್ಬ ಬುದ್ಧನಿದ್ದಾನೆ ಶೋ ಕೇಸಿನಲ್ಲಿ ಒಬ್ಬ ಬುದ್ಧನಿದ್ದಾನೆ ಗೋಡೆಯ ಮೇಲೆ ಒಬ್ಬ ಬುದ್ಧನಿದ್ದಾನೆ ಎಲ್ಲೆಲ್ಲೂ ಬುದ್ಧ ಬುದ್ಧ ಒಳಗೆ ಖಾಲಿ ಗೋಡೆಯ ಹಿಂದೆ...

Comments 3

  1. Dr. K.S.Mallesh, Mysuru
    Jun 12, 2025 Reply

    ನಿಮ್ಮ ಕವನ “ಹಾದಿಯ ಹಣತೆ” ( ಅರಿವಿನ ಹಣತೆ ಅಲ್ಲ) ಸರಳ ಭಾಷೆ ಚಿಕ್ಕ ಸಾಲುಗಳಲ್ಲಿ ನಿಮ್ಮ ನಿರಂತರ ಹುಡುಕಾಟದ ದಾರಿಯಲ್ಲಿ ಸಿಕ್ಕ ಗುರುವಿನ ಬಗ್ಗೆ ಹೃದ್ಯವಾಗಿ ಮೂಡಿದೆ.

  2. ಶೋಭಾದೇವಿ, ಧಾರವಾಡ
    Jun 19, 2025 Reply

    ಗುರುವು ನಿಜವಾದ ಆಧ್ಯಾತ್ಮದ ದಾರಿ ತೋರಿದ ಹಾದಿಯ ಹಣತೆ. ಕವನ ತುಂಬಾ ಚೆನ್ನಾಗಿದೆ.

  3. Mate Kasturidevi
    Jun 19, 2025 Reply

    ಹಾದಿಯ ಹಣತೆಯ ಬೆಳಕಲ್ಲಿ ನಿಮ್ಮ ಮನದ ಅಳಲು ಜತೆಗೆ ಅರಸುವ ಧಾವಂತ ನಿಚ್ಚಳವಾಗಿ ಕಾಣಬರುತ್ತಿದೆ

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
January 4, 2020
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
ಲಿಂಗಾಯತ ಧರ್ಮ ಪೌರಾಣಿಕವಾದುದಲ್ಲ…
August 11, 2025
ಮನವೇ ಮನವೇ…
ಮನವೇ ಮನವೇ…
May 6, 2020
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
May 1, 2019
ಲಿಂಗಾಯತಧರ್ಮ ಸಂಸ್ಥಾಪಕರು -2
ಲಿಂಗಾಯತಧರ್ಮ ಸಂಸ್ಥಾಪಕರು -2
May 8, 2024
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ಭವ ರಾಟಾಳ
ಭವ ರಾಟಾಳ
September 10, 2022
ನಿಜ ನನಸಿನ ತಾವ…
ನಿಜ ನನಸಿನ ತಾವ…
July 10, 2023
ವೇದ ಶಾಸ್ತ್ರದವರ ಹಿರಿಯರೆನ್ನೆ…
ವೇದ ಶಾಸ್ತ್ರದವರ ಹಿರಿಯರೆನ್ನೆ…
October 21, 2024
ಧೀಮಂತ ಶರಣ ಬಹುರೂಪಿ ಚೌಡಯ್ಯ
ಧೀಮಂತ ಶರಣ ಬಹುರೂಪಿ ಚೌಡಯ್ಯ
April 29, 2018
Copyright © 2025 Bayalu