Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ದಡ ಸೋಂಕದ ಅಲೆಗಳು
Share:
Poems July 10, 2025 ಜ್ಯೋತಿಲಿಂಗಪ್ಪ

ದಡ ಸೋಂಕದ ಅಲೆಗಳು

ನದಿ ಕೂಡುವ ಕಡಲ ಅಂಚು
ನಿಂತು ಸಂಬಂಧ ಹುಡುಕುತಿರುವೆ

ಕಡಲ ಸೇರುವ ನೀರು
ನದಿ ಯಾವುದು ಕಡಲು ಯಾವುದು
ಸಂಬಂಧ ಅಸಂಬಂಧ

ಎರಡೆಂಬ ಭಿನ್ನ ಅಳಿಯದೇ..

ದಾರಿ ತೋರುವ ಕೈಯ ಹಿಡಿದಿರುವೆ
ಕೈಯ ಕುರುಡು ತೋರದು ದಾರಿ

ನೀರಿರದ ದಾರಿ ನದಿ ಗುರುತು ಮೂಡಿಸಿದೆ
ನೀರಲಿ ನೀರಾಗಿಹ ನೀರು
ನೀರಾಗಿಸಿದೆ ಎನ್ನ

ಮರೆಯ ಆಚೆ ಮರೆಯಬಾರದ ಘನ

ಅರಿಯಲಿಲ್ಲ ಅರಿದಿಲ್ಲ
ಬಲ್ಲತನದ ಭಂಗ ಇನ್ನಿಲ್ಲ

ಅನನ್ಯ ಎಂಬುದೇನು…?
ಭ್ರಮೆ; ಹೇಳಬಾರದ ಶಬ್ದ ಸಂಭ್ರಮ

ಆಹಾ ಕಣ್ಣ ಸುಖವ ನೆಚ್ಚಿ
ಮಣ್ಣು ಮೆಟ್ಟಿದ ಪಾದ ಆಹಾ
ನೆಲ ಮುಟ್ಟದು ಕಣ್ಣು

ಊರು ಹಾಳಾಯಿತು;ಮದ ತಣ್ಣಗಾಯಿತು
ಹೊಗೆ ಇಲ್ಲದ ಬೆಂಕಿ ಸುಟ್ಟ ಊರು
ಕಣ್ಣಿಲ್ಲದವರ ಕಾಡಿತ್ತು

ಹರಿಯುವ ನದಿ ನೀರು
ನಾದವ ಏನೆಂದು ಬರೆಯಲಿ.

Previous post ಪ್ರೇಮ ಮತ್ತು ದ್ವೇಷ
ಪ್ರೇಮ ಮತ್ತು ದ್ವೇಷ
Next post ಕಲಿಸು ಗುರುವೆ…
ಕಲಿಸು ಗುರುವೆ…

Related Posts

ನಿಜ ನನಸಿನ ತಾವ…
Share:
Poems

ನಿಜ ನನಸಿನ ತಾವ…

July 10, 2023 ಕೆ.ಆರ್ ಮಂಗಳಾ
ಕಣ್ಣು ಮುಚ್ಚಿದಾಗ ಬರುವ ಕನಸಿಗೂ ಕಣ್ಬಿಟ್ಟಾಗಿನ ದಿನದ ಚಿತ್ರಾವಳಿಗೂ ಏನಿಹುದು ಅಂತರ? ನಗು, ಅಳು, ನೋವು, ಸಂಕಟ… ಅನುಭವದಲ್ಲಿ ಅದ್ದಿ ತೆಗೆದಂತೆ ಎಲ್ಲ ಎದುರೆದುರೇ ನಡೆದಂತೆ!...
ಅನಾದಿ ಕಾಲದ ಗಂಟು…
Share:
Poems

ಅನಾದಿ ಕಾಲದ ಗಂಟು…

November 10, 2022 ಕೆ.ಆರ್ ಮಂಗಳಾ
ಹಗುರಾಗುತಿದೆ ಹೃದಯ ಹೆಗಲ ಹೊರೆ ಇಳಿದು ಭೂಮಿಗಿಂತಲೂ ವಜನ ಹತ್ತಿಗಿಂತಲೂ ಹಗುರ ಹೊರಲಾಗದ ಭಾರ ಹೊತ್ತಿದ್ದ ಎದೆಗೆ, ಈಗ ಎಂಥದೋ ನಿರಾಳ… ಕಣ್ಣುಬಿಟ್ಟಾಗಿನಿಂದ ಕಂಡದ್ದು ಎಲ್ಲೆಲ್ಲೋ...

Comments 3

  1. ಷಡಕ್ಷರಿ ಎಸ್
    Jul 22, 2025 Reply

    ದಡ ಮುಟ್ಟದ ಅಲೆಗಳ ಗುರಿ ಯಾವುದು? ಗಮ್ಯವಿಲ್ಲದ ಜೀವನವನ್ನು ಒಗಟಾಗಿ ಬೆಡಗಿನ ನುಡಿಯಲ್ಲಿ ಕಟ್ಟಿದ ಕವನ ಚೆನ್ನಾಗಿದೆ👌👌👌

  2. ಶಿವಪುತ್ರ ಕಲ್ಲಹಳ್ಳಿ
    Jul 31, 2025 Reply

    ದಾರಿ ತೋರುವ ಕೈಗೆ ಕುರುಡಾದರೆ ಏನು ಗತಿ?

  3. ಬಸವಪ್ರಭು ಹತ್ತಿಕಟ್ಟಿ
    Aug 2, 2025 Reply

    ದಾರಿ ತೋರುವ ಕೈಯ ಹಿಡಿದಿರುವೆ
    ಕೈಯ ಕುರುಡು ತೋರದು ದಾರಿ- ದಿಕ್ಕು ತಪ್ಪಿದ ನಮ್ಮ ಬದುಕಿನ ಕಾರಣ 😒

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶಿವನ ಕುದುರೆ – 2
ಶಿವನ ಕುದುರೆ – 2
June 3, 2019
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
April 6, 2024
ನಿನ್ನದೊಂದು ಸ್ಪರ್ಶ
ನಿನ್ನದೊಂದು ಸ್ಪರ್ಶ
February 16, 2026
ಅರ್ಥ – ವ್ಯರ್ಥ
ಅರ್ಥ – ವ್ಯರ್ಥ
April 5, 2026
ವಚನಗಳಲ್ಲಿ ಜೀವವಿಜ್ಞಾನ
ವಚನಗಳಲ್ಲಿ ಜೀವವಿಜ್ಞಾನ
December 22, 2019
ಪೊರೆವ ದನಿ…
ಪೊರೆವ ದನಿ…
August 11, 2025
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ಅನಿಮಿಷ- ಕಾದು ಗಾರಾದ ಮಣ್ಣು(7)
ಅನಿಮಿಷ- ಕಾದು ಗಾರಾದ ಮಣ್ಣು(7)
June 12, 2025
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
ಮೈಸೂರು ಜನಗಣತಿಗಳು: ತಪ್ಪಿದ ಸುವರ್ಣಾವಕಾಶವೆ?
April 6, 2023
Copyright © 2026 Bayalu