Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಪೊರೆವ ದನಿ…
Share:
Poems August 11, 2025 ಕೆ.ಆರ್ ಮಂಗಳಾ

ಪೊರೆವ ದನಿ…

ಮೈಯೆಲ್ಲಾ ಕಿವಿಯಾಗಿ
ಮನವೆಲ್ಲಾ ಕಣ್ಣಾಗಿ
ಕೇಳಿಸಿಕೊಂಡೆನಯ್ಯಾ
ನೀನಾಡಿದ ಒಂದೊಂದು ನುಡಿಯ
ಮರೆತು ಹೋಗದಂತೆ
ನಾಲಿಗೆಗೆ ಮಂತ್ರವಾಗಿಸಿದೆ
ಜಾರಿಹೋಗದಂತೆ
ಜೋಪಾನದಿ ಎದೆಗಿಳಿಸಿಕೊಂಡೆ.

ಇಲ್ಲಿದೆ ಕೊಳೆ ಅಲ್ಲಿದೆ ಹೊಲೆ
ಇದೋ ನೋಡು
ದುರ್ವಿಚಾರಗಳ ನೆಲೆ
ಅದೇಕೆ ಬಂತು
ತನ್ನೆಲ್ಲಾ ಬಳಗಸಹಿತ
ದುರ್ಗುಣಗಳ ದಂಡು
ಹುಡುಕಿ ತೆಗೆ ತೆವಲುಗಳ
ಹಿಸುಕಿ ನೋಡು
ನಂಬಿಕೆಗಳ, ಭಾವಗಳ
ಬೂಟಾಟಿಕೆಯ ನಡೆಗಳ
ತೋರುತ್ತ ಹೋದೆಯಯ್ಯಾ
ಮಿಂಚಿನ ಚಾಟಿಯಂತೆ…

ಹಗಲುರಾತ್ರಿ ಎನದೆ
ಬೇಡದ್ದು, ಮರೆತದ್ದು
ಅಗತ್ಯವೇ ಇಲ್ಲದ್ದು
ಎಲ್ಲ ಕಲಬೆರಕೆಯಾಗಿ
ಸುಳಿಯಾಗಿ ಸೆಳೆವಾಗ
ಎದೆಯುದ್ದ, ಕೊರಳುದ್ದ
ಉಕ್ಕೇರಿ ಅಪ್ಪಳಿಸುವಾಗ
ಕೊಚ್ಚಿ ಹೋಗದಂತೆ
ನಿಲುವ ಗುಟ್ಟ ಹೇಳಿಕೊಟ್ಟೆ.

ಸುತ್ತುವರಿದ ಕದಳಿಯಲಿ
ಕಳೆದುಹೋಗದಂತೆ
ಎದುರಿನ ಜಾಲಕ್ಕೆ
ಸಿಕ್ಕಿ ಬೀಳದಂತೆ
ನನ್ನದೇ ಮೋಸಕ್ಕೂ
ನಾನೊಳಗಾಗದಂತೆ
ಭವದ ಜಟಿಲತೆಗಳಿಗೆ
ಎದೆಗುಂದದಂತೆ
ಮೂರರ ಮಾಯೆಗೆ
ಮಾರುಹೋಗದಂತೆ
ಪಾರಾಗುವ ಪಟ್ಟುಗಳ
ಕಲಿಸಿ ಕಾಪಾಡಿದೆ.

Previous post …ಬಯಲನೆ ಬಿತ್ತಿ
…ಬಯಲನೆ ಬಿತ್ತಿ
Next post ಮೈಯೆಲ್ಲಾ ಕಣ್ಣಾಗಿ (10)
ಮೈಯೆಲ್ಲಾ ಕಣ್ಣಾಗಿ (10)

Related Posts

ಆ ದಾರಿಯೇನು ಕುರುಡೇ…
Share:
Poems

ಆ ದಾರಿಯೇನು ಕುರುಡೇ…

June 5, 2021 ಜ್ಯೋತಿಲಿಂಗಪ್ಪ
ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ ಈ ಹುಣುಸೇ ಮರದ ಹುಳಿಗೇನು ಮುಪ್ಪೇ ಕನ್ಯೆಯ ಬೆನ್ನ ಬೆವರ ಉಪ್ಪು...
ನಾನುವಿನ ಉಪಟಳ
Share:
Poems

ನಾನುವಿನ ಉಪಟಳ

December 13, 2024 ಕೆ.ಆರ್ ಮಂಗಳಾ
ಕಣ್ಣಪಾಪೆಯಲಿ ನಾನವಿತು ಕುಳಿತಿರಲು ಕಾಣುವ ನೋಟಗಳಿಗೆ ಲೆಕ್ಕ ಹಾಕುವರಾರು? ತಲೆಯೊಳಗೆ ನಾನೆಂಬುದು ತತ್ತಿ ಇಟ್ಟಿರುವಾಗ ಬರುವ ಯೋಚನೆಗಳನು ಎಣಿಸಿದವರಾರು? ಮನದ ಮೂಲೆಮೂಲೆಯಲು...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
September 14, 2024
ನಿಮ್ಮಿಂದಲೇ ನಾನು
ನಿಮ್ಮಿಂದಲೇ ನಾನು
February 11, 2022
ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
June 5, 2021
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
ಭಕ್ತನಾದೆನೆಂಬವರೆಲ್ಲಾ ಭವಿಗಳಾದರು -ಅಮುಗೆ ರಾಯಮ್ಮ
October 13, 2022
ಆತ್ಮಹತ್ಯೆ-ಆತ್ಮವಿಶ್ವಾಸ
ಆತ್ಮಹತ್ಯೆ-ಆತ್ಮವಿಶ್ವಾಸ
January 10, 2021
ಶರಣರು ಕಂಡ ಆಹಾರ ಪದ್ಧತಿ
ಶರಣರು ಕಂಡ ಆಹಾರ ಪದ್ಧತಿ
April 29, 2018
ನಾನು ಯಾರು? ಎಂಬ ಆಳನಿರಾಳ – 2
ನಾನು ಯಾರು? ಎಂಬ ಆಳನಿರಾಳ – 2
April 6, 2020
ಬಿಟ್ಟು ಹೋದ ಬಸವಣ್ಣ
ಬಿಟ್ಟು ಹೋದ ಬಸವಣ್ಣ
April 29, 2018
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
June 3, 2019
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
Copyright © 2026 Bayalu