Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮಣ್ಣಿನ ಹೃದಯದಲಿ
Share:
Poems September 13, 2025 ಜಬೀವುಲ್ಲಾ ಎಂ.ಅಸದ್

ಮಣ್ಣಿನ ಹೃದಯದಲಿ

ಅಳಿದ ಮೇಲೆ ಉಳಿಯುವುದೇನು?
ಕೇವಲ ಕುರುಹು ಅಷ್ಟೇ!
ಗಾಳಿ ಬೀಸಿದಾಗ
ಎಲೆ ಉದುರಿದ ಹಾಗೇ
ಕಾಲ ಉರುಳುವ ಬಗೆ

ಇರುಳ ಕಣ್ಣಿನಾಗಸದಿ
ಕನಸು ನಾವೆಯಾಗಿ ತೇಲುವುದು
ಚುಚ್ಚುವ ಮುಳ್ಳುಗಳ ನಡುವೆ
ಹೂವೊಂದು ಬಿರಿದು ನಗುವುದು
ಮಣ್ಣಿನ ಹೃದಯದಲಿ ಹೀಗೆ

ಬಯಕೆಗಳ ಬೆನ್ನಹತ್ತಿ
ಕುರುಡು ಕುದುರೆಯ ಏರಿ
ದಶದಿಕ್ಕುಗಳಿಗೆ ದಿಕ್ಕೆಟ್ಟು ಓಡಿ
ತಾಕಿ, ತಟ್ಟಲಾದಿತೇನು?
ಸಾರ್ಥಕ ಬದುಕಿನ
ಗಮ್ಯದ ಬಯಲ ಬಾಗಿಲನು
ತಲುಪಲಾದಿತು ಹೇಗೆ?

Previous post ಜಾತಿಗಳು ಬೆರೆಯದೆ ಸುಖವಿಲ್ಲ
ಜಾತಿಗಳು ಬೆರೆಯದೆ ಸುಖವಿಲ್ಲ
Next post ನಾನು  ಬಿಂಬ
ನಾನು ಬಿಂಬ

Related Posts

ಸುಳ್ಳು ಅನ್ನೋದು…
Share:
Poems

ಸುಳ್ಳು ಅನ್ನೋದು…

April 6, 2023 ಜ್ಯೋತಿಲಿಂಗಪ್ಪ
ನಾ ಭಕ್ತನಾಗದೆ ನೀ ದೇವನಾದೆಯಾ ಭಕ್ತಿ ಎನ್ನಳವಲ್ಲ ದೇವತನವೂ ನಿನ್ನಳವಲ್ಲ ಕೂಡಿ ಕೊಂಡಾಡುವ ಭಾವ ಭಾವ ತಪ್ಪಿದ ಇಜ್ಜೋಡು ಕತ್ತಲೊಳಗೆ ಬೆತ್ತಲಾಟ ಅಂಗಣದೊಳಗಾಡುವ ಆರು ಗಿಳಿವಿಂಡು...
ಈ ಬಳ್ಳಿ…
Share:
Poems

ಈ ಬಳ್ಳಿ…

October 21, 2024 ಜ್ಯೋತಿಲಿಂಗಪ್ಪ
ಗಾಳಿ ಉರಿಸುವುದು ಆರಿಸುವುದು ದೀಪ ಬೆಳಗಿಸುವುದು ಯಾರು…? ನಾನೂ ಒಂದು ದೀಪ ದ್ವೀಪದ ದಡ ಕಾಯುತ್ತಾ ಕಾಯುತ್ತಾ ಅಲೆ ಎಣಿಸುತಿರುವೆ ಈ ಸಂಖ್ಯೆ ಮೂರನ್ನು ದಾಟದೇ… ಈ...

Comments 2

  1. ಸರಳಾ ಚಂದ್ರಶೇಖರ ಸಾಲೀಮಠ
    Sep 27, 2025 Reply

    ಸರ್, ನಿಮ್ಮ ಕಲ್ಪನೆಯ- ‘ಎಲೆ ಉದುರಿದ ಹಾಗೆ, ಕಾಲ ಉರುಳುವ ಬಗೆ’ ಸಾಲು👌👌

  2. ಜಿ. ಶಿವಬಸವ
    Oct 2, 2025 Reply

    ಗಮ್ಯದ ಬಯಲ ಬಾಗಿಲನು
    ತಲುಪಲಾದಿತು ಹೇಗೆ?- ಗಮ್ಯ ಸೇರುವ, ಸೇರಲಾಗದ ತಳಮಳ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶಬ್ದದೊಳಗಣ ನಿಃಶಬ್ದ…
ಶಬ್ದದೊಳಗಣ ನಿಃಶಬ್ದ…
April 11, 2025
ಹೀಗೊಂದು ಸಂವಾದ…
ಹೀಗೊಂದು ಸಂವಾದ…
April 6, 2023
ಭಕ್ತನೆಂತಪ್ಪೆ?
ಭಕ್ತನೆಂತಪ್ಪೆ?
April 29, 2018
ನಿಮ್ಮಿಂದಲೇ ನಾನು
ನಿಮ್ಮಿಂದಲೇ ನಾನು
February 11, 2022
ಬರಿದಾಗುವ ಬೆರಗು
ಬರಿದಾಗುವ ಬೆರಗು
February 6, 2025
ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು
May 10, 2023
ಅದ್ವಿತೀಯ ಶರಣರು
ಅದ್ವಿತೀಯ ಶರಣರು
February 6, 2025
ಹಾಯ್ಕುಗಳು
ಹಾಯ್ಕುಗಳು
November 10, 2022
ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
April 6, 2024
ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…
March 9, 2023
Copyright © 2025 Bayalu