Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾದ ದೇವರು
Share:
Poems January 15, 2026 ಜ್ಯೋತಿಲಿಂಗಪ್ಪ

ಬಯಲಾದ ದೇವರು

ಈ
ದೇವರು
ಒಂದು ಕನಸು

ನಿಜವೂ ಅಹುದು
ಸುಳ್ಳೂ ಅಹುದು

ಕಲ್ಪನೆಯ ಹಾಗೆ
ಕಾಣುವುದು ಕಾಣದು

ನಂಬಿದರೆ ಕೇಡಿಲ್ಲ
ನಂಬದಿರಲೂ ಕೇಡಿಲ್ಲ

ಕೇಡೆಲ್ಲವೂ ನನ್ನವು

ಈ
ಸುಳ್ಳಿಗೊಂದು ಕಾಣಿಸಲಾರೆ ನಿಜ
ಹುಡುಕುತಿರುವೆ ಸತ್ಯ ಮಿಥ್ಯ
ಮೂಗನ ಕನಸೊಂದು ಮೌನದ ಮೊನೆಯಲಿದೆ

ಸುಳ್ಳು ಕತೆಗಳ ಸತ್ಯದ ಹುಡುಕಾಟ
ಜೀವ ಮರೆಯ ಸಾವು
ಸಾವಿನ ಮರೆಯ ಜೀವನ
ಬದುಕಿನ ಮರೆಯ ಬಯಲು

ಒಣಗಿದ ಎಲೆ
ಉದುರಲು ಕಾಯುತಿರುವ ಚಿಗುರು

ಮೌನವಾದಷ್ಟೂ ಕ್ಷೇಮ
ಹೆತ್ತ ಕರುವ ನೆಕ್ಕಿ ನೆಕ್ಕಿ ತೊಳೆದು ನಿಲಿಸುವ ತಾಯತನ

ನಾ ಹೆತ್ತ ಕೂಸಲ್ಲವೇ…
ಈ ದೇವರು ಬಯಲೇ…

Previous post ಹುಡುಕಾಟ
ಹುಡುಕಾಟ
Next post ನಾನೆಂಬ ನಿನಾದ…
ನಾನೆಂಬ ನಿನಾದ…

Related Posts

ವರದಿ ಕೊಡಬೇಕಿದೆ
Share:
Poems

ವರದಿ ಕೊಡಬೇಕಿದೆ

March 17, 2021 ಕೆ.ಆರ್ ಮಂಗಳಾ
ತನುವ ಭೇದಿಸಿ, ಮನವ ಶೋಧಿಸಿ ವರದಿ ಕೊಡಲು ಅಟ್ಟಿದ್ದಾನೆ ಗುರು ನನ್ನೊಳಗೆ ನನ್ನ… ಗೊಂದಲದ ಗೂಡೆಂದು ನೆಪ ಒಡ್ಡುವಂತಿಲ್ಲ ಮುಗ್ಗಲು ವಾಸನೆಯೆಂದು ಹಿಂದೆ ಬರುವಂತಿಲ್ಲ ಎಲ್ಲೋ...
ತುತ್ತೂರಿ…
Share:
Poems

ತುತ್ತೂರಿ…

June 10, 2023 ಕೆ.ಆರ್ ಮಂಗಳಾ
ತುತ್ತೂರಿ ತುತ್ತೂರಿ ಯಾಕೆ ಇಂತಹ ಪಿತೂರಿ? ಯಾವುದೇ ಮಾತಲೂ ನಿನ್ನದೇ ರಾಗ ಯಾವುದೇ ಭಾವಕೂ ನಿನ್ನದೇ ತಾಳ ಬಾಯಿಬಿಟ್ಟರೂ ನಿನ್ನದೇ ಗಾನ ಮೌನದಲಿದ್ದರೂ ನಿನ್ನದೇ ಧ್ಯಾನ...

Comments 3

  1. Vijaya Bagevadi
    Jan 20, 2026 Reply

    ಸುಳ್ಳು ಕತೆಗಳ ಸತ್ಯದ ಹುಡುಕಾಟ😟

  2. Dr. Umesh Soraba
    Jan 23, 2026 Reply

    ಜ್ಯೋತಿಲಿಂಗಪ್ಪ ಶಿವನಕೆರೆ ಅವರ ಕವಿತೆಗಳಿಗೆ ಭಾವಲೋಕದ ಸತ್ಯ-ಮಿಥ್ಯಗಳೊಂದಿಗೆ ಸೆಣಸುವ ಆರೋಗ್ಯಕರ ಜವಾಬ್ದಾರಿಯ ನಡೆಯೊಂದು ಇದ್ದೇ ಇದೆ. ಇದು ‘ಬಯಲಾದ ದೇವರು’ ಕವಿತೆಯಲ್ಲೂ ಮುಂದುವರೆದಿರುವುದನ್ನು ಕಾಣಬಹುದು… ದೇವರ ಅಸ್ತಿತ್ವದ ಕುರಿತು ಈಗಾಗಲೇ ಇರುವ ಪ್ರಚಲಿತ ವ್ಯಾಖ್ಯಾನ-ವಿವರಣೆಗಳ ಮಧ್ಯೆ ಈ ಕವಿತೆಯಲ್ಲಿ ದೇವರು ಕುರಿತು ಆಲೋಚಿಸಿರುವ ಬಗೆ ಭಿನ್ನವೂ ಆಪ್ತವೂ ಆದುದು. ಈ ದೇವರನ್ನು ನಂಬಿದರೂ ಕೇಡಿಲ್ಲ…. ನಂಬದಿರಲೂ ಕೇಡಿಲ್ಲ…. ಒಣಗಿದ ಎಲೆ ಉದುರಲು ಕಾಯುತಿರುವ ಚಿಗುರಿನಂತೆ ಈ ದೇವರು ಮರಮರಳಿ ಹೊಸತಾಗುವ ರೂಪಕ. ಹುಟ್ಟು- ಸಾವುಗಳ ಮಧ್ಯೆ ಬದುಕಿನ ಸ್ಥಿತಿಸ್ಥಾಪಕತೆಗೆ ಕಾರಕ… ಹೀಗೆ ದೇವರು ಮತ್ತು ದೇವರ ಅಸ್ತಿತ್ವ ಮಾನವ ಪ್ರಜ್ಞೆಯಲ್ಲಿ ನಿಂತ ಬಗೆಯನ್ನು ಕವಿ ಇಲ್ಲಿ ಭಾವಿಸಿದ ಮತ್ತು ಭಾಷ್ಯೀಕರಿಸಿದ ಬಗೆ ವಿಶಿಷ್ಟವಾಗಿದೆ. ಕವಿಗೆ ಅಭಿನಂದನೆಗಳು.

  3. ನವೀನ್ ಕುಮಾರ್, ಬೆಟಗೇರಿ
    Feb 5, 2026 Reply

    ನಿಜ, ಸುಳ್ಳು ಎರಡೂ ಆಗಿರುವುದರಿಂದಲೇ ಆ ದೇವರು ಮನುಷ್ಯನ ಹಳಬಂಡ ಕನಸು, ಕವನ ಚೆನ್ನಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಒಂದಾಗಿ ನಿಂತೆ…
ಒಂದಾಗಿ ನಿಂತೆ…
April 6, 2024
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
ಹಳಕಟ್ಟಿಯವರ ಸ್ವಚರಿತ್ರೆ: ಕೆಲವೊಂದು ಟಿಪ್ಪಣಿಗಳು
July 4, 2021
ಕ್ವಾಂಟಮ್ ಮೋಡಿ
ಕ್ವಾಂಟಮ್ ಮೋಡಿ
November 9, 2021
ಜಂಗಮಕ್ಕೆರೆದರೆ ಸ್ಥಾವರ ನೆನೆಯಿತ್ತು
ಜಂಗಮಕ್ಕೆರೆದರೆ ಸ್ಥಾವರ ನೆನೆಯಿತ್ತು
June 14, 2024
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
December 6, 2020
ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
June 5, 2021
ಒಳಗಣ ಮರ
ಒಳಗಣ ಮರ
March 12, 2022
ಸಂಸ್ಕೃತ ಕೃತಿಗಳು
ಸಂಸ್ಕೃತ ಕೃತಿಗಳು
October 10, 2023
ಬಯಲಾದ ದೇವರು
ಬಯಲಾದ ದೇವರು
January 15, 2026
Copyright © 2026 Bayalu