Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕುರುಹೇ ಬಯಲು
Share:
Poems February 16, 2026 ಜ್ಯೋತಿಲಿಂಗಪ್ಪ

ಕುರುಹೇ ಬಯಲು

ದೇವರಿಗೆ ಕುರುಹು ಇಲ್ಲ ಕುರುಹುವಿಗೆ ದೇವರು ಉಂಟು

ಬೆರಳು ಮಡಿಚಿದರೆ ನಾನು ಬೆರಳು ಬಿಚ್ಚಿದರೆ ನೀನು

ಹೆಜ್ಜೆ ಹೆಜ್ಜೆಯಲಿ ಸದ್ದಿಲ್ಲದ ನಡೆ
ಬಿಲ್ಲು ಇಲ್ಲದ ಬಾಣ ಮುಟ್ಟೀತೇ ಗುರಿ

ಕೆರೆಯ ದಡದ ನೀರ ಅಂಚಿನಲಿ ಕಾಯುವ ಹಕ್ಕಿ
ಹಸಿವು ಇಲ್ಲದೆ ಹಾರೀತೇ…

ಕಂಬದ ಮೇಲೆ ಕುಳಿತಿದೆ ಹದ್ದು

ಕಣ್ಣ ಹಸಿವಿಗೆ ಕಂಡ ಕಂಡ ಕುರುಹುಗಳೆಲ್ಲಾ ದೇವರೇ
ತೀಡಬಲ್ಲೆನೇ ಈ ಕುರುಹುವಿನ ಡೊಂಕು

ಕಾಯದ ಹಸಿವಿಗೆ ಅನ್ನವೇ ಕುರುಹು
ಕಣ್ಣ ಹಸಿವಿಗೆ ಈ ದೇವರೇ ಅನ್ನ

ಈ ನೆಲಕಂಟದ ಬಯಲಿಗೆ ಕುರುಹೇ …
ಈ ಬಯಲಿಗಂಟಿರುವ ನೆಲಕೆ ಕುರುಹೇ ಬಯಲು.

Previous post ಗಜಲ್…
ಗಜಲ್…
Next post ನಿನ್ನದೊಂದು ಸ್ಪರ್ಶ
ನಿನ್ನದೊಂದು ಸ್ಪರ್ಶ

Related Posts

ನದಿಯನರಸುತ್ತಾ…
Share:
Poems

ನದಿಯನರಸುತ್ತಾ…

October 6, 2020 ಜ್ಯೋತಿಲಿಂಗಪ್ಪ
ಜ್ಞಾನವೆಂಬುದೇನು? ಮನೋ ಭೇದ. -ಅಲ್ಲಮ ನಾನು ಹುಟ್ಟುವಾಗ ಹೇಳಿ ಬಂದೆನೇ ಸಾಯುವಾಗಲೂ ಅಷ್ಟೇ ಬದುಕು ಹೇಳದು ಏನೂ ಈ ಕಡಲಲಿ ಕಳೆದಿರುವ ನದಿ ಹುಡುಕುತಿರುವೆ ಹುಡುಕುತಿರುವ ನದಿ...
ಗಂಟಿನ ನಂಟು
Share:
Poems

ಗಂಟಿನ ನಂಟು

November 7, 2020 ಕೆ.ಆರ್ ಮಂಗಳಾ
ಕಣ್ಣು ಮುಂಜಾಗಿದ್ದವೋ ಬೆಳಕು ಸಾಲದಾಗಿತ್ತೋ ನೂಲುವಾಗ ಗೊತ್ತಾಗಲೇ ಇಲ್ಲ ಎಂಥ ಸಿಕ್ಕುಗಳು ಅಂತೀರಿ! ನೇಯ್ಗೆಯ ತುಂಬೆಲ್ಲಾ ಗಂಟಿನುಂಡೆಗಳು ಅಹಮಿಕೆಗೆ ಆಕ್ರೋಶದ ಗಂಟು ಆಕ್ರೋಶಕೆ...

Comments 3

  1. ಭಾಗ್ಯಾ ವಿಜಯ್
    Feb 19, 2026 Reply

    ಕವನದ ಒಂದೊಂದು ಸಾಲೂ ಒಂದೊಂದು quotes ಇದ್ದ ಹಾಗಿವೆ. ಓದಲು ಏನೋ ಸೊಗಸು, ಅರ್ಥ ಬಲು ಆಳ.

    • GH JYOTILINGAPPA
      Feb 24, 2026 Reply

      ನಿಮ್ಮ ಓದಿಗೆ ಧನ್ಯವಾದಗಳು

  2. ಸುರೇಶ್ ಬಾಬು
    Feb 24, 2026 Reply

    ಕುರುಹನ್ನು, ಅರುಹನ್ನು ಎರಡನ್ನೂ ಬಯಲಾಗಿಸಿದ ಶರಣರ ಸಾರ ಈ ಕವನದಲ್ಲಿದೆ.🙏

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಯುದ್ದವೋ… ಶಾಂತಿಯೋ…
ಯುದ್ದವೋ… ಶಾಂತಿಯೋ…
April 5, 2026
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
October 19, 2025
ವಚನಗಳಲ್ಲಿ ಶಿವ
ವಚನಗಳಲ್ಲಿ ಶಿವ
September 4, 2018
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
ಪಾದಪೂಜೆ- ಪಾದೋದಕಗಳ ಪ್ರಸ್ತುತತೆ
April 29, 2018
WHO AM I?
WHO AM I?
June 17, 2020
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
ಸ್ವಾಮಿಗಳು ಮತ್ತು ಭಕ್ತ ಹಿತಚಿಂತನೆ
March 17, 2021
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
ಘನಲಿಂಗಿ ದೇವರು ಮತ್ತು ವಚನ ಇತಿಹಾಸ
January 7, 2022
ಮುಕ್ತಾಯಕ್ಕ- ಅಲ್ಲಮರ ಸಂವಾದ
ಮುಕ್ತಾಯಕ್ಕ- ಅಲ್ಲಮರ ಸಂವಾದ
October 13, 2022
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
March 12, 2022
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
June 3, 2019
Copyright © 2026 Bayalu