Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಿನ್ನದೊಂದು ಸ್ಪರ್ಶ
Share:
Poems February 16, 2026 ಕೆ.ಆರ್ ಮಂಗಳಾ

ನಿನ್ನದೊಂದು ಸ್ಪರ್ಶ

ಅಷ್ಟು ಸಲೀಸಲ್ಲಾ ಬಿಡು
ನಿನ್ನ ಕೈ ಹಿಡಿಯುವುದು
ಎದುರಿದ್ದೂ ಅವಿತಿರುವ
ನಿನ್ನಿರುವಿಗೆ ಅಡಿಯಿಡುವುದು…

ಇಲ್ಲೇ, ಇದೇ ಗಳಿಗೆಯಲ್ಲೇ…
ಈ ಕ್ಷಣವೇ…
ನೀನು ಪ್ರತ್ಯಕ್ಷವಂತೆ!
ಯಾರಾದರೂ ಬಂದಾರೆಯೇ
ಎಂದು ಕೈಚಾಚಿ
ಕಾಯುತ್ತಿರುವೆಯಂತೆ
ಗುರು ಹೀಗೆ ಹೇಳಿದಾಗ
ಎಷ್ಟು ಸುಲಭವೆಂದೆಣಿಸಿದ್ದೆ…

ಅಂದಿನಿಂದ ದಿನಬೆಳಗಾದರೆ
ನಿನ್ನ ಮುಟ್ಟುವ
ಒಂದೇ ಕೋರಿಕೆ
ಹಗಲು-ರಾತ್ರಿ
ನಿನ್ನದೊಂದು ಸ್ಪರ್ಶಕೆ
ಹಾತೊರೆವ ಮನಸ್ಸೇ
ನಿನ್ನ ತಲುಪದಂತೆ
ನೋಡಿಕೊಳ್ಳುವ ಸಂಚ
ತಿಳಿದು ಕಂಗಾಲಾದೆ!
ಹಂಬಲಿಸುವ ಮನದ
ಹುನ್ನಾರಗಳು ಒಂದೇ ಎರಡೇ…

ನೋಟದ ಮಿತಿಗೆ
ತೆರೆದು ನಿಂತ ಆಗಸವೂ
ಕಂಗಳೊಳಗೆ ಇಳಿಯದು!
ಕೇಳುವ ಮಿತಿಗೆ
ಮೌನದ ಭಾಷೆ ಕೇಳಿಸದು!
ಬಿಡದ ವಾಸನೆಗಳ ನಂಟು
ಬಗಲ ಮುಳ್ಳಾಗಿಹುದು!

ನಿನ್ನೂರ ನಕ್ಷೆ ಹಿಡಿದು
ಉಸಿರ ಎಳೆಯಗುಂಟ
ಇಳಿದುಬರುವಾಗ
ಮಾಯಗಾರನಂತೆ ನುಗ್ಗಿ
ಮೌನಕೆಡಸಿ ಮಾತಿಗೆಳೆದು
ದಿಕ್ಕುತಪ್ಪಿಸುವ ಚಿತ್ತದ ಕೇಡ
ಹೇಳಲಿ ಯಾರಿಗೆ?

ನಿನ್ನ ಜಾಡ ಹಿಡಿದು
ಎಚ್ಚರದಿ ನಡೆವಾಗಲೂ
ಯಾವುದೋ ನೆನಪುಗಳು
ಯಾರದೋ ಸದ್ದುಗಳು
ಒಂದರೊಳೊಂದು ತೂರಿ
ಎತ್ತೊಯ್ಯುವವು ದೂರಕೆ… ಬಹು ದೂರಕೆ…
ಅಂಗುಲಂಗುಲಕೆ ಸೀಳುವ
ಅಸಂಖ್ಯ ಹಾದಿಗಳತ್ತ
ಹೊರಹೊರಳಿ ದಣಿವವು ಕಾಲುಗಳು…
ಮತ್ತೆ ಆ ಗವ್ವನೆಯ ಕತ್ತಲೆ
ಗಪ್ಪೆಂದು ಅಮರಿಕೊಳ್ಳುವುದು.

ಅತ್ತ ತನ್ನ ಅಸ್ತಿತ್ವಕ್ಕಾಗಿ
ಚಡಪಡಿಸುವ ಮನಸೇ
ಶೂನ್ಯವಾಗಲೂ ಬಯಸುತ್ತಿದೆ…
ಇತ್ತ ತನ್ನ ಕೋಟಿ ರೂಪಗಳ
ತಾನೇ ಕೊಲ್ಲಲು
ಹಿಂದೇಟೂ ಹಾಕುತ್ತದೆ…
ಭವದೊಳು ಮುಳುಗಿಸಿ
ಬೆಪ್ಪಾಗಿ ನಿಲ್ಲುತ್ತದೆ…

ಬಲ್ಲೆ ನಾನು
ನನ್ನಿರುವಿಕೆಯಲ್ಲಿಯೇ
ನೀನಿರುವ ಗುಟ್ಟು!
ಏನ ಮಾಡಲಿ ಹೇಳು
ಈಜು ಬಲ್ಲವಳಲ್ಲಾ
ಒಳಸುಳಿವುಗಳ ಹರಿವು
ಅರಿತವಳಲ್ಲಾ
ಗುರುವಿನಂಗಿಯ ಚುಂಗ ಹಿಡಿದು
ಮಹಾಮೌನದ ಸಂಜ್ಞೆಗೆ
ಶರಣು ಬಂದಿರುವೆ.

Previous post ಕುರುಹೇ ಬಯಲು
ಕುರುಹೇ ಬಯಲು
Next post ನಾಥರು ಮತ್ತು ಶರಣರು-2
ನಾಥರು ಮತ್ತು ಶರಣರು-2

Related Posts

ನಿನ್ನೆ-ಇಂದು
Share:
Poems

ನಿನ್ನೆ-ಇಂದು

May 10, 2022 ಕೆ.ಆರ್ ಮಂಗಳಾ
ನಿನ್ನೆ- ಬೆಳಗ ಕಾಣದ ಮಸುಕು ಚಿತ್ತದ ಜಾಡ್ಯ, ಮರೆವಿನ ಬಾಧೆ ಬೆಂಬಿಡದ ಕಾಮನೆಗಳಲಿ ಬಂಧಿಯಾಗಿದೆ ಜೀವ ಬಿಡಿಸು ಗುರುವೆ ಇದರ ಪ್ರವರ… ಇಂದು- ಬೆಳಕ ಕೊಡುತಿಹ ಆ ದೀಪ ಯಾವುದಕೆ...
ಮೊಟ್ಟೆ- ಗೂಡು
Share:
Poems

ಮೊಟ್ಟೆ- ಗೂಡು

April 11, 2025 ಜ್ಯೋತಿಲಿಂಗಪ್ಪ
ಮರೆವೆಯ ಗೂಡಲಿ ಒಂದು ಮರಿ ಆಸೆಯ ಮೊಟ್ಟೆ ಗೂಡು ಸಣ್ಣದು ಮೊಟ್ಟೆ ದೊಡ್ಡದು ಮೊಟ್ಟೆ ಬಿರಿದರೆ ಗೂಡು ಸಾಯುವುದು ಗೂಡು ಸಾಯದಿರೆ ಮೊಟ್ಟೆ ಸಾಯುವುದು ಏನು ಮರೆವೆಯೋ ಸೀಸೆಯು ಒಡೆಯದೆ...

Comments 2

  1. K S Mallesh
    Feb 17, 2026 Reply

    ನಿನ್ನದೊಂದು ಸ್ಪರ್ಷ ಒಳ್ಳೆಯ ಕವನ. ಕವನ ಎನ್ನುವುದಕ್ಕಿಂತಲೂ ಒಂದು ನಿಜ ಹಂಬಲಹೊತ್ತು ಹುಡುಕಾಡುತ್ತಿರುವ ವ್ಯಕ್ತಿಯೊಬ್ಬರ ಆತ್ಮಗಾಥೆ. ಬಿಡದ ಲೌಕಿಕದ ಸೆಳೆತಗಳಲ್ಲಿ ಸಿಲುಕಿ ಬೇಸತ್ತು  ಅಲೌಕಿಕಗಳೆಡೆಗೆ ಕಾತರಿಸುವ ಮನಕ್ಕೆ ಕಿಂಚಿತ್ ಅನುಗ್ರಹ ಸ್ಪರ್ಶ ರೂಪದಲ್ಲಿ
    ಸಿಕ್ಕರೆ ಸಾಕೆನಿಸಿದೆ.  ಸರಳ ಪದಗಳಲ್ಲಿ ತುಂಡು ಸಾಲುಗಳಲ್ಲಿ ಭಾವನೆಗಳ ಹೂಗೊಂಚಲಿದೆ. ನಿಮಗೆ ನಮನಗಳು

  2. ಜ್ಯೋತಿಲಿಂಗಪ್ಪ, ಬೆಂಗಳೂರು
    Feb 24, 2026 Reply

    ಸ್ಪರ್ಶ…ಒಳ್ಳೆಯ ಸ್ಪರ್ಶ..ಓದು
    ತುಂಬಾ ಮುದ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಪರಿಪೂರ್ಣತೆಯೆಡೆಗೆ ಪಯಣ
ಪರಿಪೂರ್ಣತೆಯೆಡೆಗೆ ಪಯಣ
April 29, 2018
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
ವಚನಗಳು ಮತ್ತು ಹಿಂದುಸ್ಥಾನಿ ಸಂಗೀತ
April 6, 2024
ಕಾಲ ಎಲ್ಲಿದೆ?
ಕಾಲ ಎಲ್ಲಿದೆ?
January 7, 2022
ದಂಪತಿಗಳಲ್ಲಿ ಅನುಭಾವ ಚಿಂತನ
ದಂಪತಿಗಳಲ್ಲಿ ಅನುಭಾವ ಚಿಂತನ
March 12, 2022
ನೀರಬೊಂಬೆಗೆ ನಿರಾಳದ ಗೆಜ್ಜೆ
ನೀರಬೊಂಬೆಗೆ ನಿರಾಳದ ಗೆಜ್ಜೆ
April 29, 2018
ಸೂರ್ಯ
ಸೂರ್ಯ
January 8, 2023
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
September 10, 2022
ಕ್ವಾಂಟಮ್ ಮೋಡಿ
ಕ್ವಾಂಟಮ್ ಮೋಡಿ
November 9, 2021
ಹೀಗೊಂದು ಸಂವಾದ…
ಹೀಗೊಂದು ಸಂವಾದ…
April 6, 2023
ಗುರುವೆ ಸುಜ್ಞಾನವೇ…
ಗುರುವೆ ಸುಜ್ಞಾನವೇ…
September 7, 2021
Copyright © 2026 Bayalu