Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅರ್ಥ – ವ್ಯರ್ಥ
Share:
Poems April 5, 2026 ಜಬೀವುಲ್ಲಾ ಎಂ.ಅಸದ್

ಅರ್ಥ – ವ್ಯರ್ಥ

ಮುಗಿಲಿಗೆ ಜಿಗಿದ ಪಾದ
ಮಸ್ತಕದ ಕಂದಕದಲ್ಲಿ ಚಿಗುರಿ
ಶತಮಾನಗಳ ಮೊಳೆ ಹೊಡೆದ
ಬಿಸಿ ನೆತ್ತರು ಹೆಪ್ಪುಗಟ್ಟಿದ ಗುರುತು
ಕಾಲದ ಸಹಿಯಾಗಿ ಬದಲಾಗಿ
ಉಸಿರ ಗೊರಿಯೊಳಗೆ ಬೆರೆತು
ಹೆಜ್ಜೆ ಗುರುತುಗಳಲ್ಲಿ ಕಣ್ಣುಗಳು
ಬುಗುರಿಯಾಗಿ ಗರಗರ ತಿರುಗಿ
ಕುರುಡು ದಾರಿಯ ಅರಸಿ

ನೆರಳಿಗೆ ಬಿದ್ದ ಬೆಂಕಿ
ಯ ಆರಿಸುವ ಯತ್ನದಲಿ
ಆತ್ಮವೂ ಧಘಧಗಿಸಿ ಉರಿದು
ಆವಿಯಾಗಿ ಕರಗಿ
ಅನಂತತೆಯ ಶೂನ್ಯದಲಿ

ಹೊಕ್ಕುಳ ಬಳ್ಳಿ ಸುತ್ತಿದ ನಾಲಿಗೆ
ಚಡಪಡಿಸುತಿದೆ ಒಂದೇ ಸಮನೆ
ದಿಕ್ಕಿಲ್ಲದ ದೃಷ್ಟಿ ಗೋಡೆಗೆ ಬಡಿದು
ನೆಲಕೆ ಬಿದ್ದು ಹೊರಳಾಡಿ
ಅತ್ತು

ಕಂಬನಿಗಳ ಕನ್ನಡಿಯ ಯೋಮದಲ್ಲಿ
ಅಲೆಮಾರಿ ಒಂಟಿ ಹಕ್ಕಿಯ
ಅನಾಥ ಸದ್ದು ಮೊಳಗಿ
ರೆಕ್ಕೆ ಮುರಿದ ನೋವು ಹೂ ಮುಡಿದು
ಮಡಿದ ಹೃದಯದ ಮಣ್ಣಲ್ಲಿ ಹರಿದು
ಅಂತರಂಗದ ಕಣಿವೆಯಲಿ ನದಿಯಾಗಿ ಉಕ್ಕಿ
ಕಾಣದಾಯಿತು ಕಡಲು ಬಿಕ್ಕಿ

ಎಲ್ಲೊ ಬಿದ್ದಿದೆ ಆ ಮುರಿದ ಮರದ ಕಾಲು
ಸೂರ್ಯ ಸಾಯುವ ಈ ಸರಿಹೊತ್ತಲಿ
ಹೊತ್ತಿಸದ ದೀಪದ ನೆರಳನು
ಸುಮ್ಮನೆ ಹುಡುಕದಿರು ನೀನು

ಕತ್ತಲ ಬೀಜದ ಮೊಳಕೆಯ ಮಿಂಚು
ಹೊಂಚು ಹಾಕುತಿದೆ
ಕಟ್ಟಿದ ಅರಿವೆಯ ಬಿಡಿಸಿ
ಅರಿವಿನ ಕಂಗಳ ಮಿಡಿಸಿ
ಕಾಣು, ಕಾಣುವುದೇನು?
ಕಂಡರೆ, ಕಂಡಿಲ್ಲ ನೀನು
ಏನನ್ನೂ…

Previous post ಯುದ್ದವೋ… ಶಾಂತಿಯೋ…
ಯುದ್ದವೋ… ಶಾಂತಿಯೋ…
Next post ನನ್ನನ್ನು ಕ್ಷಮಿಸು
ನನ್ನನ್ನು ಕ್ಷಮಿಸು

Related Posts

ಅರಿವು-ಮರೆವಿನಾಟ
Share:
Poems

ಅರಿವು-ಮರೆವಿನಾಟ

August 8, 2021 ಕೆ.ಆರ್ ಮಂಗಳಾ
ನೀನರಿಯೆ ನಾನಾರೆಂದು ನಾಮರೆತೆ ನೀನಾರೆಂದು ನನ್ನಲ್ಲೇ ನೀನಿದ್ದರೂ ನಿನ್ನಿಂದಲೇ ನಾ ಬದುಕಿದ್ದರೂ… ಇದೇ ಅಲ್ಲವೇ ವಿಸ್ಮಯ? ನಾ-ನೀನೆಂಬ ಉಭಯವೇ ಇಲ್ಲ ಭ್ರಮೆಗೆ ಬಲಿಯಾಗದೆ ತಿಳಿದು...
ಹಣತೆ ಸಾಕು
Share:
Poems

ಹಣತೆ ಸಾಕು

September 14, 2024 ಜ್ಯೋತಿಲಿಂಗಪ್ಪ
ಬೆಳಕ ನೋಡಲಾಗದ ಕಣ್ಣು ದೀಪ ಹಚ್ಚಿದರೆ ಕಣ್ಣು ಕತ್ತಲು ಹಚ್ಚದಿರೆ ಹೃದಯ ಕತ್ತಲು ದೀಪ ಬೆಳಗಿಸುವ ಕಷ್ಟ ಕತ್ತಲೆಂಬುದು ಕತ್ತಲಾಗದು ಬೆಳಕೆಂಬುದು ಬೆಳಕಾಗದು ಏನೂ ಕೂಡಿಡದೆ...

Comments 1

  1. ಸಿದ್ದು ಪಾಟೀಲ್, ಗೌರಿಬಿದನೂರು
    Apr 9, 2026 Reply

    ಕಾಣುತ್ತಿರುವುದು, ಕಂಡೂ ಕಾಣದಿರುವುದು- ಇವುಗಳ ತಾಕಲಾಟದಲ್ಲಿ ಅರ್ಥಗಳು ವ್ಯರ್ಥಗಳಾಗಿ, ವ್ಯರ್ಥವೆಂದವುಗಳು ಅರ್ಥವನ್ನು ಹುದುಗಿಸಿಕೊಂಡ ಪರಿ ಈ ಜಗ, ಈ ಜೀವನ. ಸೊಗಸಾದ ಕವನ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
ಶರಣರ ಅಭಿವ್ಯಕ್ತಿ ಸ್ವಾತಂತ್ರ್ಯ
April 29, 2018
ಭವವೆಂಬ ರೋಗಕ್ಕೆ ಲಿಂಗವೆಂಬ ಮದ್ದು
ಭವವೆಂಬ ರೋಗಕ್ಕೆ ಲಿಂಗವೆಂಬ ಮದ್ದು
January 4, 2020
ಸೋತ ಅಂಗೈಗಳಿಗಂಟಿ…
ಸೋತ ಅಂಗೈಗಳಿಗಂಟಿ…
October 19, 2025
ಅಲ್ಲೀ ಸಾಹೇಬರು
ಅಲ್ಲೀ ಸಾಹೇಬರು
February 16, 2026
ದಾಸೋಹ ತತ್ವ
ದಾಸೋಹ ತತ್ವ
January 10, 2021
ವಚನಗಳಲ್ಲಿ ಶಿವ
ವಚನಗಳಲ್ಲಿ ಶಿವ
September 4, 2018
ಬಯಲಾದ ದೇವರು
ಬಯಲಾದ ದೇವರು
January 15, 2026
ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…
March 9, 2023
ಅನುಭವ ಮಂಟಪದ ಸುತ್ತ (ಭಾಗ-1)
ಅನುಭವ ಮಂಟಪದ ಸುತ್ತ (ಭಾಗ-1)
January 15, 2026
ಬೌದ್ಧ ಕಾವ್ಯದೃಷ್ಟಿ
ಬೌದ್ಧ ಕಾವ್ಯದೃಷ್ಟಿ
May 8, 2024
Copyright © 2026 Bayalu