Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಇದ್ದ ಅಲ್ಲಮ ಇಲ್ಲದಂತೆ
Share:
Poems April 29, 2018 ಡಾ. ಶಶಿಕಾಂತ ಪಟ್ಟಣ

ಇದ್ದ ಅಲ್ಲಮ ಇಲ್ಲದಂತೆ

ಕಲ್ಯಾಣ ಹಣತೆ ಭಕ್ತಿ ರಸ ತೈಲ
ಅನುಭವ ಅಬ್ಬರ ಚಿಂತನೆ
ಹೊರಗೆ ದುಡಿ ಮದ್ದಳೆ ಸದ್ದು
ಒಳಗೊಳಗೆ ಮಿಡಿವ ತಂತಿ.

ಕಾಣಲಾಗದ ತೋರಬಾರದ
ಮಹಾ ಘನವ ತೋರಿ
ಅರಿವು ಮರೆಯ ಜಾಣ
ಅಂಧ ಮೌಢ್ಯಕೆ ಬಾಣ.

ಜಗದ ಭೂತಲದ ಕಾಲಜ್ಞಾನ
ಶಬ್ದದೊಳಗಿನ ಮಹಾ ನಿಶಬ್ದ
ಬೀಜದೊಳಗಿನ ಉಲಿವ ಮರ
ವ್ಯೋಮ ಕಾಯದ ಬಯಲು.

ಮಂತ್ರ ಗೌಪ್ಯದ ಮುನ್ನುಡಿ
ಅನುಭೂತಿಯ ಕನ್ನಡಿ
ಅಲ್ಲಾನ ಆಗಮನ ಲಾಮಾನ ನಿರ್ಗಮನ
ಮಧ್ಯ ಅಲ್ಲಮ ನಿನ್ನ ಜನನ.

ಜ್ಞಾನದ ಚಿಜ್ಜ್ಯೋತಿ ವೈರಾಗ್ಯದ ಮೂರುತಿ
ಕಲ್ಯಾಣದ ಕೀರುತಿ.
ಚರ್ಚೆ ಗೊಷ್ಠಿ ವಾದ, ಶೂನ್ಯ ಪೀಠದ ತೇಜ
ಇದ್ದ ಅಲ್ಲಮ ಇಲ್ಲದಂತೆ…

Previous post ನೆಲದ ನಿಧಾನ
ನೆಲದ ನಿಧಾನ
Next post ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು

Related Posts

ಭಾರ
Share:
Poems

ಭಾರ

October 6, 2020 ಕೆ.ಆರ್ ಮಂಗಳಾ
ಕಳೆದು ಹೋದ ದಿನಗಳ ಭಾರ ಉಳಿಸಿಕೊಂಡ ನೆನಪಿನ ಭಾರ ಕಾಣದಿರುವ ಕ್ಷಣಗಳ ಭಾರ ಕಲ್ಪನೆಗಳ ಹೆಣಿಕೆಯ ಭಾರ… ಹೊರಲಾರೆ ತಂದೆ ಈ ತಲೆಭಾರ ಹೊತ್ತು ನಡೆಯಲಾರೆ ಮುಂದೆ… ಹಳಸಿಹೋದ ವಿಷಯದ ಭಾರ...
ಬಯಲಾಟ
Share:
Poems

ಬಯಲಾಟ

March 17, 2021 ಜ್ಯೋತಿಲಿಂಗಪ್ಪ
ಆ ಮನೆ ಬಿಟ್ಟು ಬಂದಿರುವೆ ಎಂಬುದು ಈಗಲೂ ಇದೆ ಆ ಮನೆ ಇದೆಯೇ ಎಂಬುದು ಈಗಲೂ ಇದೆ ನಿಜ ಸುಳ್ಳು ಎಂಬುದು ನನ್ನ ಹಿತ ಆ ಮನೆ ಸಮುದ್ರ ದಾಟಲು ಹಾರುವ ಚಿಟ್ಟೆ ಹುಡುಕುತಿರುವೆ ಇನ್ನೂ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗೇಣು ದಾರಿ
ಗೇಣು ದಾರಿ
July 10, 2023
ಶರಣ- ಎಂದರೆ…
ಶರಣ- ಎಂದರೆ…
March 6, 2020
ಲಿಂಗಾಯತರು ಮತ್ತು ಬಸವತತ್ವ
ಲಿಂಗಾಯತರು ಮತ್ತು ಬಸವತತ್ವ
May 10, 2023
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
February 7, 2021
ಬರಿದಾಗುವ ಬೆರಗು
ಬರಿದಾಗುವ ಬೆರಗು
February 6, 2025
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
January 15, 2026
ಸನಾತನ ಧರ್ಮ
ಸನಾತನ ಧರ್ಮ
October 10, 2023
ಕಾಣಿಕೆಯ ರೂಪದ ಕಪ್ಪುಹಣ
ಕಾಣಿಕೆಯ ರೂಪದ ಕಪ್ಪುಹಣ
April 29, 2018
ತತ್ವಪದಗಳ ಗಾಯನ ಪರಂಪರೆ
ತತ್ವಪದಗಳ ಗಾಯನ ಪರಂಪರೆ
February 7, 2021
ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
November 7, 2020
Copyright © 2026 Bayalu